Advertisement
ಅನುಕ್ರಮ

ಹೊಸರುಚಿ | ಎಳೆಯ ಹಲಸಿನ ಕಾಯಿ ಬಜ್ಜಿ – ಮನೆಯಲ್ಲೇ ಸವಿಯುವ ಕ್ರಿಸ್ಪಿ ಸ್ನ್ಯಾಕ್

Share

ಯಾವಾಗಲೂ ಬಿಸಿ ಬಿಸಿ ಬಜ್ಜಿ ತಿನ್ನೋದು ಒಂದು ವಿಶೇಷ ಅನುಭವ. ಅದರಲ್ಲಿ ಎಳೆಯ ಹಲಸಿನ ಕಾಯಿ ಬಳಸಿ ಮಾಡುವ ಬಜ್ಜಿ ಒಂದು ವಿಶಿಷ್ಟ ರುಚಿ ನೀಡುತ್ತದೆ. ಇದು ಆರೋಗ್ಯಕರವೂ ಆಗಿದ್ದು, ಮನೆಯಲ್ಲೇ ಸುಲಭವಾಗಿ ತಯಾರಿಸಬಹುದು.

Advertisement

ಬೇಕಾಗುವ ಸಾಮಗ್ರಿಗಳು:

  • ಎಳೆಯ ಹಲಸಿನ ಕಾಯಿ (ಕಟ್ ಮಾಡಿ ಕ್ಲೀನ್ ಮಾಡಿದದ್ದು)
  • ಕಡಲೆ ಹಿಟ್ಟು – 1 ಕಪ್
  • ಅಕ್ಕಿ ಹಿಟ್ಟು – 3 ಚಮಚ
  • ಶೇಂಗಾ – 2 ಚಮಚ
  • ಕೊತ್ತಂಬರಿ ಬೀಜ – 1 ಚಮಚ
  • ಜೀರಿಗೆ – ಸ್ವಲ್ಪ
  • ಮೆಣಸಿನ ಪುಡಿ – 1 ಚಮಚ
  • ಅರಿಶಿನ ಪುಡಿ – ¼ ಚಮಚ
  • ಹಿಂಗು – ಸ್ವಲ್ಪ
  • ಉಪ್ಪು – ರುಚಿಗೆ ತಕ್ಕಷ್ಟು
  • ಎಣ್ಣೆ – ಕರಿಯಲು

ಮಾಡುವ ವಿಧಾನ

ಹಲಸಿನ ಕಾಯಿ ತಯಾರಿ

  • ಎಳೆಯ ಹಲಸಿನ ಕಾಯಿಯನ್ನು ಕಟ್ ಮಾಡಿ ಚೆನ್ನಾಗಿ ಕ್ಲೀನ್ ಮಾಡಿ.
  • ನಂತರ ಬಿಸಿ ನೀರಿಗೆ ಹಾಕಿ ಸ್ವಲ್ಪ ಮೃದುವಾಗುವವರೆಗೆ ಬೇಯಿಸಿ ತೆಗೆದುಕೊಳ್ಳಿ.

ಮಸಾಲಾ ತಯಾರಿ

  • ಶೇಂಗಾವನ್ನು ಫ್ರೈ ಮಾಡಿ ತರಿತರಿಯಾಗಿ ರುಬ್ಬಿಕೊಳ್ಳಿ.
  • ಕೊತ್ತಂಬರಿ ಬೀಜ ಮತ್ತು ಜೀರಿಗೆ ಫ್ರೈ ಮಾಡಿ ರುಬ್ಬಿಕೊಳ್ಳಿ.

ಹಿಟ್ಟು ಕಲೆಸುವುದು

  • ಒಂದು ಪಾತ್ರೆಗೆ ಕಡಲೆ ಹಿಟ್ಟು, ಅಕ್ಕಿ ಹಿಟ್ಟು ಮತ್ತು ರುಬ್ಬಿದ ಮಿಶ್ರಣ ಹಾಕಿ.
  • ಇದಕ್ಕೆ ಉಪ್ಪು, ಮೆಣಸಿನ ಪುಡಿ, ಅರಿಶಿನ ಪುಡಿ, ಹಿಂಗು ಸೇರಿಸಿ.
  • ನೀರು ಹಾಕಿ ಮೃದುವಾದ ಹಿಟ್ಟು ತಯಾರಿಸಿಕೊಳ್ಳಿ (ತುಂಬಾ ತೆಳ್ಳಗೆ ಮಾಡಬೇಡಿ).

ಬಜ್ಜಿ ತಯಾರಿ

  • ಹಲಸಿನ ಕಾಯಿ ತುಂಡುಗಳನ್ನು ಹಿಟ್ಟಿನಲ್ಲಿ ಅದ್ದಿ.
  • ಕಾದ ಎಣ್ಣೆಯಲ್ಲಿ ಹಾಕಿ ಕೆಂಪಾಗುವವರೆಗೆ ಕರಿಯಿರಿ.

ಸರ್ವಿಂಗ್ ಸಲಹೆ :  ಬಿಸಿ ಬಿಸಿ ಬಜ್ಜಿಯನ್ನು ಈರುಳ್ಳಿ ಮತ್ತು ಸಾಸ್ ಜೊತೆ ಸವಿದರೆ ಇನ್ನೂ ರುಚಿ ಹೆಚ್ಚುತ್ತದೆ! ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Tender jackfruit bajji is a crispy and delicious snack made by coating tender jackfruit pieces in a spiced gram flour batter and deep frying them. It is a perfect evening snack, especially during rainy weather.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

12 hours ago

ರಾಜ್ಯದ ಒಂದೆರಡು ಸ್ಥಳಗಳಲ್ಲಿ ಮಳೆ – ಐದು ದಿನ ಬಿಸಿ ಹವೆಯ ಮುನ್ಸೂಚನೆ -ದೇಶದಾದ್ಯಂತ ತಾಪಮಾನ ಏರಿಕೆ

ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…

12 hours ago

ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ

ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…

21 hours ago

ರಕ್ಷಾ ಸ್ವರ್ಣಪ್ರಾಶನ | ಮಕ್ಕಳ ರೋಗ ನಿರೋಧಕ ಶಕ್ತಿಗೆ ವಿಶೇಷ ಔಷಧಿ

ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…

21 hours ago

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

1 day ago

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…

2 days ago