Advertisement
ನಿಧನ‌ ಸುದ್ದಿಗಳು

ಭಾಗವತ ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ ಇನ್ನು ನೆನಪು

Share
ತೆಂಕುತಿಟ್ಟು ಯಕ್ಷಗಾನದ ಹಿರಿಯ ಭಾಗವತ ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ (76) ಇಂದು ನಿಧನರಾದರು. ಇವರು ತೆಂಕುತಿಟ್ಟಿನ ಹಿರಿಯ ಪರಂಪರೆಯ ಸಾಕ್ಷಿ ಪ್ರಜ್ಞೆ. ಭಾಗವತಿಕೆಯಲ್ಲಿ ಸ್ವ-ಶೈಲಿಯ ಛಾಪು. ಬೆರಗಿನ ಶಾರೀರ. ಅನುಸರಿಸಲಾಗದ, ಅನುಕರಿಸಲಾಗದ ಬಿಗಿ. ಅನುಭವದಿಂದ ಮಾಗಿದ ಬೌದ್ಧಿಕತೆ. ನೂರಾರು ಶಿಷ್ಯರನ್ನು ರೂಪಿಸಿದ ಗುರು.

ಶಾಸ್ತ್ರಿಗಳಿಗೆ ಬದುಕೇ ಯಕ್ಷಗಾನವಾಗಿತ್ತು. ಯಕ್ಷಗಾನವೇ ಬದುಕು. ಹಲವು ಪ್ರಸಂಗಗಳು ಕಂಠಸ್ಥವಾಗಿದ್ದುವು. ರಂಗದ ನಿರ್ದೇಶಕ. ರಂಗಭಾಷೆಯ ಅನುಷ್ಠಾನದತ್ತ ಬಿಗು ನಿಲುವು. ಪೌರಾಣಿಕ ಪ್ರಸಂಗಗಳ ಪದ್ಯಗಳಿಗೆ ಮೋಹಕ ಧ್ವನಿಯ ಸ್ಪರ್ಶ. ವಿವಿಧ ಮೇಳಗಳಲ್ಲಿ ತಿರುಗಾಟ. ಹವ್ಯಾಸಿ ಆಟ-ಕೂಟಗಳಲ್ಲಿ ವ್ಯವಸಾಯ.

ತಿರುಮಲೇಶ್ವರ ಶಾಸ್ತ್ರಿಗಳು ತೆಂಕುತಿಟ್ಟು ಯಕ್ಷಗಾನದ ಭಾಗವತಿಕೆಯ ಪರಂಪರೆಯಲ್ಲಿ ತಮ್ಮ ವಿಶಿಷ್ಟ ಅನುಭವದಿಂದ ‘ತೆಂಕಬೈಲು’ ಮಟ್ಟು ಸ್ಥಾಪಿಸಿದ ಹೆಗ್ಗಳಿಕೆ. ವೃತ್ತಿ ಮತ್ತು ಹವ್ಯಾಸಿ ರಂಗಭೂಮಿಗೆ ಇವರ ಅನುಭವದ ಕೊಡುಗೆ ಅನನ್ಯ.
ಅಪಾರ ಶಿಷ್ಯವೃಂದವನ್ನು ಹೊಂದಿದ ಶಾಸ್ತ್ರಿಗಳಿಗೆ ಎರಡು ವರುಷದ ಹಿಂದೆ ಪದ್ಯಾಣ ಪ್ರಶಸ್ತಿ ಪ್ರಾಪ್ತವಾಗಿತ್ತು. ಈ ಸಂದರ್ಭದಲ್ಲಿ ಕಿರು ಪುಸ್ತಿಕೆಯೊಂದು ಮುದ್ರಣಗೊಂಡಿತ್ತು. ತಿರುಮಲೇಶ್ವರ ಶಾಸ್ತ್ರಿಯವರ ಪುತ್ರ ಮುರಳಿಕೃಷ್ಣ. ಇವರ ಅಧ್ಯಾಪಕರು. ತಂದೆಯ ಶೈಲಿಯನ್ನು ಮುಂದುವರಿಸುತ್ತಿರುವ ಭಾಗವತ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

13 hours ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

13 hours ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago