Advertisement
ಹೊಸರುಚಿ-ಅಡುಗೆ

ಹೊಸರುಚಿ | ಎಳೆಯ ಹಲಸಿನ ಕಾಯಿ ರೋಲ್ – ಕ್ರಿಸ್ಪಿ ಟೀ ಟೈಮ್ ಸ್ನ್ಯಾಕ್

Share

ಎಳೆಯ ಹಲಸಿನ ಕಾಯಿ ಪೋಷಕಾಂಶಗಳಿಂದ ಸಮೃದ್ಧವಾಗಿರುವುದರ ಜೊತೆಗೆ ವಿವಿಧ ರುಚಿಕರ ಸ್ನ್ಯಾಕ್‌ಗಳನ್ನು ತಯಾರಿಸಲು ಸಹ ಸೂಕ್ತವಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡಬಹುದಾದ ಎಳೆಯ ಹಲಸಿನ ಕಾಯಿ ರೋಲ್ ಸಾಯಂಕಾಲದ ಟೀ ಟೈಮ್‌ಗೆ ಅಥವಾ ಮಕ್ಕಳಿಗೆ ವಿಶೇಷ ಸ್ನ್ಯಾಕ್ ಆಗಿ ಸಿದ್ಧಪಡಿಸಬಹುದು.

ಬೇಕಾಗುವ ಸಾಮಗ್ರಿಗಳು

  • ಎಳೆಯ ಹಲಸಿನ ಕಾಯಿ – ಕಟ್ ಮಾಡಿದದ್ದು
  • ಕಾರ್ನ್ – 1/4 ಕಪ್
  • ಬಟಾಣಿ – 4 ಚಮಚ
  • ಉಪ್ಪು – ರುಚಿಗೆ ತಕ್ಕಷ್ಟು
  • ನೀರು – ಬೇಯಿಸಲು

ಒಗ್ಗರಣೆಗೆ:

  • ಎಣ್ಣೆ – 2 ಚಮಚ
  • ಸಾಸಿವೆ – 1/4 ಚಮಚ
  • ಜೀರಿಗೆ – 1 ಚಮಚ
  • ಓಂ ಕಾಳು – ಸ್ವಲ್ಪ
  • ಕರಿಬೇವಿನ ಸೊಪ್ಪು – ಸ್ವಲ್ಪ

ಮಸಾಲೆ:

  • ಈರುಳ್ಳಿ – ಚಿಕ್ಕದಾಗಿ ಕಟ್ ಮಾಡಿದದ್ದು
  • ಗರಂ ಮಸಾಲ – 1 ಚಮಚ
  • ಜೀರಿಗೆ ಪುಡಿ – 1 ಚಮಚ
  • ಕೊತ್ತಂಬರಿ ಪುಡಿ – 1/2 ಚಮಚ
  • ಸಮೋಸ ಪೌಡರ್ – 1/2 ಚಮಚ
  • ಉಪ್ಪು – ಸ್ವಲ್ಪ

ಇನ್ನಷ್ಟು:

  • ಸಮೋಸ ಹಾಳೆ – ಅಗತ್ಯದಷ್ಟು
  • ಕರಿಯಲು ಎಣ್ಣೆ

ಮಾಡುವ ವಿಧಾನ : ಮೊದಲು ಎಳೆಯ ಹಲಸಿನ ಕಾಯಿ, ಕಾರ್ನ್, ಬಟಾಣಿ, ಉಪ್ಪು ಮತ್ತು ಸ್ವಲ್ಪ ನೀರು ಹಾಕಿ ಚೆನ್ನಾಗಿ ಬೇಯಿಸಿ. ಬಳಿಕ ಅದನ್ನು ಸ್ವಲ್ಪ ಮ್ಯಾಶ್ ಮಾಡಿ ಇಟ್ಟುಕೊಳ್ಳಿ. ಬಾಣಲೆಗೆ ಎಣ್ಣೆ ಹಾಕಿ ಕಾದ ಬಳಿಕ ಸಾಸಿವೆ, ಜೀರಿಗೆ, ಓಂ ಕಾಳು ಹಾಗೂ ಕರಿಬೇವಿನ ಸೊಪ್ಪು ಹಾಕಿ ಚಟಪಟಾಯಿಸಿ. ನಂತರ ಈರುಳ್ಳಿ ಹಾಕಿ ಸ್ವಲ್ಪ ಬ್ರೌನ್ ಆಗುವವರೆಗೆ ಫ್ರೈ ಮಾಡಿ.  ಈಗ ಗರಂ ಮಸಾಲ, ಜೀರಿಗೆ ಪುಡಿ, ಕೊತ್ತಂಬರಿ ಪುಡಿ, ಸಮೋಸ ಪೌಡರ್ ಮತ್ತು ಉಪ್ಪು ಹಾಕಿ ಮಿಕ್ಸ್ ಮಾಡಿ. ಬಳಿಕ ಮ್ಯಾಶ್ ಮಾಡಿದ ಹಲಸಿನ ಕಾಯಿ ಮಿಶ್ರಣವನ್ನು ಸೇರಿಸಿ 2 ನಿಮಿಷ ಫ್ರೈ ಮಾಡಿ. ಬೇಯಿಸಿದ ನಂತರ ಸಮೋಸ ಹಾಳೆಯ ಮೇಲೆ ಹಾಕಿ ರೋಲ್ ಮಾಡಿ. ಕಾದ ಎಣ್ಣೆಯಲ್ಲಿ ಕೆಂಪಗೆ ಕರಿದು ತೆಗೆದರೆ ಬಿಸಿ ಬಿಸಿ ಎಳೆಯ ಹಲಸಿನ ಕಾಯಿ ರೋಲ್ ಸಿದ್ಧ!

Tender jackfruit rolls are a crispy and tasty evening snack made by stuffing mashed jackfruit with spices and frying it in samosa sheets. This simple homemade recipe is nutritious and perfect for tea-time serving.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

13 hours ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

15 hours ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

16 hours ago

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ

ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.

16 hours ago

ಜಾಗತಿಕ ತಾಪಮಾನಕ್ಕೆ ಪರಿಹಾರ : ವೃಕ್ಷ ಸಂವರ್ಧನೆಗೆ ಒತ್ತು

ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…

16 hours ago

ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್

ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…

1 day ago