Advertisement
ನಿಧನ‌ ಸುದ್ದಿಗಳು

ಭಾಗವತ ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ ಇನ್ನು ನೆನಪು

Share
ತೆಂಕುತಿಟ್ಟು ಯಕ್ಷಗಾನದ ಹಿರಿಯ ಭಾಗವತ ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ (76) ಇಂದು ನಿಧನರಾದರು. ಇವರು ತೆಂಕುತಿಟ್ಟಿನ ಹಿರಿಯ ಪರಂಪರೆಯ ಸಾಕ್ಷಿ ಪ್ರಜ್ಞೆ. ಭಾಗವತಿಕೆಯಲ್ಲಿ ಸ್ವ-ಶೈಲಿಯ ಛಾಪು. ಬೆರಗಿನ ಶಾರೀರ. ಅನುಸರಿಸಲಾಗದ, ಅನುಕರಿಸಲಾಗದ ಬಿಗಿ. ಅನುಭವದಿಂದ ಮಾಗಿದ ಬೌದ್ಧಿಕತೆ. ನೂರಾರು ಶಿಷ್ಯರನ್ನು ರೂಪಿಸಿದ ಗುರು.
Advertisement
Advertisement
Advertisement
Advertisement
Advertisement

ಶಾಸ್ತ್ರಿಗಳಿಗೆ ಬದುಕೇ ಯಕ್ಷಗಾನವಾಗಿತ್ತು. ಯಕ್ಷಗಾನವೇ ಬದುಕು. ಹಲವು ಪ್ರಸಂಗಗಳು ಕಂಠಸ್ಥವಾಗಿದ್ದುವು. ರಂಗದ ನಿರ್ದೇಶಕ. ರಂಗಭಾಷೆಯ ಅನುಷ್ಠಾನದತ್ತ ಬಿಗು ನಿಲುವು. ಪೌರಾಣಿಕ ಪ್ರಸಂಗಗಳ ಪದ್ಯಗಳಿಗೆ ಮೋಹಕ ಧ್ವನಿಯ ಸ್ಪರ್ಶ. ವಿವಿಧ ಮೇಳಗಳಲ್ಲಿ ತಿರುಗಾಟ. ಹವ್ಯಾಸಿ ಆಟ-ಕೂಟಗಳಲ್ಲಿ ವ್ಯವಸಾಯ.

Advertisement

ತಿರುಮಲೇಶ್ವರ ಶಾಸ್ತ್ರಿಗಳು ತೆಂಕುತಿಟ್ಟು ಯಕ್ಷಗಾನದ ಭಾಗವತಿಕೆಯ ಪರಂಪರೆಯಲ್ಲಿ ತಮ್ಮ ವಿಶಿಷ್ಟ ಅನುಭವದಿಂದ ‘ತೆಂಕಬೈಲು’ ಮಟ್ಟು ಸ್ಥಾಪಿಸಿದ ಹೆಗ್ಗಳಿಕೆ. ವೃತ್ತಿ ಮತ್ತು ಹವ್ಯಾಸಿ ರಂಗಭೂಮಿಗೆ ಇವರ ಅನುಭವದ ಕೊಡುಗೆ ಅನನ್ಯ.
ಅಪಾರ ಶಿಷ್ಯವೃಂದವನ್ನು ಹೊಂದಿದ ಶಾಸ್ತ್ರಿಗಳಿಗೆ ಎರಡು ವರುಷದ ಹಿಂದೆ ಪದ್ಯಾಣ ಪ್ರಶಸ್ತಿ ಪ್ರಾಪ್ತವಾಗಿತ್ತು. ಈ ಸಂದರ್ಭದಲ್ಲಿ ಕಿರು ಪುಸ್ತಿಕೆಯೊಂದು ಮುದ್ರಣಗೊಂಡಿತ್ತು. ತಿರುಮಲೇಶ್ವರ ಶಾಸ್ತ್ರಿಯವರ ಪುತ್ರ ಮುರಳಿಕೃಷ್ಣ. ಇವರ ಅಧ್ಯಾಪಕರು. ತಂದೆಯ ಶೈಲಿಯನ್ನು ಮುಂದುವರಿಸುತ್ತಿರುವ ಭಾಗವತ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭೂಮಿ,ಕಾವೇರಿ 2.0 ತಂತ್ರಾಂಶ ಲೋಪದೋಷ ನಿವಾರಣೆಗೆ ಕ್ರಮ

ವಿಧಾನ ಪರಿಷತ್  ಇಂದು ಬೆಳಗ್ಗೆ ಸಮಾವೇಶಗೊಳ್ಳುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನೋತ್ತರ ಕಲಾಪಕ್ಕೆ…

7 hours ago

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿ

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿಸಲು ಜಿಲ್ಲೆಯ…

7 hours ago

ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ | ಪಂಪ್ ಸೆಟ್‌ಗಳಿಗೆ 7 ಗಂಟೆ ವಿದ್ಯುತ್ | ವಿದ್ಯುತ್ ಲೈನ್ ಗಳ ದೋಷ ಸರಿಪಡಿಸಲು ಕ್ರಮ | ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಒತ್ತು |

ಬೇಸಿಗೆ ಸಮಯದಲ್ಲಿ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸುತ್ತಿದ್ದು, ರಾಜ್ಯದಲ್ಲಿ  ವಿದ್ಯುತ್ ಮಾರ್ಗವನ್ನು ಮತ್ತಷ್ಟು…

7 hours ago

ಹಕ್ಕಿಜ್ವರದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ | ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದ್ದು, ಜನರು ಭಯಪಡುವ ಅಗತ್ಯವಿಲ್ಲ ಎಂದು…

8 hours ago

ಕಟ್ಟಡ ಕಾರ್ಮಿಕರ 26 ಲಕ್ಷ ನಕಲಿ ಕಾರ್ಡ್ ರದ್ದು

ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್‌ಗಳನ್ನು ತಪಾಸಣೆ ನಡೆಸಿ 26  ಲಕ್ಷ…

8 hours ago

ಪ್ರಮುಖ ಯಾತ್ರಾ ಸ್ಥಳಗಳಿಗೆ ರೋಪ್ ವೇ ಸೌಲಭ್ಯ

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…

8 hours ago