Advertisement
ನಿಧನ‌ ಸುದ್ದಿಗಳು

ಭಾಗವತ ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ ಇನ್ನು ನೆನಪು

Share
ತೆಂಕುತಿಟ್ಟು ಯಕ್ಷಗಾನದ ಹಿರಿಯ ಭಾಗವತ ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ (76) ಇಂದು ನಿಧನರಾದರು. ಇವರು ತೆಂಕುತಿಟ್ಟಿನ ಹಿರಿಯ ಪರಂಪರೆಯ ಸಾಕ್ಷಿ ಪ್ರಜ್ಞೆ. ಭಾಗವತಿಕೆಯಲ್ಲಿ ಸ್ವ-ಶೈಲಿಯ ಛಾಪು. ಬೆರಗಿನ ಶಾರೀರ. ಅನುಸರಿಸಲಾಗದ, ಅನುಕರಿಸಲಾಗದ ಬಿಗಿ. ಅನುಭವದಿಂದ ಮಾಗಿದ ಬೌದ್ಧಿಕತೆ. ನೂರಾರು ಶಿಷ್ಯರನ್ನು ರೂಪಿಸಿದ ಗುರು.

ಶಾಸ್ತ್ರಿಗಳಿಗೆ ಬದುಕೇ ಯಕ್ಷಗಾನವಾಗಿತ್ತು. ಯಕ್ಷಗಾನವೇ ಬದುಕು. ಹಲವು ಪ್ರಸಂಗಗಳು ಕಂಠಸ್ಥವಾಗಿದ್ದುವು. ರಂಗದ ನಿರ್ದೇಶಕ. ರಂಗಭಾಷೆಯ ಅನುಷ್ಠಾನದತ್ತ ಬಿಗು ನಿಲುವು. ಪೌರಾಣಿಕ ಪ್ರಸಂಗಗಳ ಪದ್ಯಗಳಿಗೆ ಮೋಹಕ ಧ್ವನಿಯ ಸ್ಪರ್ಶ. ವಿವಿಧ ಮೇಳಗಳಲ್ಲಿ ತಿರುಗಾಟ. ಹವ್ಯಾಸಿ ಆಟ-ಕೂಟಗಳಲ್ಲಿ ವ್ಯವಸಾಯ.

ತಿರುಮಲೇಶ್ವರ ಶಾಸ್ತ್ರಿಗಳು ತೆಂಕುತಿಟ್ಟು ಯಕ್ಷಗಾನದ ಭಾಗವತಿಕೆಯ ಪರಂಪರೆಯಲ್ಲಿ ತಮ್ಮ ವಿಶಿಷ್ಟ ಅನುಭವದಿಂದ ‘ತೆಂಕಬೈಲು’ ಮಟ್ಟು ಸ್ಥಾಪಿಸಿದ ಹೆಗ್ಗಳಿಕೆ. ವೃತ್ತಿ ಮತ್ತು ಹವ್ಯಾಸಿ ರಂಗಭೂಮಿಗೆ ಇವರ ಅನುಭವದ ಕೊಡುಗೆ ಅನನ್ಯ.
ಅಪಾರ ಶಿಷ್ಯವೃಂದವನ್ನು ಹೊಂದಿದ ಶಾಸ್ತ್ರಿಗಳಿಗೆ ಎರಡು ವರುಷದ ಹಿಂದೆ ಪದ್ಯಾಣ ಪ್ರಶಸ್ತಿ ಪ್ರಾಪ್ತವಾಗಿತ್ತು. ಈ ಸಂದರ್ಭದಲ್ಲಿ ಕಿರು ಪುಸ್ತಿಕೆಯೊಂದು ಮುದ್ರಣಗೊಂಡಿತ್ತು. ತಿರುಮಲೇಶ್ವರ ಶಾಸ್ತ್ರಿಯವರ ಪುತ್ರ ಮುರಳಿಕೃಷ್ಣ. ಇವರ ಅಧ್ಯಾಪಕರು. ತಂದೆಯ ಶೈಲಿಯನ್ನು ಮುಂದುವರಿಸುತ್ತಿರುವ ಭಾಗವತ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

10 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

15 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

1 day ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

1 day ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

1 day ago