Advertisement
ನಿಧನ‌ ಸುದ್ದಿಗಳು

ಭಾಗವತ ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ ಇನ್ನು ನೆನಪು

Share
ತೆಂಕುತಿಟ್ಟು ಯಕ್ಷಗಾನದ ಹಿರಿಯ ಭಾಗವತ ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ (76) ಇಂದು ನಿಧನರಾದರು. ಇವರು ತೆಂಕುತಿಟ್ಟಿನ ಹಿರಿಯ ಪರಂಪರೆಯ ಸಾಕ್ಷಿ ಪ್ರಜ್ಞೆ. ಭಾಗವತಿಕೆಯಲ್ಲಿ ಸ್ವ-ಶೈಲಿಯ ಛಾಪು. ಬೆರಗಿನ ಶಾರೀರ. ಅನುಸರಿಸಲಾಗದ, ಅನುಕರಿಸಲಾಗದ ಬಿಗಿ. ಅನುಭವದಿಂದ ಮಾಗಿದ ಬೌದ್ಧಿಕತೆ. ನೂರಾರು ಶಿಷ್ಯರನ್ನು ರೂಪಿಸಿದ ಗುರು.

ಶಾಸ್ತ್ರಿಗಳಿಗೆ ಬದುಕೇ ಯಕ್ಷಗಾನವಾಗಿತ್ತು. ಯಕ್ಷಗಾನವೇ ಬದುಕು. ಹಲವು ಪ್ರಸಂಗಗಳು ಕಂಠಸ್ಥವಾಗಿದ್ದುವು. ರಂಗದ ನಿರ್ದೇಶಕ. ರಂಗಭಾಷೆಯ ಅನುಷ್ಠಾನದತ್ತ ಬಿಗು ನಿಲುವು. ಪೌರಾಣಿಕ ಪ್ರಸಂಗಗಳ ಪದ್ಯಗಳಿಗೆ ಮೋಹಕ ಧ್ವನಿಯ ಸ್ಪರ್ಶ. ವಿವಿಧ ಮೇಳಗಳಲ್ಲಿ ತಿರುಗಾಟ. ಹವ್ಯಾಸಿ ಆಟ-ಕೂಟಗಳಲ್ಲಿ ವ್ಯವಸಾಯ.

ತಿರುಮಲೇಶ್ವರ ಶಾಸ್ತ್ರಿಗಳು ತೆಂಕುತಿಟ್ಟು ಯಕ್ಷಗಾನದ ಭಾಗವತಿಕೆಯ ಪರಂಪರೆಯಲ್ಲಿ ತಮ್ಮ ವಿಶಿಷ್ಟ ಅನುಭವದಿಂದ ‘ತೆಂಕಬೈಲು’ ಮಟ್ಟು ಸ್ಥಾಪಿಸಿದ ಹೆಗ್ಗಳಿಕೆ. ವೃತ್ತಿ ಮತ್ತು ಹವ್ಯಾಸಿ ರಂಗಭೂಮಿಗೆ ಇವರ ಅನುಭವದ ಕೊಡುಗೆ ಅನನ್ಯ.
ಅಪಾರ ಶಿಷ್ಯವೃಂದವನ್ನು ಹೊಂದಿದ ಶಾಸ್ತ್ರಿಗಳಿಗೆ ಎರಡು ವರುಷದ ಹಿಂದೆ ಪದ್ಯಾಣ ಪ್ರಶಸ್ತಿ ಪ್ರಾಪ್ತವಾಗಿತ್ತು. ಈ ಸಂದರ್ಭದಲ್ಲಿ ಕಿರು ಪುಸ್ತಿಕೆಯೊಂದು ಮುದ್ರಣಗೊಂಡಿತ್ತು. ತಿರುಮಲೇಶ್ವರ ಶಾಸ್ತ್ರಿಯವರ ಪುತ್ರ ಮುರಳಿಕೃಷ್ಣ. ಇವರ ಅಧ್ಯಾಪಕರು. ತಂದೆಯ ಶೈಲಿಯನ್ನು ಮುಂದುವರಿಸುತ್ತಿರುವ ಭಾಗವತ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

20 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

20 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

20 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

20 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

2 days ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

2 days ago