ಭಾಗವತ ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ ಇನ್ನು ನೆನಪು

September 27, 2020
2:01 PM
ತೆಂಕುತಿಟ್ಟು ಯಕ್ಷಗಾನದ ಹಿರಿಯ ಭಾಗವತ ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ (76) ಇಂದು ನಿಧನರಾದರು. ಇವರು ತೆಂಕುತಿಟ್ಟಿನ ಹಿರಿಯ ಪರಂಪರೆಯ ಸಾಕ್ಷಿ ಪ್ರಜ್ಞೆ. ಭಾಗವತಿಕೆಯಲ್ಲಿ ಸ್ವ-ಶೈಲಿಯ ಛಾಪು. ಬೆರಗಿನ ಶಾರೀರ. ಅನುಸರಿಸಲಾಗದ, ಅನುಕರಿಸಲಾಗದ ಬಿಗಿ. ಅನುಭವದಿಂದ ಮಾಗಿದ ಬೌದ್ಧಿಕತೆ. ನೂರಾರು ಶಿಷ್ಯರನ್ನು ರೂಪಿಸಿದ ಗುರು.

Advertisement
Advertisement
Advertisement
Advertisement

ಶಾಸ್ತ್ರಿಗಳಿಗೆ ಬದುಕೇ ಯಕ್ಷಗಾನವಾಗಿತ್ತು. ಯಕ್ಷಗಾನವೇ ಬದುಕು. ಹಲವು ಪ್ರಸಂಗಗಳು ಕಂಠಸ್ಥವಾಗಿದ್ದುವು. ರಂಗದ ನಿರ್ದೇಶಕ. ರಂಗಭಾಷೆಯ ಅನುಷ್ಠಾನದತ್ತ ಬಿಗು ನಿಲುವು. ಪೌರಾಣಿಕ ಪ್ರಸಂಗಗಳ ಪದ್ಯಗಳಿಗೆ ಮೋಹಕ ಧ್ವನಿಯ ಸ್ಪರ್ಶ. ವಿವಿಧ ಮೇಳಗಳಲ್ಲಿ ತಿರುಗಾಟ. ಹವ್ಯಾಸಿ ಆಟ-ಕೂಟಗಳಲ್ಲಿ ವ್ಯವಸಾಯ.

Advertisement

ತಿರುಮಲೇಶ್ವರ ಶಾಸ್ತ್ರಿಗಳು ತೆಂಕುತಿಟ್ಟು ಯಕ್ಷಗಾನದ ಭಾಗವತಿಕೆಯ ಪರಂಪರೆಯಲ್ಲಿ ತಮ್ಮ ವಿಶಿಷ್ಟ ಅನುಭವದಿಂದ ‘ತೆಂಕಬೈಲು’ ಮಟ್ಟು ಸ್ಥಾಪಿಸಿದ ಹೆಗ್ಗಳಿಕೆ. ವೃತ್ತಿ ಮತ್ತು ಹವ್ಯಾಸಿ ರಂಗಭೂಮಿಗೆ ಇವರ ಅನುಭವದ ಕೊಡುಗೆ ಅನನ್ಯ.
ಅಪಾರ ಶಿಷ್ಯವೃಂದವನ್ನು ಹೊಂದಿದ ಶಾಸ್ತ್ರಿಗಳಿಗೆ ಎರಡು ವರುಷದ ಹಿಂದೆ ಪದ್ಯಾಣ ಪ್ರಶಸ್ತಿ ಪ್ರಾಪ್ತವಾಗಿತ್ತು. ಈ ಸಂದರ್ಭದಲ್ಲಿ ಕಿರು ಪುಸ್ತಿಕೆಯೊಂದು ಮುದ್ರಣಗೊಂಡಿತ್ತು. ತಿರುಮಲೇಶ್ವರ ಶಾಸ್ತ್ರಿಯವರ ಪುತ್ರ ಮುರಳಿಕೃಷ್ಣ. ಇವರ ಅಧ್ಯಾಪಕರು. ತಂದೆಯ ಶೈಲಿಯನ್ನು ಮುಂದುವರಿಸುತ್ತಿರುವ ಭಾಗವತ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಇನ್ನಿಲ್ಲ |
October 21, 2024
10:02 AM
by: The Rural Mirror ಸುದ್ದಿಜಾಲ
ರತನ್‌ ಟಾಟಾ ಇನ್ನಿಲ್ಲ | ವಯೋಸಹಜ ಕಾಯಿಲೆಯಿಂದ ಕೊನೆಯುಸಿರು |
October 10, 2024
7:49 AM
by: ದ ರೂರಲ್ ಮಿರರ್.ಕಾಂ
ಕಣ್ಮರೆಯಾದ ಅಚ್ಚ ಕನ್ನಡದ ಮಾತಿನ ಮಲ್ಲಿ ಅಪರ್ಣಾ | ಕ್ಯಾನ್ಸರ್‌ಗೆ ಬಲಿಯಾದ ಅಪರ್ಣಾ |
July 12, 2024
9:24 AM
by: The Rural Mirror ಸುದ್ದಿಜಾಲ
ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ನಾಯಕ | ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ
April 29, 2024
12:14 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror