ಬರಗಾಲ, ಬೆಲೆ ಏರಿಕೆ ಸಮಯದಲ್ಲಿ ಬೆಳೆ ಉಳಿಸಿಕೊಳ್ಳುವುದೇ ದೊಡ್ಡ ಸವಾಲು | ಮೆಣಸಿನಕಾಯಿ ಬೆಳೆ ರಕ್ಷಿಸಲು ಸಿಸಿಟಿವಿ ಅಳವಡಿಸಿದ ರೈತ |

January 9, 2024
12:28 PM

ಕಳೆದ 5-6 ತಿಂಗಳ ಹಿಂದೆ ಟೊಮೆಟೋ(Tomato) ರೈತರ(Farmer) ಕಥೆಯೂ ಇದೇ ಆಗಿತ್ತು. ತರಕಾರಿ(Vegetable) ಬೆಲೆ ಏರಿದರೆ(Price hike) ರೈತರಿಗೆ ಕಳ್ಳರ(Thief) ಕಾಟ ತಪ್ಪಿದ್ದಲ್ಲ. ಟೊಮೆಟೋ, ಅಡಿಕೆ ಈಗ ಮೆಣಸಿನ ಕಾಯಿ (Chilly) ಬೆಳೆಗೆ ಕಳ್ಳರ ಕಾಟ ಆರಂಭವಾಗಿದೆ. ಬರಗಾಲ(Drought) ಬಂದಾಗಲೆಲ್ಲಾ ಕಳ್ಳತನ ಪ್ರಕರಣಗಳು ಸಾಮಾನ್ಯವಾಗಿ ಹೆಚ್ಚಾಗುತ್ತವೆ. ಆದರೆ ಈ ಬಾರಿಯ ಬರಗಾಲ ಹೊಸ ರೀತಿಯ ಕಳ್ಳತನಕ್ಕೆ ನಾಂದಿ ಹಾಡಿದೆ. ರಾಯಚೂರು(Raichur) ಜಿಲ್ಲೆಯಲ್ಲಿ ರೈತರಿಗೆ ತಮ್ಮ ಬೆಳೆಗಳನ್ನ ಕಳ್ಳರಿಂದ ಕಾಪಾಡಿಕೊಳ್ಳುವುದೇ ದೊಡ್ಡ ಸವಾಲಾಗಿದೆ. ಹೀಗಾಗಿ ಇಲ್ಲೊಬ್ಬ ರೈತ ಜಮೀನಿಗೆ ಸಿಸಿ ಕ್ಯಾಮೆರಾ (CCTV) ಅಳವಡಿಸಿದ್ದಾನೆ.

ರಾಜ್ಯದಲ್ಲಿ ತೀವ್ರ ಬರಗಾಲದಿಂದ ರೈತನ ಪರಿಸ್ಥಿತಿಯಂತೂ ಹೇಳತೀರದ್ದಾಗಿದೆ. ಹೀಗಿರುವಾಗ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಮೆಣಸಿನಕಾಯಿ ಬೆಳೆದಿರುವ ರಾಯಚೂರು  ಜಿಲ್ಲೆಯ ರೈತರಿಗೆ ಕಳ್ಳರ ಕಾಟ ಶುರುವಾಗಿದೆ. ಈ ಮೊದಲು ಹತ್ತಿ, ತೊಗರಿ ಕಳ್ಳತನ ಮಾಡುತ್ತಿದ್ದ ಕಳ್ಳರು ಈಗ ಮೆಣಸಿನಕಾಯಿಯ ಮೇಲೆ ಕಣ್ಣಿಟ್ಟಿದ್ದಾರೆ. ರಾತ್ರೋರಾತ್ರಿ ಗಿಡಸಮೇತ ಮೇಣಕಾಸಿನಯನ್ನು ಕದ್ದು ಎಸ್ಕೇಪ್ ಆಗುತ್ತಿದ್ದಾರೆ. ಇದರಿಂದ ಬೇಸತ್ತ ರೈತ ಜಮೀನಿನಲ್ಲಿ ಸಿಸಿ ಕ್ಯಾಮರಾ ಅಳವಡಿಸಿದ್ದಾನೆ. ಆದರೂ ಕಳ್ಳರ ಭಯ ಇರುವುದರಿಂದ ರಾತ್ರಿ ಹೊತ್ತು ಜಮೀನಿನಲ್ಲೇ ಮಲಗುತ್ತಾರೆ.

ಮಳೆ ಕೊರತೆಯಿಂದ ಜಮೀನಿಗೆ ನೀರು ಬೀಡಲು ಸಾಕಷ್ಟು ಹಣ ಖರ್ಚು ಮಾಡಿರುವ ರೈತರು, ಕೀಟನಾಶಕ, ಗೊಬ್ಬರ ಅಂತ ಎಕರೆಗೆ ಲಕ್ಷಾಂತರ ರೂಪಾಯಿ ಸುರಿದಿದ್ದಾರೆ. ಎಕರೆಗೆ 10 ರಿಂದ 12 ಕ್ವಿಂಟಾಲ್ ಬೆಳೆ ನಿರೀಕ್ಷೆಯಿದ್ದು, ಆ ಪೈಕಿ 2-3 ಕ್ವಿಂಟಾಲ್ ಕಳ್ಳರ ಪಾಲಾದ್ರೆ ನಮಗೆ ಉಳಿಯುವುದೇನು ಅಂತ ರೈತರು ಆತಂಕಗೊಂಡಿದ್ದಾರೆ. ಹೀಗಾಗಿ ಪೊಲೀಸ್ ಇಲಾಖೆ ಬೆಳೆ ರಕ್ಷಣೆಗೆ ಸಹಾಯ ಮಾಡಬೇಕು ಅಂತ ರೈತರು ಒತ್ತಾಯಿಸಿದ್ದಾರೆ.

ಬರಗಾಲ ರೈತರನ್ನ ಮಾತ್ರ ಸಂಕಷ್ಟಕ್ಕೆ ಸಿಲುಕಿಸಿಲ್ಲ. ಜೊತೆಗೆ ಹೊಸ ರೀತಿಯ ಕಳ್ಳತನಕ್ಕೂ ದಾರಿ ಮಾಡಿಕೊಟ್ಟಿದೆ. ಬೆಳೆಯನ್ನ ಮಾರುಕಟ್ಟೆಗೆ ತೆಗೆದುಕೊಂಡು ಹೋಗುವವರೆಗೂ ರೈತರಿಗೆ ನಿದ್ದೆಯಿಲ್ಲದಂತಾಗಿದೆ. ರೈತರ ಕಷ್ಟಕ್ಕೆ ಕೂಡಲೇ ಪರಿಹಾರ ಸಿಗಬೇಕಿದೆ.

Cases of theft usually increase whenever there is a drought. But this drought has ushered in a new kind of theft. The biggest challenge for farmers in Raichur district is to protect their crops from thieves. Therefore, a farmer here has installed a CC camera (CCTV) for his farm.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!
July 15, 2026
9:49 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror