ಕಳೆದ 5-6 ತಿಂಗಳ ಹಿಂದೆ ಟೊಮೆಟೋ(Tomato) ರೈತರ(Farmer) ಕಥೆಯೂ ಇದೇ ಆಗಿತ್ತು. ತರಕಾರಿ(Vegetable) ಬೆಲೆ ಏರಿದರೆ(Price hike) ರೈತರಿಗೆ ಕಳ್ಳರ(Thief) ಕಾಟ ತಪ್ಪಿದ್ದಲ್ಲ. ಟೊಮೆಟೋ, ಅಡಿಕೆ ಈಗ ಮೆಣಸಿನ ಕಾಯಿ (Chilly) ಬೆಳೆಗೆ ಕಳ್ಳರ ಕಾಟ ಆರಂಭವಾಗಿದೆ. ಬರಗಾಲ(Drought) ಬಂದಾಗಲೆಲ್ಲಾ ಕಳ್ಳತನ ಪ್ರಕರಣಗಳು ಸಾಮಾನ್ಯವಾಗಿ ಹೆಚ್ಚಾಗುತ್ತವೆ. ಆದರೆ ಈ ಬಾರಿಯ ಬರಗಾಲ ಹೊಸ ರೀತಿಯ ಕಳ್ಳತನಕ್ಕೆ ನಾಂದಿ ಹಾಡಿದೆ. ರಾಯಚೂರು(Raichur) ಜಿಲ್ಲೆಯಲ್ಲಿ ರೈತರಿಗೆ ತಮ್ಮ ಬೆಳೆಗಳನ್ನ ಕಳ್ಳರಿಂದ ಕಾಪಾಡಿಕೊಳ್ಳುವುದೇ ದೊಡ್ಡ ಸವಾಲಾಗಿದೆ. ಹೀಗಾಗಿ ಇಲ್ಲೊಬ್ಬ ರೈತ ಜಮೀನಿಗೆ ಸಿಸಿ ಕ್ಯಾಮೆರಾ (CCTV) ಅಳವಡಿಸಿದ್ದಾನೆ.
ರಾಜ್ಯದಲ್ಲಿ ತೀವ್ರ ಬರಗಾಲದಿಂದ ರೈತನ ಪರಿಸ್ಥಿತಿಯಂತೂ ಹೇಳತೀರದ್ದಾಗಿದೆ. ಹೀಗಿರುವಾಗ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಮೆಣಸಿನಕಾಯಿ ಬೆಳೆದಿರುವ ರಾಯಚೂರು ಜಿಲ್ಲೆಯ ರೈತರಿಗೆ ಕಳ್ಳರ ಕಾಟ ಶುರುವಾಗಿದೆ. ಈ ಮೊದಲು ಹತ್ತಿ, ತೊಗರಿ ಕಳ್ಳತನ ಮಾಡುತ್ತಿದ್ದ ಕಳ್ಳರು ಈಗ ಮೆಣಸಿನಕಾಯಿಯ ಮೇಲೆ ಕಣ್ಣಿಟ್ಟಿದ್ದಾರೆ. ರಾತ್ರೋರಾತ್ರಿ ಗಿಡಸಮೇತ ಮೇಣಕಾಸಿನಯನ್ನು ಕದ್ದು ಎಸ್ಕೇಪ್ ಆಗುತ್ತಿದ್ದಾರೆ. ಇದರಿಂದ ಬೇಸತ್ತ ರೈತ ಜಮೀನಿನಲ್ಲಿ ಸಿಸಿ ಕ್ಯಾಮರಾ ಅಳವಡಿಸಿದ್ದಾನೆ. ಆದರೂ ಕಳ್ಳರ ಭಯ ಇರುವುದರಿಂದ ರಾತ್ರಿ ಹೊತ್ತು ಜಮೀನಿನಲ್ಲೇ ಮಲಗುತ್ತಾರೆ.
ಮಳೆ ಕೊರತೆಯಿಂದ ಜಮೀನಿಗೆ ನೀರು ಬೀಡಲು ಸಾಕಷ್ಟು ಹಣ ಖರ್ಚು ಮಾಡಿರುವ ರೈತರು, ಕೀಟನಾಶಕ, ಗೊಬ್ಬರ ಅಂತ ಎಕರೆಗೆ ಲಕ್ಷಾಂತರ ರೂಪಾಯಿ ಸುರಿದಿದ್ದಾರೆ. ಎಕರೆಗೆ 10 ರಿಂದ 12 ಕ್ವಿಂಟಾಲ್ ಬೆಳೆ ನಿರೀಕ್ಷೆಯಿದ್ದು, ಆ ಪೈಕಿ 2-3 ಕ್ವಿಂಟಾಲ್ ಕಳ್ಳರ ಪಾಲಾದ್ರೆ ನಮಗೆ ಉಳಿಯುವುದೇನು ಅಂತ ರೈತರು ಆತಂಕಗೊಂಡಿದ್ದಾರೆ. ಹೀಗಾಗಿ ಪೊಲೀಸ್ ಇಲಾಖೆ ಬೆಳೆ ರಕ್ಷಣೆಗೆ ಸಹಾಯ ಮಾಡಬೇಕು ಅಂತ ರೈತರು ಒತ್ತಾಯಿಸಿದ್ದಾರೆ.
ಬರಗಾಲ ರೈತರನ್ನ ಮಾತ್ರ ಸಂಕಷ್ಟಕ್ಕೆ ಸಿಲುಕಿಸಿಲ್ಲ. ಜೊತೆಗೆ ಹೊಸ ರೀತಿಯ ಕಳ್ಳತನಕ್ಕೂ ದಾರಿ ಮಾಡಿಕೊಟ್ಟಿದೆ. ಬೆಳೆಯನ್ನ ಮಾರುಕಟ್ಟೆಗೆ ತೆಗೆದುಕೊಂಡು ಹೋಗುವವರೆಗೂ ರೈತರಿಗೆ ನಿದ್ದೆಯಿಲ್ಲದಂತಾಗಿದೆ. ರೈತರ ಕಷ್ಟಕ್ಕೆ ಕೂಡಲೇ ಪರಿಹಾರ ಸಿಗಬೇಕಿದೆ.
Cases of theft usually increase whenever there is a drought. But this drought has ushered in a new kind of theft. The biggest challenge for farmers in Raichur district is to protect their crops from thieves. Therefore, a farmer here has installed a CC camera (CCTV) for his farm.
– ಅಂತರ್ಜಾಲ ಮಾಹಿತಿ
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…