ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೋವಿಡ್ ಸೋಂಕು ದೃಢವಾಗಿದ್ದು, ಶನಿವಾರ ಅವರು ಕೋವಿಡ್ ಟೆಸ್ಟ್ ಮಾಡಿಸಿಕೊಂಡಿದ್ದರು, ಪರೀಕ್ಷೆಯಲ್ಲಿ ತಗುಲಿರುವುದು ಧೃಡಪಟ್ಟಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು ಯಾವುದೇ ಆರೋಗ್ಯ ಸಂಬಂಧಿ ಸಮಸ್ಯೆ ಇಲ್ಲ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭು ಶಂಕರ್ ತಿಳಿಸಿದ್ದಾರೆ.
ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ಮಾನ್ಯ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಕೊರೋನಾ ಸೋಂಕಿನಿಂದ ಶೀಘ್ರವಾಗಿ ಗುಣಮುಖರಾಗಿ ಎಂದಿನಂತೆ ತಮ್ಮ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel