Advertisement
ಸುದ್ದಿಗಳು

ಥೈಲ್ಯಾಂಡಿನಲ್ಲಿ ಅಡಿಕೆ ಬಳಕೆ ಇಳಿಕೆ – ರಾಷ್ಟ್ರವ್ಯಾಪಿ ನಿಯಂತ್ರಣ ನೀತಿ ಇಲ್ಲ | WHO ವೆಬಿನಾರ್‌ನಲ್ಲಿ ಪ್ರೊ. ಅನಕ್

Share

ಆಗ್ನೇಯ ಏಷ್ಯಾದಲ್ಲಿ ಅಡಿಕೆ ಬಳಕೆಯಿಂದ ಉಂಟಾಗುತ್ತಿರುವ ಆರೋಗ್ಯ ಅಪಾಯಗಳ ಕುರಿತು ವಿಶ್ವ ಆರೋಗ್ಯ ಸಂಸ್ಥೆ (WHO) ಆಯೋಜಿಸಿದ್ದ ವೆಬಿನಾರ್‌ನಲ್ಲಿ, ಥೈಲ್ಯಾಂಡಿನ ತಜ್ಞರು ಅಡಿಕೆ ಬಳಕೆ ನಿಯಂತ್ರಣದ ಬಗ್ಗೆ ಮಾತನಾಡಿದರು.ಥೈಲ್ಯಾಂಡಿನ ಚಿಯಾಂಗ್ ಮೈ ಮೂಲದ ಪ್ರೊಫೆಸರ್ ಅನಕ್ ಐ ಅಮರೂನ್ ಅವರು ಮಾತನಾಡಿ, “ಉತ್ತರ ಥೈಲ್ಯಾಂಡಿನಲ್ಲಿ ಅಡಿಕೆ ಜಗಿಯುವುದು ಕಡಿಮೆಯಾಗುತ್ತಿದೆ ಎಂಬುದು ಕಂಡುಬಂದರೂ, ರಾಷ್ಟ್ರವ್ಯಾಪಿ ಸಮೀಕ್ಷೆ ಇಲ್ಲದೆ ನಿಖರ ನಿರ್ಧಾರ ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಪ್ರೊ. ಅನಕ್ ಅವರ ಪ್ರಕಾರ, ಉತ್ತರ ಥೈಲ್ಯಾಂಡಿನಲ್ಲಿ ಬಾಯಿ ಕ್ಯಾನ್ಸರ್ ಸಂಭವನೀಯತೆಯ ಕುರಿತು ಎರಡು ಅಧ್ಯಯನ ಸರಣಿಗಳು ನಡೆದಿವೆ. ಅಧ್ಯಯನ ಫಲಿತಾಂಶದಲ್ಲಿ , ಬಾಯಿ ಕ್ಯಾನ್ಸರ್ ಪ್ರಮಾಣ ಏರಿಕೆಯಾಗುತ್ತಿರುವುದು ಹಾಗೂ ನಂತರ ಸ್ವಲ್ಪ ಮಟ್ಟಿಗೆ ಸ್ಥಿರಗೊಂಡರೂ, ಇದೀಗ ಮತ್ತೆ ಏರಿಕೆಯಾಗುವ ಸಾಧ್ಯತೆ ಎಂದು ಹೇಳಿದರು.

ಹಿಂದಿನ ಅಧ್ಯಯನಗಳಲ್ಲಿ ಸುಮಾರು 50% ರೋಗಿಗಳು ಅಡಿಕೆ ಜಗಿಯುತ್ತಿದ್ದರು, ಆದರೆ ಇತ್ತೀಚಿನ ಅಧ್ಯಯನದಲ್ಲಿ ಅದು ಕೇವಲ 14%ಕ್ಕೆ ಇಳಿದಿದೆ. ವಿಶೇಷವಾಗಿ 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಈಗ ಅಡಿಕೆ ಜಗಿಯುವ ಅಭ್ಯಾಸ ತೊರೆದಿರುವುದು ಕಂಡುಬಂದಿದೆ. ಆದರೂ ದೇಶದ ಬೇರೆ ಭಾಗಗಳಲ್ಲಿ ಪರಿಸ್ಥಿತಿ ಏನೆಂಬುದು ತಿಳಿಯಲು ಇನ್ನೂ ರಾಷ್ಟ್ರೀಯ ಸಮೀಕ್ಷೆ ಅಗತ್ಯವೆಂದು ಅವರು ಹೇಳಿದರು.

ಚಿಯಾಂಗ್ ಮೈನಲ್ಲಿ ತಾನು ವೈದ್ಯನಾಗಿ ಕಾರ್ಯನಿರ್ವಹಿಸುವಾಗ ಇನ್ನೂ ಅಡಿಕೆ ಬಳಕೆಯೊಂದಿಗೆ ಸಂಬಂಧಿಸಿದ ಬಾಯಿ ಕ್ಯಾನ್ಸರ್ ಪ್ರಕರಣಗಳನ್ನು ನೋಡುತ್ತಿದ್ದೇನೆ ಎಂದು ಪ್ರೊ. ಅನಕ್ ತಿಳಿಸಿದ್ದಾರೆ. ಅಡಿಕೆ ಬಳಕೆಯಿಂದ ಹಲ್ಲುಗಳಲ್ಲಿ ಕಪ್ಪು ಕಲೆ ಹಾಗೂ ಬಾಯಿಯ ಒಳಭಾಗದಲ್ಲಿ ಕ್ಯಾನ್ಸರ್ ಉಂಟಾಗುವ ದೃಶ್ಯಗಳನ್ನು ಅವರು ಉದಾಹರಣೆ ಸಹಿತ ಹೇಳಿದರು.

ಪ್ರೊ. ಅನಕ್ ಐ  ಅಮರೂನ್ ಅವರು ಅಡಿಕೆ ನಿಯಂತ್ರಣಕ್ಕೆ ಮೂರು ಹಂತದ ಕ್ರಮಗಳನ್ನು ಸೂಚಿಸಿದರು: ಸರ್ಕಾರ ಮತ್ತು ಸಾರ್ವಜನಿಕ ಸಂಸ್ಥೆಗಳು ಕೈಜೋಡಿಸಿ ಬಾಯಿ ಕ್ಯಾನ್ಸರ್ ಅಪಾಯದ ಕುರಿತು ಜನರಲ್ಲಿ ಅರಿವು ಮೂಡಿಸಬೇಕು. ತಂಬಾಕು ಮತ್ತು ಮದ್ಯದಂತೆ ಅಡಿಕೆಯ ಮೇಲೂ ರಾಷ್ಟ್ರವ್ಯಾಪಿ ನಿಯಮ ಅಥವಾ ನೀತಿ ಇಲ್ಲ. ಹೀಗಾಗಿ ಸರ್ಕಾರ ತಕ್ಷಣ ನೀತಿ ರೂಪಿಸಬೇಕೆಂದು ಅವರು ಹೇಳಿದರು.

ಮ್ಯಾನ್ಮಾರ್, ಕಂಬೋಡಿಯಾ, ಲಾವೋಸ್ ದೇಶಗಳಿಂದ ಬಂದ ಕಾರ್ಮಿಕರಲ್ಲಿ ಇನ್ನೂ ಅಡಿಕೆ ಬಳಕೆ ಮುಂದುವರಿದಿದೆ. ಬಹುತೇಕ ಪ್ರದೇಶಗಳ ಮಾರುಕಟ್ಟೆಗಳಲ್ಲಿ ಅಡಿಕೆ ಮಾರಾಟ ನಡೆಯುತ್ತಿರುವುದು ದೊಡ್ಡ ಅನುಷ್ಠಾನ ಸವಾಲಾಗಿದೆ. ಗಡಿ ವ್ಯಾಪಾರ ನಿಯಂತ್ರಣ ಹಾಗೂ ಈ ಸಮುದಾಯಗಳಲ್ಲಿ ಶಿಕ್ಷಣ ಅಗತ್ಯ ಎಂದು ಅವರು ಹೇಳಿದರು.

ದಂತವೈದ್ಯರು, ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ಅಡಿಕೆ ಬಳಕೆದಾರರನ್ನು ಗುರುತಿಸಿ, ಅವರಿಗೆ Oral Submucous Fibrosis, ಪ್ರಾರಂಭಿಕ ಹಂತದ ಬಾಯಿ ಕ್ಯಾನ್ಸರ್ ತಪಾಸಣೆ ನಡೆಸಿ ತಕ್ಷಣ ಮಾಡಬೇಕು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಬಾಯಿ ಕ್ಯಾನ್ಸರ್ ಗುಣಮುಖರಾದವರೂ ಸಹ ಅಡಿಕೆ, ಧೂಮಪಾನ, ಮದ್ಯ ಸೇವನೆ ಸಂಪೂರ್ಣವಾಗಿ ನಿಲ್ಲಿಸಬೇಕು. ಇಲ್ಲದಿದ್ದರೆ ಕ್ಯಾನ್ಸರ್ ಮರುಕಳಿಸುವ ಹಾಗೂ ಎರಡನೇ ಗಡ್ಡೆ ಉಂಟಾಗುವ ಅಪಾಯ ಹೆಚ್ಚಾಗುತ್ತದೆ ಎಂದು ಎಚ್ಚರಿಸಿದರು.

ಒಟ್ಟಾರೆ, ಥೈಲ್ಯಾಂಡಿನಲ್ಲಿ ಅಡಿಕೆ ಬಳಕೆ ಕಡಿಮೆಯಾಗುತ್ತಿರುವ ಸೂಚನೆಗಳಿದ್ದರೂ, ಗಡಿ ವ್ಯಾಪಾರ, ಕಾನೂನು ಕೊರತೆ ಹಾಗೂ ಜನಜಾಗೃತಿ ಅಭಾವದಿಂದ ಸಮಸ್ಯೆ ಇನ್ನೂ ಮುಂದುವರಿದಿದೆ ಎಂದು  ಅಭಿಪ್ರಾಯಪಟ್ಟರು.

ಇದನ್ನೂ ಓದಿ…

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

1 day ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

1 day ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

1 day ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

2 days ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

2 days ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

2 days ago