ಶಾಸ್ತ್ರಿಗಳಿಗೆ ಬದುಕೇ ಯಕ್ಷಗಾನವಾಗಿತ್ತು. ಯಕ್ಷಗಾನವೇ ಬದುಕು. ಹಲವು ಪ್ರಸಂಗಗಳು ಕಂಠಸ್ಥವಾಗಿದ್ದುವು. ರಂಗದ ನಿರ್ದೇಶಕ. ರಂಗಭಾಷೆಯ ಅನುಷ್ಠಾನದತ್ತ ಬಿಗು ನಿಲುವು. ಪೌರಾಣಿಕ ಪ್ರಸಂಗಗಳ ಪದ್ಯಗಳಿಗೆ ಮೋಹಕ ಧ್ವನಿಯ ಸ್ಪರ್ಶ. ವಿವಿಧ ಮೇಳಗಳಲ್ಲಿ ತಿರುಗಾಟ. ಹವ್ಯಾಸಿ ಆಟ-ಕೂಟಗಳಲ್ಲಿ ವ್ಯವಸಾಯ.
ತಿರುಮಲೇಶ್ವರ ಶಾಸ್ತ್ರಿಗಳು ತೆಂಕುತಿಟ್ಟು ಯಕ್ಷಗಾನದ ಭಾಗವತಿಕೆಯ ಪರಂಪರೆಯಲ್ಲಿ ತಮ್ಮ ವಿಶಿಷ್ಟ ಅನುಭವದಿಂದ ‘ತೆಂಕಬೈಲು’ ಮಟ್ಟು ಸ್ಥಾಪಿಸಿದ ಹೆಗ್ಗಳಿಕೆ. ವೃತ್ತಿ ಮತ್ತು ಹವ್ಯಾಸಿ ರಂಗಭೂಮಿಗೆ ಇವರ ಅನುಭವದ ಕೊಡುಗೆ ಅನನ್ಯ.
ಅಪಾರ ಶಿಷ್ಯವೃಂದವನ್ನು ಹೊಂದಿದ ಶಾಸ್ತ್ರಿಗಳಿಗೆ ಎರಡು ವರುಷದ ಹಿಂದೆ ಪದ್ಯಾಣ ಪ್ರಶಸ್ತಿ ಪ್ರಾಪ್ತವಾಗಿತ್ತು. ಈ ಸಂದರ್ಭದಲ್ಲಿ ಕಿರು ಪುಸ್ತಿಕೆಯೊಂದು ಮುದ್ರಣಗೊಂಡಿತ್ತು. ತಿರುಮಲೇಶ್ವರ ಶಾಸ್ತ್ರಿಯವರ ಪುತ್ರ ಮುರಳಿಕೃಷ್ಣ. ಇವರ ಅಧ್ಯಾಪಕರು. ತಂದೆಯ ಶೈಲಿಯನ್ನು ಮುಂದುವರಿಸುತ್ತಿರುವ ಭಾಗವತ.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…