ಹೊಸರುಚಿ | ಗುಜ್ಜೆ ಬೋಂಡಾ

April 2, 2025
8:00 AM

ಗುಜ್ಜೆ ಬೋಂಡಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಗುಜ್ಜೆ 3/4 ಕಪ್ ಇದಕ್ಕೆ ನೀರು, ಉಪ್ಪು ರುಚಿಗೆ ತಕ್ಕಷ್ಟು, ಎಣ್ಣೆ ಸ್ವಲ್ಪ , ಚಿಕ್ಕ ಆಲೂಗಡ್ಡೆ 1 ಸಿಪ್ಪೆ ತೆಗೆದು ಕಟ್ ಮಾಡಿ ಹಾಕಿ. ಬಟಾಣಿ ಬೇಯಿಸಿ ಕೊಳ್ಳಿ ನಂತರ ಬೇಯಿಸಿ ಕೊಳ್ಳಿ. ಬಿಸಿ ಆರಿದ ನಂತರ ನುಣ್ಣಗೆ ಪುಡಿ ಮಾಡಿ.

ಹಿಟ್ಟು ಕಲೆಸಿ ಕೊಳ್ಳಲು: ಕಡಲೆ ಹಿಟ್ಟು 1/2 ಕಪ್, ಓಂ ಕಾಳು, (ಅಜ್ವಾನ್) ಉಪ್ಪು ರುಚಿಗೆ ತಕ್ಕಷ್ಟು, ಮೆಣಸಿನ ಪುಡಿ,1/2 ಚಮಚ, ಅರಿಸಿನ ಪುಡಿ ಸ್ವಲ್ಪ, ನೀರು ಸೇರಿಸಿ ಹಿಟ್ಟನ್ನು ಕಲೆಸಿ ಕೊಳ್ಳಿ.

ಮಾಡುವ ವಿಧಾನ: ಬಾಣಲೆಗೆ, ಎಣ್ಣೆ ಸಾಸಿವೆ, ಉದ್ದಿನ ಬೇಳೆ , ಜೀರಿಗೆ ಕರಿಬೇವಿನ ಸೊಪ್ಪು ಹಾಕಿ ಒಗ್ಗರಣೆ ಚಟಪಟಾಯಿಸಿ.
ಇದಕ್ಕೆ ನಂತರ ಚಿಕ್ಕದಾಗಿ ಕಟ್ ಮಾಡಿದ ಈರುಳ್ಳಿ, ಶುಂಠಿ ಬೆಳ್ಳುಳ್ಳಿ ಪೇಸ್ಟ್, ಗರಂ ಮಸಾಲ, ಜೀರಿಗೆ ಪುಡಿ, ಕೊತ್ತಂಬರಿ ಪುಡಿ, ಕಸೂರಿ ಮೇತಿ ಹಾಕಿ ಮಿಕ್ಸ್ ಮಾಡಿ. ನಂತರ ನುಣ್ಣಗೆ ರುಬ್ಬಿದ ಮಿಶ್ರಣವನ್ನು ಹಾಕಿ ಇದಕ್ಕೆ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ನಂತರ ಉಂಡೆಗಳನ್ನು ಮಾಡಿ, ಹಿಟ್ಟಿನಲ್ಲಿ ಅದ್ದಿ ಕಾದ ಎಣ್ಣೆಯಲ್ಲಿ ಕೆಂಪಗೆ ಕರಿದು ತೆಗೆಯಿರಿ. ಈವಾಗ ಬಿಸಿ ಬಿಸಿಯಾದ ಗುಜ್ಜೆ ಬೋಂಡಾ ರೆಡಿ. ಬಿಸಿ ಬಿಸಿಯಾದ ಬೋಂಡಾ ಚಾ ಕಾಫಿ ಜೊತೆ ಸೂಪರ್.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

ಇದನ್ನೂ ಓದಿ

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ
ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?
September 2, 2026
10:52 PM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror