ಮಣಿಪುರ | 4 ಕಡೆಗಳಲ್ಲಿ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ | 53 ಲಾರಿಗಳಿಂದ 10,855 ಚೀಲ ಕಳ್ಳಸಾಗಾಣಿಕೆಯ ಅಡಿಕೆ ವಶ |

November 16, 2024
12:02 AM

ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ ತಂಡವು 53 ಲಾರಿಗಳಿಂದ 10,855 ಚೀಲಗಳ ಕಳ್ಳಸಾಗಾಣಿಕೆಯ ಅಡಿಕೆಯನ್ನು ವಶಕ್ಕೆ ಪಡೆದಿದೆ.  ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸುಮಾರು 74.52 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದೆ.ಮಣಿಪುರದ ತೆಂಗ್ನೌಪಾಲ್ ಜಿಲ್ಲೆಯಾದ್ಯಂತ ನಾಲ್ಕು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಈ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ.

Advertisement

ಇದು ಈ ವರ್ಷದ ಅತಿ ದೊಡ್ಡ ಅಕ್ರಮ ಸಾಗಾಟದ ತಡೆಯಾಗಿದ್ದು, ತನಿಖೆ ನಡೆಯುತ್ತಿದೆ. ಗುಪ್ತಚರ ಮಾಹಿತಿಯ ಆಧಾರದ ಮೇಲೆ ನರುಮ್‌ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ 23 ಕೋಟಿ ಮೌಲ್ಯದ 3,400 ಚೀಲ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಸ್ಸಾಂ ರೈಫಲ್ಸ್ ವಿಭಾಗವು ಹೇಳಿಕೆ ನೀಡಿದೆ. ಆ ಬಳಿಕ ಸೀತಾ ಗ್ರಾಮದಲ್ಲಿ ಅಂದಾಜು 20,400 ಕೆಜಿ ತೂಕದ 1.76 ಕೋಟಿ ಮೌಲ್ಯದ 255 ಚೀಲಗಳನ್ನು ಜಪ್ತಿ ಮಾಡಲಾಗಿದೆ. ಆರ್‌ಆರ್‌ಸಿ ಗ್ರಾಮದಲ್ಲಿ ನಡೆದ ಮತ್ತೊಂದು ಕಾರ್ಯಾಚರಣೆಯಲ್ಲಿ 400 ಚೀಲಗಳು, ಒಟ್ಟು 32,000 ಕೆಜಿ ಮತ್ತು ಲಾಮ್‌ಲಾಂಗ್‌ ಖುನೂ ಎಂಬಲ್ಲಿ  5,44,000 ಕೆಜಿ ತೂಕದ 6,800 ಚೀಲಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅಂದಾಜು ಮೌಲ್ಯ 47 ಕೋಟಿ ರೂಪಾಯಿಗಳಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. (Source:UNI )

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಒತ್ತುವರಿಯಾಗಿರುವ  ಕೆರೆಗಳನ್ನು ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿ ಸೂಚನೆ
April 25, 2025
7:47 AM
by: The Rural Mirror ಸುದ್ದಿಜಾಲ
ಭಾರತದಿಂದ ಅಫ್ಘಾನಿಸ್ತಾನಕ್ಕೆ 4.8 ಟನ್ ಜೀವರಕ್ಷಕ ಲಸಿಕೆ ರವಾನೆ
April 25, 2025
7:42 AM
by: The Rural Mirror ಸುದ್ದಿಜಾಲ
ಭ್ರಷ್ಟಾಚಾರದ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ  | ಉಪಲೋಕಾಯುಕ್ತ ಬಿ. ವೀರಪ್ಪ ಎಚ್ಚರಿಕೆ
April 25, 2025
7:31 AM
by: The Rural Mirror ಸುದ್ದಿಜಾಲ
ಸಂಜೀವಿನಿ ಸ್ವ ಸಹಾಯ ಸಂಘಗಳ ಸದಸ್ಯರ ಉತ್ಪನ್ನಗಳ ಪ್ರದರ್ಶನ ಮಾರಾಟ ಮೇಳ | ಜಿಲ್ಲೆಯ ಅತ್ಯುತ್ತಮ ಕೃಷಿ ಸಖಿ ಪ್ರಶಸ್ತಿ ಸಂಪಾಜೆ ಮೋಹಿನಿ ವಿಶ್ವನಾಥ್ ಅವರಿಗೆ
April 24, 2025
9:47 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group