ಶಾಸ್ತ್ರಿಗಳಿಗೆ ಬದುಕೇ ಯಕ್ಷಗಾನವಾಗಿತ್ತು. ಯಕ್ಷಗಾನವೇ ಬದುಕು. ಹಲವು ಪ್ರಸಂಗಗಳು ಕಂಠಸ್ಥವಾಗಿದ್ದುವು. ರಂಗದ ನಿರ್ದೇಶಕ. ರಂಗಭಾಷೆಯ ಅನುಷ್ಠಾನದತ್ತ ಬಿಗು ನಿಲುವು. ಪೌರಾಣಿಕ ಪ್ರಸಂಗಗಳ ಪದ್ಯಗಳಿಗೆ ಮೋಹಕ ಧ್ವನಿಯ ಸ್ಪರ್ಶ. ವಿವಿಧ ಮೇಳಗಳಲ್ಲಿ ತಿರುಗಾಟ. ಹವ್ಯಾಸಿ ಆಟ-ಕೂಟಗಳಲ್ಲಿ ವ್ಯವಸಾಯ.
ತಿರುಮಲೇಶ್ವರ ಶಾಸ್ತ್ರಿಗಳು ತೆಂಕುತಿಟ್ಟು ಯಕ್ಷಗಾನದ ಭಾಗವತಿಕೆಯ ಪರಂಪರೆಯಲ್ಲಿ ತಮ್ಮ ವಿಶಿಷ್ಟ ಅನುಭವದಿಂದ ‘ತೆಂಕಬೈಲು’ ಮಟ್ಟು ಸ್ಥಾಪಿಸಿದ ಹೆಗ್ಗಳಿಕೆ. ವೃತ್ತಿ ಮತ್ತು ಹವ್ಯಾಸಿ ರಂಗಭೂಮಿಗೆ ಇವರ ಅನುಭವದ ಕೊಡುಗೆ ಅನನ್ಯ.
ಅಪಾರ ಶಿಷ್ಯವೃಂದವನ್ನು ಹೊಂದಿದ ಶಾಸ್ತ್ರಿಗಳಿಗೆ ಎರಡು ವರುಷದ ಹಿಂದೆ ಪದ್ಯಾಣ ಪ್ರಶಸ್ತಿ ಪ್ರಾಪ್ತವಾಗಿತ್ತು. ಈ ಸಂದರ್ಭದಲ್ಲಿ ಕಿರು ಪುಸ್ತಿಕೆಯೊಂದು ಮುದ್ರಣಗೊಂಡಿತ್ತು. ತಿರುಮಲೇಶ್ವರ ಶಾಸ್ತ್ರಿಯವರ ಪುತ್ರ ಮುರಳಿಕೃಷ್ಣ. ಇವರ ಅಧ್ಯಾಪಕರು. ತಂದೆಯ ಶೈಲಿಯನ್ನು ಮುಂದುವರಿಸುತ್ತಿರುವ ಭಾಗವತ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…