Advertisement
MIRROR FOCUS

ಬರಗಾಲ, ಬೆಲೆ ಏರಿಕೆ ಸಮಯದಲ್ಲಿ ಬೆಳೆ ಉಳಿಸಿಕೊಳ್ಳುವುದೇ ದೊಡ್ಡ ಸವಾಲು | ಮೆಣಸಿನಕಾಯಿ ಬೆಳೆ ರಕ್ಷಿಸಲು ಸಿಸಿಟಿವಿ ಅಳವಡಿಸಿದ ರೈತ |

Share

ಕಳೆದ 5-6 ತಿಂಗಳ ಹಿಂದೆ ಟೊಮೆಟೋ(Tomato) ರೈತರ(Farmer) ಕಥೆಯೂ ಇದೇ ಆಗಿತ್ತು. ತರಕಾರಿ(Vegetable) ಬೆಲೆ ಏರಿದರೆ(Price hike) ರೈತರಿಗೆ ಕಳ್ಳರ(Thief) ಕಾಟ ತಪ್ಪಿದ್ದಲ್ಲ. ಟೊಮೆಟೋ, ಅಡಿಕೆ ಈಗ ಮೆಣಸಿನ ಕಾಯಿ (Chilly) ಬೆಳೆಗೆ ಕಳ್ಳರ ಕಾಟ ಆರಂಭವಾಗಿದೆ. ಬರಗಾಲ(Drought) ಬಂದಾಗಲೆಲ್ಲಾ ಕಳ್ಳತನ ಪ್ರಕರಣಗಳು ಸಾಮಾನ್ಯವಾಗಿ ಹೆಚ್ಚಾಗುತ್ತವೆ. ಆದರೆ ಈ ಬಾರಿಯ ಬರಗಾಲ ಹೊಸ ರೀತಿಯ ಕಳ್ಳತನಕ್ಕೆ ನಾಂದಿ ಹಾಡಿದೆ. ರಾಯಚೂರು(Raichur) ಜಿಲ್ಲೆಯಲ್ಲಿ ರೈತರಿಗೆ ತಮ್ಮ ಬೆಳೆಗಳನ್ನ ಕಳ್ಳರಿಂದ ಕಾಪಾಡಿಕೊಳ್ಳುವುದೇ ದೊಡ್ಡ ಸವಾಲಾಗಿದೆ. ಹೀಗಾಗಿ ಇಲ್ಲೊಬ್ಬ ರೈತ ಜಮೀನಿಗೆ ಸಿಸಿ ಕ್ಯಾಮೆರಾ (CCTV) ಅಳವಡಿಸಿದ್ದಾನೆ.

Advertisement
Advertisement

ರಾಜ್ಯದಲ್ಲಿ ತೀವ್ರ ಬರಗಾಲದಿಂದ ರೈತನ ಪರಿಸ್ಥಿತಿಯಂತೂ ಹೇಳತೀರದ್ದಾಗಿದೆ. ಹೀಗಿರುವಾಗ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಮೆಣಸಿನಕಾಯಿ ಬೆಳೆದಿರುವ ರಾಯಚೂರು  ಜಿಲ್ಲೆಯ ರೈತರಿಗೆ ಕಳ್ಳರ ಕಾಟ ಶುರುವಾಗಿದೆ. ಈ ಮೊದಲು ಹತ್ತಿ, ತೊಗರಿ ಕಳ್ಳತನ ಮಾಡುತ್ತಿದ್ದ ಕಳ್ಳರು ಈಗ ಮೆಣಸಿನಕಾಯಿಯ ಮೇಲೆ ಕಣ್ಣಿಟ್ಟಿದ್ದಾರೆ. ರಾತ್ರೋರಾತ್ರಿ ಗಿಡಸಮೇತ ಮೇಣಕಾಸಿನಯನ್ನು ಕದ್ದು ಎಸ್ಕೇಪ್ ಆಗುತ್ತಿದ್ದಾರೆ. ಇದರಿಂದ ಬೇಸತ್ತ ರೈತ ಜಮೀನಿನಲ್ಲಿ ಸಿಸಿ ಕ್ಯಾಮರಾ ಅಳವಡಿಸಿದ್ದಾನೆ. ಆದರೂ ಕಳ್ಳರ ಭಯ ಇರುವುದರಿಂದ ರಾತ್ರಿ ಹೊತ್ತು ಜಮೀನಿನಲ್ಲೇ ಮಲಗುತ್ತಾರೆ.

ಮಳೆ ಕೊರತೆಯಿಂದ ಜಮೀನಿಗೆ ನೀರು ಬೀಡಲು ಸಾಕಷ್ಟು ಹಣ ಖರ್ಚು ಮಾಡಿರುವ ರೈತರು, ಕೀಟನಾಶಕ, ಗೊಬ್ಬರ ಅಂತ ಎಕರೆಗೆ ಲಕ್ಷಾಂತರ ರೂಪಾಯಿ ಸುರಿದಿದ್ದಾರೆ. ಎಕರೆಗೆ 10 ರಿಂದ 12 ಕ್ವಿಂಟಾಲ್ ಬೆಳೆ ನಿರೀಕ್ಷೆಯಿದ್ದು, ಆ ಪೈಕಿ 2-3 ಕ್ವಿಂಟಾಲ್ ಕಳ್ಳರ ಪಾಲಾದ್ರೆ ನಮಗೆ ಉಳಿಯುವುದೇನು ಅಂತ ರೈತರು ಆತಂಕಗೊಂಡಿದ್ದಾರೆ. ಹೀಗಾಗಿ ಪೊಲೀಸ್ ಇಲಾಖೆ ಬೆಳೆ ರಕ್ಷಣೆಗೆ ಸಹಾಯ ಮಾಡಬೇಕು ಅಂತ ರೈತರು ಒತ್ತಾಯಿಸಿದ್ದಾರೆ.

ಬರಗಾಲ ರೈತರನ್ನ ಮಾತ್ರ ಸಂಕಷ್ಟಕ್ಕೆ ಸಿಲುಕಿಸಿಲ್ಲ. ಜೊತೆಗೆ ಹೊಸ ರೀತಿಯ ಕಳ್ಳತನಕ್ಕೂ ದಾರಿ ಮಾಡಿಕೊಟ್ಟಿದೆ. ಬೆಳೆಯನ್ನ ಮಾರುಕಟ್ಟೆಗೆ ತೆಗೆದುಕೊಂಡು ಹೋಗುವವರೆಗೂ ರೈತರಿಗೆ ನಿದ್ದೆಯಿಲ್ಲದಂತಾಗಿದೆ. ರೈತರ ಕಷ್ಟಕ್ಕೆ ಕೂಡಲೇ ಪರಿಹಾರ ಸಿಗಬೇಕಿದೆ.

Cases of theft usually increase whenever there is a drought. But this drought has ushered in a new kind of theft. The biggest challenge for farmers in Raichur district is to protect their crops from thieves. Therefore, a farmer here has installed a CC camera (CCTV) for his farm.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

6 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

6 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

7 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

7 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

7 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

7 hours ago