Advertisement
MIRROR FOCUS

ಸುನಾಮಿ ಭೀತಿಗೆ ನಲುಗಿದ್ದ ಫಿಲಿಪಿನ್ಸ್‌ನಲ್ಲಿ ಭಯೋತ್ಪಾದಕರ ದಾಳಿ | ಕ್ರೈಸ್ತರ ಸಾಮೂಹಿಕ ಪ್ರಾರ್ಥನೆ ವೇಳೆ ಘಟನೆ |

Share

ಪ್ರಭಲ ಭೂಕಂಪದಿಂದ(earthquake) ಸುನಾಮಿ(tsunami) ಭೀತಿ ಎದುರಿಸುತ್ತಿದ್ದ ಫಿಲಿಪಿನ್ಸ್‌( Philippines), ಭಾನುವಾರ ಬೆಳಿಗ್ಗೆ ಭಯೋತ್ಪಾದಕರ ದಾಳಿಗೆ(Terrorist attack) ನಲುಗಿದೆ. ದೇಶದ ದಕ್ಷಿಣ ಭಾಗದಲ್ಲಿರುವ ವಿಶ್ವವಿದ್ಯಾಲಯದ ಜಿಮ್ನಾಷಿಯಮ್‌ನಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಕ್ಯಾಥೊಲಿಕ್ ಕ್ರೈಸ್ತರ ಸಾಮೂಹಿಕ ಪ್ರಾರ್ಥನೆ(Mass Prayer) ವೇಳೆ ಸಂಭವಿಸಿದ ಬಾಂಬ್ ದಾಳಿಯಲ್ಲಿ(Bomb blast) ಕನಿಷ್ಠ 4 ಜನ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ.

ಭಯೋತ್ಪಾದಕರ ಕೃತ್ಯ ಎಂದು ಅಲ್ಲಿನ ಪೊಲೀಸರು ಹೇಳಿದ್ದು, ದೇಶದಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ ಎಂದು ಸೇನಾ ಮುಖ್ಯಸ್ಥರು ಹೇಳಿದ್ದಾರೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಅಧ್ಯಕ್ಷ ಫರ್ಡಿನಂಡ್ ಮಾರ್ಕೊಸ್ ಜೂನಿಯರ್‌, ‘ವಿದೇಶಿ ಭಯೋತ್ಪಾದಕರ ಪ್ರಜ್ಞಾಶೂನ್ಯ ಹಾಗೂ ಅತ್ಯಂತ ಹ್ಯೇಯ ಕೃತ್ಯವನ್ನು ಬಲವಾಗಿ ಖಂಡಿಸುತ್ತೇನೆ. ಮುಗ್ದರ ಮೇಲೆ ಹಿಂಸಾಚಾರ ನಡೆಸಿರುವ ತೀವ್ರವಾದಿಗಳು ನಮ್ಮ ಸಮಾಜದ ಶತ್ರುಗಳೇ ಆಗಿದ್ದಾರೆ’ ಎಂದು ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

2017ರಲ್ಲಿ ಐದು ತಿಂಗಳ ಕಾಲ ಭಯೋತ್ಪಾದಕರ ಹಿಡಿತದಲ್ಲಿ ಸಿಲುಕಿದ್ದ ಮಾರವಾಯ್‌ ನಗರದಲ್ಲೇ ಭಾನುವಾರ ಬಾಂಬ್ ದಾಳಿ ನಡೆದಿದೆ. ಇದೇ ಪ್ರದೇಶದಲ್ಲಿ ದವ್ಲಾಹ್  ಭಯೋತ್ಪಾದಕ ಗುಂಪಿಗೆ ಸೇರಿದ 11 ಜನರನ್ನು ಫಿಲಿಪಿನ್ಸ್ ಸೇನೆ ಶನಿವಾರ ಹತ್ಯೆಗೈದಿತ್ತು. ಜತೆಗೆ 10 ಅತ್ಯಾಧುನಿಕ ಬಂದೂಕು ಹಾಗೂ ಮೂರು ಸ್ಪೋಟಕಗಳನ್ನು ವಶಪಡಿಸಿಕೊಂಡಿದ್ದರು. ಅದೇ ಸ್ಥಳದಲ್ಲಿ ಭಾನುವಾರ ಬಾಂಬ್‌ ಸ್ಫೋಟಿಸಲಾಗಿದೆ. ದೇಶದ ನಾಗರಿಕರ ಸುರಕ್ಷತೆ ಹಾಗೂ ಭದ್ರತೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಹಾಗೂ ಸೇನೆಗೆ ನಿರ್ದೇಶಿಸಲಾಗಿದೆ. ಇಂಥ ಕೃತ್ಯ ಎಸಗಿದವರನ್ನು ನ್ಯಾಯದ ಎದುರು ತರುತ್ತೇವೆ ಎಂದು ಮಾರ್ಕೊಸ್ ಜೂನಿಯರ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೇಳಿದ್ದಾರೆ.

The Philippines, which was facing the threat of a tsunami due to a strong earthquake, was hit by a terrorist attack on Sunday morning. At least four people were killed and several others injured in a bomb attack that occurred during a mass prayer of Catholic Christians at a university gymnasium in the southern part of the country on Sunday.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago