Advertisement
ಅನುಕ್ರಮ

ಹೊಸರುಚಿ | ಎಳೆಯ ಹಲಸಿನ ಕಾಯಿ ಬಜ್ಜಿ – ಮನೆಯಲ್ಲೇ ಸವಿಯುವ ಕ್ರಿಸ್ಪಿ ಸ್ನ್ಯಾಕ್

Share

ಯಾವಾಗಲೂ ಬಿಸಿ ಬಿಸಿ ಬಜ್ಜಿ ತಿನ್ನೋದು ಒಂದು ವಿಶೇಷ ಅನುಭವ. ಅದರಲ್ಲಿ ಎಳೆಯ ಹಲಸಿನ ಕಾಯಿ ಬಳಸಿ ಮಾಡುವ ಬಜ್ಜಿ ಒಂದು ವಿಶಿಷ್ಟ ರುಚಿ ನೀಡುತ್ತದೆ. ಇದು ಆರೋಗ್ಯಕರವೂ ಆಗಿದ್ದು, ಮನೆಯಲ್ಲೇ ಸುಲಭವಾಗಿ ತಯಾರಿಸಬಹುದು.

ಬೇಕಾಗುವ ಸಾಮಗ್ರಿಗಳು:

  • ಎಳೆಯ ಹಲಸಿನ ಕಾಯಿ (ಕಟ್ ಮಾಡಿ ಕ್ಲೀನ್ ಮಾಡಿದದ್ದು)
  • ಕಡಲೆ ಹಿಟ್ಟು – 1 ಕಪ್
  • ಅಕ್ಕಿ ಹಿಟ್ಟು – 3 ಚಮಚ
  • ಶೇಂಗಾ – 2 ಚಮಚ
  • ಕೊತ್ತಂಬರಿ ಬೀಜ – 1 ಚಮಚ
  • ಜೀರಿಗೆ – ಸ್ವಲ್ಪ
  • ಮೆಣಸಿನ ಪುಡಿ – 1 ಚಮಚ
  • ಅರಿಶಿನ ಪುಡಿ – ¼ ಚಮಚ
  • ಹಿಂಗು – ಸ್ವಲ್ಪ
  • ಉಪ್ಪು – ರುಚಿಗೆ ತಕ್ಕಷ್ಟು
  • ಎಣ್ಣೆ – ಕರಿಯಲು

ಮಾಡುವ ವಿಧಾನ

ಹಲಸಿನ ಕಾಯಿ ತಯಾರಿ

  • ಎಳೆಯ ಹಲಸಿನ ಕಾಯಿಯನ್ನು ಕಟ್ ಮಾಡಿ ಚೆನ್ನಾಗಿ ಕ್ಲೀನ್ ಮಾಡಿ.
  • ನಂತರ ಬಿಸಿ ನೀರಿಗೆ ಹಾಕಿ ಸ್ವಲ್ಪ ಮೃದುವಾಗುವವರೆಗೆ ಬೇಯಿಸಿ ತೆಗೆದುಕೊಳ್ಳಿ.

ಮಸಾಲಾ ತಯಾರಿ

  • ಶೇಂಗಾವನ್ನು ಫ್ರೈ ಮಾಡಿ ತರಿತರಿಯಾಗಿ ರುಬ್ಬಿಕೊಳ್ಳಿ.
  • ಕೊತ್ತಂಬರಿ ಬೀಜ ಮತ್ತು ಜೀರಿಗೆ ಫ್ರೈ ಮಾಡಿ ರುಬ್ಬಿಕೊಳ್ಳಿ.

ಹಿಟ್ಟು ಕಲೆಸುವುದು

  • ಒಂದು ಪಾತ್ರೆಗೆ ಕಡಲೆ ಹಿಟ್ಟು, ಅಕ್ಕಿ ಹಿಟ್ಟು ಮತ್ತು ರುಬ್ಬಿದ ಮಿಶ್ರಣ ಹಾಕಿ.
  • ಇದಕ್ಕೆ ಉಪ್ಪು, ಮೆಣಸಿನ ಪುಡಿ, ಅರಿಶಿನ ಪುಡಿ, ಹಿಂಗು ಸೇರಿಸಿ.
  • ನೀರು ಹಾಕಿ ಮೃದುವಾದ ಹಿಟ್ಟು ತಯಾರಿಸಿಕೊಳ್ಳಿ (ತುಂಬಾ ತೆಳ್ಳಗೆ ಮಾಡಬೇಡಿ).

ಬಜ್ಜಿ ತಯಾರಿ

  • ಹಲಸಿನ ಕಾಯಿ ತುಂಡುಗಳನ್ನು ಹಿಟ್ಟಿನಲ್ಲಿ ಅದ್ದಿ.
  • ಕಾದ ಎಣ್ಣೆಯಲ್ಲಿ ಹಾಕಿ ಕೆಂಪಾಗುವವರೆಗೆ ಕರಿಯಿರಿ.

ಸರ್ವಿಂಗ್ ಸಲಹೆ :  ಬಿಸಿ ಬಿಸಿ ಬಜ್ಜಿಯನ್ನು ಈರುಳ್ಳಿ ಮತ್ತು ಸಾಸ್ ಜೊತೆ ಸವಿದರೆ ಇನ್ನೂ ರುಚಿ ಹೆಚ್ಚುತ್ತದೆ! ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Tender jackfruit bajji is a crispy and delicious snack made by coating tender jackfruit pieces in a spiced gram flour batter and deep frying them. It is a perfect evening snack, especially during rainy weather.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

7 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

15 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago