Advertisement
ಅನುಕ್ರಮ

ಹೊಸರುಚಿ | ಎಳೆಯ ಹಲಸಿನ ಕಾಯಿ ಬಜ್ಜಿ – ಮನೆಯಲ್ಲೇ ಸವಿಯುವ ಕ್ರಿಸ್ಪಿ ಸ್ನ್ಯಾಕ್

Share

ಯಾವಾಗಲೂ ಬಿಸಿ ಬಿಸಿ ಬಜ್ಜಿ ತಿನ್ನೋದು ಒಂದು ವಿಶೇಷ ಅನುಭವ. ಅದರಲ್ಲಿ ಎಳೆಯ ಹಲಸಿನ ಕಾಯಿ ಬಳಸಿ ಮಾಡುವ ಬಜ್ಜಿ ಒಂದು ವಿಶಿಷ್ಟ ರುಚಿ ನೀಡುತ್ತದೆ. ಇದು ಆರೋಗ್ಯಕರವೂ ಆಗಿದ್ದು, ಮನೆಯಲ್ಲೇ ಸುಲಭವಾಗಿ ತಯಾರಿಸಬಹುದು.

ಬೇಕಾಗುವ ಸಾಮಗ್ರಿಗಳು:

  • ಎಳೆಯ ಹಲಸಿನ ಕಾಯಿ (ಕಟ್ ಮಾಡಿ ಕ್ಲೀನ್ ಮಾಡಿದದ್ದು)
  • ಕಡಲೆ ಹಿಟ್ಟು – 1 ಕಪ್
  • ಅಕ್ಕಿ ಹಿಟ್ಟು – 3 ಚಮಚ
  • ಶೇಂಗಾ – 2 ಚಮಚ
  • ಕೊತ್ತಂಬರಿ ಬೀಜ – 1 ಚಮಚ
  • ಜೀರಿಗೆ – ಸ್ವಲ್ಪ
  • ಮೆಣಸಿನ ಪುಡಿ – 1 ಚಮಚ
  • ಅರಿಶಿನ ಪುಡಿ – ¼ ಚಮಚ
  • ಹಿಂಗು – ಸ್ವಲ್ಪ
  • ಉಪ್ಪು – ರುಚಿಗೆ ತಕ್ಕಷ್ಟು
  • ಎಣ್ಣೆ – ಕರಿಯಲು

ಮಾಡುವ ವಿಧಾನ

ಹಲಸಿನ ಕಾಯಿ ತಯಾರಿ

  • ಎಳೆಯ ಹಲಸಿನ ಕಾಯಿಯನ್ನು ಕಟ್ ಮಾಡಿ ಚೆನ್ನಾಗಿ ಕ್ಲೀನ್ ಮಾಡಿ.
  • ನಂತರ ಬಿಸಿ ನೀರಿಗೆ ಹಾಕಿ ಸ್ವಲ್ಪ ಮೃದುವಾಗುವವರೆಗೆ ಬೇಯಿಸಿ ತೆಗೆದುಕೊಳ್ಳಿ.

ಮಸಾಲಾ ತಯಾರಿ

  • ಶೇಂಗಾವನ್ನು ಫ್ರೈ ಮಾಡಿ ತರಿತರಿಯಾಗಿ ರುಬ್ಬಿಕೊಳ್ಳಿ.
  • ಕೊತ್ತಂಬರಿ ಬೀಜ ಮತ್ತು ಜೀರಿಗೆ ಫ್ರೈ ಮಾಡಿ ರುಬ್ಬಿಕೊಳ್ಳಿ.

ಹಿಟ್ಟು ಕಲೆಸುವುದು

  • ಒಂದು ಪಾತ್ರೆಗೆ ಕಡಲೆ ಹಿಟ್ಟು, ಅಕ್ಕಿ ಹಿಟ್ಟು ಮತ್ತು ರುಬ್ಬಿದ ಮಿಶ್ರಣ ಹಾಕಿ.
  • ಇದಕ್ಕೆ ಉಪ್ಪು, ಮೆಣಸಿನ ಪುಡಿ, ಅರಿಶಿನ ಪುಡಿ, ಹಿಂಗು ಸೇರಿಸಿ.
  • ನೀರು ಹಾಕಿ ಮೃದುವಾದ ಹಿಟ್ಟು ತಯಾರಿಸಿಕೊಳ್ಳಿ (ತುಂಬಾ ತೆಳ್ಳಗೆ ಮಾಡಬೇಡಿ).

ಬಜ್ಜಿ ತಯಾರಿ

  • ಹಲಸಿನ ಕಾಯಿ ತುಂಡುಗಳನ್ನು ಹಿಟ್ಟಿನಲ್ಲಿ ಅದ್ದಿ.
  • ಕಾದ ಎಣ್ಣೆಯಲ್ಲಿ ಹಾಕಿ ಕೆಂಪಾಗುವವರೆಗೆ ಕರಿಯಿರಿ.

ಸರ್ವಿಂಗ್ ಸಲಹೆ :  ಬಿಸಿ ಬಿಸಿ ಬಜ್ಜಿಯನ್ನು ಈರುಳ್ಳಿ ಮತ್ತು ಸಾಸ್ ಜೊತೆ ಸವಿದರೆ ಇನ್ನೂ ರುಚಿ ಹೆಚ್ಚುತ್ತದೆ! ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Tender jackfruit bajji is a crispy and delicious snack made by coating tender jackfruit pieces in a spiced gram flour batter and deep frying them. It is a perfect evening snack, especially during rainy weather.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

4 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

4 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

19 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago