Advertisement
ರಾಷ್ಟ್ರೀಯ

‘ಥ್ಯಾಂಕ್ ಗಾಡ್’ ಸಿನಿಮಾವನ್ನು ನಿಷೇಧಿಸಿ | ಹಿಂದೂ ದೇವತೆಗಳ ಅಪಹಾಸ್ಯವನ್ನು ಸಹಿಸುವುದಿಲ್ಲ | ಹಿಂದೂ ಜನಜಾಗೃತಿ ಸಮಿತಿಯ ಎಚ್ಚರಿಕೆ |

Share

ನಟ ಅಜಯ ದೇವಗನ ಅಭಿನಯದ ‘ಥ್ಯಾಂಕ್ ಗಾಡ್’ ಚಲನಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ. ಈ ಚಿತ್ರದ ಮೂಲಕ ಹಿಂದೂ ಭಾವನೆಗಳಿಗೆ ಧಕ್ಕೆಯಾಗಿರುವುದರಿಂದ ಈ ಚಲನಚಿತ್ರದ ಮೇಲೆ ನಿಷೇಧ ಹೇರಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ಆಗ್ರಹಿಸಿದೆ.

‘ಥ್ಯಾಂಕ್ ಗಾಡ್’(Thank God) ಚಲನಚಿತ್ರದಲ್ಲಿ ಹಿಂದೂ ಧರ್ಮದಲ್ಲಿ ಮೃತ್ಯುವಿನ ನಂತರ ಪ್ರತಿಯೊಬ್ಬರ ಪಾಪ-ಪುಣ್ಯಗಳನ್ನು ಲೆಕ್ಕ ಹಾಕುವ ‘ಚಿತ್ರಗುಪ್ತ’ ದೇವರು ಮತ್ತು ಮೃತ್ಯುವಿನ ನಂತರ ಆತ್ಮವನ್ನು ತೆಗೆದುಕೊಂಡು ಹೋಗುವ ‘ಯಮದೇವತೆ’ಯನ್ನು ಆಧುನಿಕ ರೂಪದಲ್ಲಿ ತೋರಿಸಲಾಗಿದೆ. ಅವರನ್ನು ನಿಷ್ಪ್ರಯೋಜಕ ಹಾಸ್ಯದ ಮಾತುಗಳನ್ನಾಡುವಂತೆ ತೋರಿಸಲಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಹಿಂದೂ ಧರ್ಮದ ಚಿತ್ರಗುಪ್ತ ಮತ್ತು ಯಮ ದೇವರ ಅಪಹಾಸ್ಯವನ್ನು ನಾವು ಎಂದಿಗೂ ಸಹಿಸುವುದಿಲ್ಲ. ಈ ಟ್ರೇಲರ್ ಬಿಡುಗಡೆ ಆಗುವವರೆಗೂ ಸೆನ್ಸಾರ್ ಮಂಡಳಿ ನಿದ್ರೆ ಮಾಡುತ್ತಿತ್ತೇ ? ಸೆನ್ಸಾರ್ ಮಂಡಳಿ ಈ ಚಲನಚಿತ್ರಕ್ಕೆ ಸರ್ಟಿಫಿಕೇಟ್ ನೀಡಬಾರದು, ಇಲ್ಲದಿದ್ದರೆ ನಾವು ಬೀದಿಗಿಳಿದು ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆಯನ್ನು ನೀಡುತ್ತಾ ರಾಜ್ಯ ಹಾಗೂ ಕೇಂದ್ರ ಗೃಹಸಚಿವಾಲಯವು ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿರುವ ಈ ಚಲನಚಿತ್ರದ ಮೇಲೆ ನಿಷೇಧ ಹೇರಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ಆಗ್ರಹಿಸಿದೆ.

ಈ ಚಲನಚಿತ್ರದಲ್ಲಿ ಹಿಂದೂಗಳ ಧಾರ್ಮಿಕ ಪರಿಕಲ್ಪನೆಗಳು ಮತ್ತು ದೇವತೆಗಳನ್ನು ಅಪಹಾಸ್ಯ ಮಾಡುವ ಮೂಲಕ ಹಿಂದೂಗಳ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಲಾಗಿದೆ. ಈ ಚಲನಚಿತ್ರದ ಕೆಲವು ದೃಶ್ಯಗಳು ಮತ್ತು ಸಂಭಾಷಣೆಗಳನ್ನು ಮಾತ್ರ ಬಹಿರಂಗಪಡಿಸಲಾಗಿದೆ. ಪ್ರತ್ಯಕ್ಷದಲ್ಲಿ ಪೂರ್ಣ ಚಲನಚಿತ್ರದಲ್ಲಿ ಇನ್ನಷ್ಟು ಆಕ್ಷೇಪಾರ್ಹ ಸಂಭಾಷಣೆಗಳನ್ನು ಹೊಂದಿರುವುದನ್ನು ಅಲ್ಲಗಳೆಯಲು ಸಾಧ್ಯವಿಲ್ಲ.

ಈ ಚಲನಚಿತ್ರದಲ್ಲಿ ಅಜಯ ದೇವಗನನನ್ನು ಸೂಟು-ಬೂಟುಗಳನ್ನು ಧರಿಸಿ ಆಧುನಿಕ ‘ಚಿತ್ರಗುಪ್ತ’ನಾಗಿ ತೋರಿಸಿ ಯಮದೂತನನ್ನು ’ವೈ.ಡಿ.’ ಎಂದು ಅಪಭ್ರಂಶ ಮಾಡಿದ ಹೆಸರಿನಲ್ಲಿ ಕರೆಯಲಾಗಿದೆ. ಹಿಂದೂ ಧರ್ಮ ಶಾಸ್ತ್ರಕ್ಕನುಸಾರ, ಒಬ್ಬ ವ್ಯಕ್ತಿಯು ಮೃತಪಟ್ಟಾಗ ಚಿತ್ರಗುಪ್ತನು ಅವನ ಪಾಪ-ಪುಣ್ಯಗಳನ್ನು ಲೆಕ್ಕ ಹಾಕುತ್ತಾನೆ. ಹೀಗಿರುವಾಗ ಈ ಪರಿಕಲ್ಪನೆಯನ್ನು ಛಿದ್ರ ಮಾಡಿ ನಟ ಸಿದ್ಧಾರ್ಥ್ ಮಲ್ಹೋತ್ರಾ ಮೃತಪಟ್ಟಿದ್ದರೂ ಆತನಿಗೆ ಚಿತ್ರಗುಪ್ತನ ಆಸ್ಥಾನಕ್ಕೆ ಕರೆದೊಯ್ಯುವುದನ್ನು ತೋರಿಸಲಾಗಿದೆ. ಅಲ್ಲಿ ಚಿತ್ರಗುಪ್ತನು ಅವನೊಂದಿಗೆ ‘ಗೇಮ ಆಫ್ ಲೈಫ್’ ಆಡುವುದನ್ನು ತೋರಿಸಲಾಗಿದೆ. ಒಟ್ಟಿನಲ್ಲಿ ಹಿಂದೂ ಧರ್ಮದಲ್ಲಿನ ಒಂದು ಉದಾತ್ತ ಪರಿಕಲ್ಪನೆಯನ್ನು ‘ಕಾಮೆಡಿ’ದ ಹೆಸರಿನಲ್ಲಿ ತಪ್ಪಾಗಿ ಮತ್ತು ಆಕ್ಷೇಪಾರ್ಹವಾಗಿ ತೋರಿಸಿ ಅಪಹಾಸ್ಯ ಮಾಡಲಾಗಿದೆ.

ಈ ಹಿಂದೆಯೂ, ‘ಪಿಕೆ’, ‘ಓ ಮೈ ಗಾಡ್’, ‘ಸಿಂಗಮ್ ರಿಟರ್ನ್ಸ್’, ’ತಾಂಡವ್’ ನಂತಹ ಅನೇಕ ಚಲನಚಿತ್ರಗಳು ಮತ್ತು ವೆಬ್ ಸಿರೀಸ್ ಗಳು ಹಿಂದೂ ಧರ್ಮ, ದೇವತೆಗಳು, ಸಾಧುಸಂತರನ್ನು ಗುರಿಯಾಗಿಸಿಕೊಂಡಿವೆ. ಹಿಂದೂಗಳ ಆಚಾರ-ವಿಚಾರಗಳ ಬಗ್ಗೆ ಹಾಸ್ಯ ಚಟಾಕಿ ಹಾರಿಸಿ ಅವರ ಬಗ್ಗೆ ದ್ವೇಷ ಹುಟ್ಟಿಸುತ್ತಾರೆ. ಇದನ್ನೆಲ್ಲ ತಡೆಯಲು ಕೇಂದ್ರ ಸರಕಾರ ಕೂಡಲೇ ಕಠಿಣ ಕಾನೂನು ರೂಪಿಸಬೇಕಿದೆ. ಅಲ್ಲದೇ ಸೆನ್ಸಾರ್ ಮಂಡಳಿಯಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳುವ ಧಾರ್ಮಿಕ ಪ್ರತಿನಿಧಿಗಳು ಇರಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯು ಆಗ್ರಹಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

1 day ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

2 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago