Advertisement
Share

ಗುಜ್ಜೆ ರೋಲ್ ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಮೊದಲಿಗೆ ಗುಜ್ಜೆ ಕಟ್ ಮಾಡಿ ಕುಕ್ಕರ್ ಗೆ ಹಾಕಿ ಇದಕ್ಕೆ ಉಪ್ಪು ರುಚಿಗೆ ತಕ್ಕಷ್ಟು, ಎಣ್ಣೆ ಸ್ವಲ್ಪ ಹಾಕಿ ನೀರು ಸೇರಿಸಿ ಬೇಯಿಸಿ. ನಂತರ ಈರುಳ್ಳಿ 1 ಚಿಕ್ಕ ದಾಗಿ ಕಟ್ ಮಾಡಿ. ಕೊತ್ತಂಬರಿ ಸೊಪ್ಪು, ಗರಂ ಮಸಾಲ, ಡ್ರೈ ಮ್ಯಾಂಗೋ ಪೌಡರ್ , ಈರುಳ್ಳಿ ಪುಡಿ, ಕಿಚನ್ ಕಿಂಗ್ ಮಸಾಲ, ಜೀರಿಗೆ ಪುಡಿ, ಕೊತ್ತಂಬರಿಪುಡಿ(ಬ್ರೇಡ್ ಪುಡಿ), ನಿಂಬೆ ರಸ 1 ಚಮಚ, ಹಸಿಮೆಣಸಿನ ಕಾಯಿ ಚಿಕ್ಕದಾಗಿ ಕಟ್ ಮಾಡಿ.

ಮಾಡುವ ವಿಧಾನ: ಒಂದು ಪಾತ್ರೆಗೆ ಈರುಳ್ಳಿ, ಗುಜ್ಜೆ ಪುಡಿ ಮಾಡಿ ಹಾಕಿ ಇದಕ್ಕೆ 1 ಬ್ರೇಡ್ ಕಟ್ ಮಾಡಿ ಹಾಕಿ ನಿಂಬೆ ರಸ , ಗರಂ ಮಸಾಲ 1/2 ಚಮಚ, ಡ್ರೈ ಮ್ಯಾಂಗೋ ಪೌಡರ್ 1/4 ಚಮಚ , ಈರುಳ್ಳಿ ಪುಡಿ 1/2 ಚಮಚ , ಜೀರಿಗೆ ಪುಡಿ 1/4 ಚಮಚ, ಕೊತ್ತಂಬರಿ ಪುಡಿ 1/4 ಚಮಚ, ಕಿಚನ್ ಕಿಂಗ್ ಮಸಾಲ 1 ಚಮಚ ,ಹಸಿಮೆಣಸಿನ ಕಾಯಿ 1 ಚಮಚ ಕೊತ್ತಂಬರಿ ಸೊಪ್ಪು ಚಿಕ್ಕ ದಾಗಿ ಕಟ್ ಮಾಡಿ ಹಾಕಿ. ನಂತರ ಚೆನ್ನಾಗಿ ಮಿಕ್ಸ್ ಮಾಡಿ . ನಂತರ ಸ್ವಲ್ಪ ರೋಲ್ ಮಾಡಿ ಬ್ರೇಡ್ ಪುಡಿ ಯಲ್ಲಿ ಹೊರಳಿಸಿ ಇಡಿ. ತವಾ ಕ್ಕೆ ಸ್ವಲ್ಪ ಎಣ್ಣೆ ಹಾಕಿ ನಂತರ ಇದನ್ನು ಸ್ವಲ್ಪ ಕೆಂಪು ಆಗುವ ತನಕ ಫ್ರೈ ಮಾಡಿ ತೆಗೆಯಿರಿ ಈವಾಗ ಬಿಸಿ ಬಿಸಿಯಾದ ಗುಜ್ಜೆ ರೋಲ್ ರೆಡಿ ಜೋರ್ ಮಳೆ ಬರುವಾಗ ಬಿಸಿ ಬಿಸಿ ಕಾಫಿ ಟೀ ಜೊತೆಗೆ ಸೂಪರ್ ರುಚಿ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

2 days ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

2 days ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

3 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

3 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

3 days ago