ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ ತಂಡವು 53 ಲಾರಿಗಳಿಂದ 10,855 ಚೀಲಗಳ ಕಳ್ಳಸಾಗಾಣಿಕೆಯ ಅಡಿಕೆಯನ್ನು ವಶಕ್ಕೆ ಪಡೆದಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸುಮಾರು 74.52 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದೆ.ಮಣಿಪುರದ ತೆಂಗ್ನೌಪಾಲ್ ಜಿಲ್ಲೆಯಾದ್ಯಂತ ನಾಲ್ಕು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಈ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ.
ಇದು ಈ ವರ್ಷದ ಅತಿ ದೊಡ್ಡ ಅಕ್ರಮ ಸಾಗಾಟದ ತಡೆಯಾಗಿದ್ದು, ತನಿಖೆ ನಡೆಯುತ್ತಿದೆ. ಗುಪ್ತಚರ ಮಾಹಿತಿಯ ಆಧಾರದ ಮೇಲೆ ನರುಮ್ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ 23 ಕೋಟಿ ಮೌಲ್ಯದ 3,400 ಚೀಲ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಸ್ಸಾಂ ರೈಫಲ್ಸ್ ವಿಭಾಗವು ಹೇಳಿಕೆ ನೀಡಿದೆ. ಆ ಬಳಿಕ ಸೀತಾ ಗ್ರಾಮದಲ್ಲಿ ಅಂದಾಜು 20,400 ಕೆಜಿ ತೂಕದ 1.76 ಕೋಟಿ ಮೌಲ್ಯದ 255 ಚೀಲಗಳನ್ನು ಜಪ್ತಿ ಮಾಡಲಾಗಿದೆ. ಆರ್ಆರ್ಸಿ ಗ್ರಾಮದಲ್ಲಿ ನಡೆದ ಮತ್ತೊಂದು ಕಾರ್ಯಾಚರಣೆಯಲ್ಲಿ 400 ಚೀಲಗಳು, ಒಟ್ಟು 32,000 ಕೆಜಿ ಮತ್ತು ಲಾಮ್ಲಾಂಗ್ ಖುನೂ ಎಂಬಲ್ಲಿ 5,44,000 ಕೆಜಿ ತೂಕದ 6,800 ಚೀಲಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅಂದಾಜು ಮೌಲ್ಯ 47 ಕೋಟಿ ರೂಪಾಯಿಗಳಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. (Source:UNI )
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…