Advertisement
MIRROR FOCUS

ಭೀಕರ ಪ್ರಕೃತಿ ವಿಕೋಪ, ಪುಟಿನ್‌ ಮೇಲೆ ಹತ್ಯೆ ಯತ್ನ, ಭಯೋತ್ಪಾದಕರ ಅಟ್ಟಹಾಸ | 2024ರ ಭವಿಷ್ಯವಾಣಿ ನುಡಿದ ಬಾಬಾ ವಂಗಾ…! |

Share

ಭವಿಷ್ಯದಲ್ಲಿ ಏನಾಗುತ್ತೆ ಅನ್ನೋದು ನಿಖರವಾಗಿ ಹೇಳಲು ಯಾರಿಂದಲೂ ಸಾಧ್ಯವಿಲ್ಲ. ಆದರೆ ಕೆಲವೊಂದು ಕಾಲಜ್ಞಾನಿಗಳು ಇಂತಹ ಘಟನೆಗಳು ನಡೆಯುತ್ತವೆ ಎಂದು ಭವಿಷ್ಯ ನುಡಿಯುತ್ತಾರೆ. ಅದರಲ್ಲಿ ಕೆಲವೊಂದು ಘಟನೆಗಳು ಆಗಿವೆ ಕೂಡ. ಇದೀಗ 2024 ಕ್ಕೆ ಭಯಾನಕ ಹವಾಮಾನ ಘಟನೆಗಳು(extreme weather) ಹಾಗೂ ಭಯೋತ್ಪಾದಕ ದಾಳಿಗಳಲ್ಲಿ ಏರಿಕೆಯಾಗಲಿದೆ ಎಂದು ಬಾಬಾ ವಂಗಾ (Baba Vanga) ಅವರು ಭವಿಷ್ಯ ನುಡಿದಿದ್ದಾರೆ.

ಬಾಲ್ಕನ್ಸ್‌ನ ನಾಸ್ಟ್ರಾಡಾಮಸ್(Nostradamus) ಎಂದೂ ಕರೆಯಲ್ಪಡುವ ಬಾಬಾ ವಂಗಾ ಅವರು, 9/11 ಭಯೋತ್ಪಾದಕ ದಾಳಿಗಳು, ರಾಜಕುಮಾರಿ ಡಯಾನಾ ಸಾವು, ಚೆರ್ನೋಬಿಲ್ ದುರಂತ ಮತ್ತು ಬ್ರೆಕ್ಸಿಟ್‌ನಂತಹ ಪ್ರಮುಖ ವಿಶ್ವ ಘಟನೆಗಳ ಬಗ್ಗೆ ಭವಿಷ್ಯ ನುಡಿದಿದ್ದರು. 2024 ರಲ್ಲಿ ಅವರು ಏಳು ಭವಿಷ್ಯವಾಣಿಗಳನ್ನು ನುಡಿದಿದ್ದಾರೆ. ಮುಂದಿನ ವರ್ಷ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮೇಲೆ ಸಹ ದೇಶವಾಸಿಯಿಂದ ಹತ್ಯೆಯ ಪ್ರಯತ್ನ ನಡೆಯಬಹುದು. ಯುರೋಪ್‌ನಲ್ಲಿ ಹೆಚ್ಚಿದ ಭಯೋತ್ಪಾದಕ ದಾಳಿಯ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಮುಂದಿನ ವರ್ಷ “ದೊಡ್ಡ ದೇಶ” ಜೈವಿಕ ಶಸ್ತ್ರಾಸ್ತ್ರ ಪರೀಕ್ಷೆಗಳು ಅಥವಾ ದಾಳಿಗಳನ್ನು ನಡೆಸುತ್ತದೆ ಎಂದು ಭವಿಷ್ಯ ಹೇಳಿದ್ದಾರೆ.

ಮುಂದಿನ ವರ್ಷ ಜಾಗತಿಕ ಆರ್ಥಿಕತೆಯ ಮೇಲೆ ಪರಿಣಾಮ ಬೀರುವ ದೊಡ್ಡ ಆರ್ಥಿಕ ಬಿಕ್ಕಟ್ಟು ಉಂಟಾಗಲಿದೆ. ಹೆಚ್ಚುತ್ತಿರುವ ಸಾಲದ ಮಟ್ಟಗಳು ಮತ್ತು ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಯಂತಹ ಅಂಶಗಳು ಇದಕ್ಕೆ ಕಾರಣಗಳಾಗಿವೆ ಎಂದು ಬಾಬಾ ವಂಗಾ ಎಚ್ಚರಿಸಿದ್ದಾರೆ. ಮುಂದಿನ ವರ್ಷ ಭಯಾನಕ ಹವಾಮಾನ ಘಟನೆಗಳು ಮತ್ತು ನೈಸರ್ಗಿಕ ವಿಕೋಪಗಳು ಸಂಭವಿಸಲಿವೆ. ಸೈಬರ್ ದಾಳಿಗಳು ಹೆಚ್ಚಾಗುತ್ತವೆ. ಸುಧಾರಿತ ಹ್ಯಾಕರ್‌ಗಳು ಪವರ್ ಗ್ರಿಡ್‌ಗಳು ಮತ್ತು ನೀರಿನ ಸಂಸ್ಕರಣಾ ಘಟಕಗಳಂತಹ ನಿರ್ಣಾಯಕ ಮೂಲಸೌಕರ್ಯಗಳನ್ನು ಗುರಿಯಾಗಿಸುತ್ತಾರೆ. ಇದು ರಾಷ್ಟ್ರೀಯ ಭದ್ರತೆಗೆ ಅಪಾಯವನ್ನುಂಟು ಮಾಡುತ್ತದೆ ಎಂದಿದ್ದಾರೆ.

2024 ರಲ್ಲಿ ಆಲ್ಝೈಮರ್ ಮತ್ತು ಕ್ಯಾನ್ಸರ್ ಸೇರಿದಂತೆ ಗುಣಪಡಿಸಲಾಗದ ಕಾಯಿಲೆಗಳಿಗೆ ಹೊಸ ಚಿಕಿತ್ಸೆಗಳು ಬರಲಿವೆ. ಕ್ವಾಂಟಮ್ ಕಂಪ್ಯೂಟಿಂಗ್‌ನಲ್ಲಿ ಪ್ರಮುಖ ಪ್ರಗತಿಯಾಗಲಿದೆ ಎಂದು ಭವಿಷ್ಯವಾಣಿಯಲ್ಲಿ ತಿಳಿಸಿದ್ದಾರೆ. 1911 ರಲ್ಲಿ ಜನಿಸಿದ್ದ ಉತ್ತರ ಮ್ಯಾಸಿಡೋನಿಯಾದಲ್ಲಿ ಜನಿಸಿದ್ದರು. ಅವರು 1996 ರಲ್ಲಿ ನಿಧನರಾಗಿದ್ದಾರೆ. ಕುರುಡರಾಗಿದ್ದ ಬಲ್ಗೇರಿಯನ್ ಅತೀಂದ್ರಿಯ ಬಾಬಾ ವಂಗಾ ಅವರ ಭವಿಷ್ಯವಾಣಿಗಳು ಅವರ ಮರಣದ ನಂತರ ಬಹಳ ಕಾಲ ನಿಜವಾಯಿತು ಎಂದು ಹೇಳಲಾಗುತ್ತದೆ.

  • ಅಂತರ್ಜಾಲ ಮಾಹಿತಿ

Baba Vanga has predicted that 2024 will see an increase in extreme weather events and terrorist attacks. Baba Vanga, also known as the Nostradamus of the Balkans, predicted major world events such as the 9/11 terrorist attacks, the death of Princess Diana, the Chernobyl disaster and Brexit. In 2024 he has made seven predictions.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

1 hour ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

2 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

13 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

23 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

1 day ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

1 day ago