Advertisement
MIRROR FOCUS

ಬರಗಾಲ, ಬೆಲೆ ಏರಿಕೆ ಸಮಯದಲ್ಲಿ ಬೆಳೆ ಉಳಿಸಿಕೊಳ್ಳುವುದೇ ದೊಡ್ಡ ಸವಾಲು | ಮೆಣಸಿನಕಾಯಿ ಬೆಳೆ ರಕ್ಷಿಸಲು ಸಿಸಿಟಿವಿ ಅಳವಡಿಸಿದ ರೈತ |

Share

ಕಳೆದ 5-6 ತಿಂಗಳ ಹಿಂದೆ ಟೊಮೆಟೋ(Tomato) ರೈತರ(Farmer) ಕಥೆಯೂ ಇದೇ ಆಗಿತ್ತು. ತರಕಾರಿ(Vegetable) ಬೆಲೆ ಏರಿದರೆ(Price hike) ರೈತರಿಗೆ ಕಳ್ಳರ(Thief) ಕಾಟ ತಪ್ಪಿದ್ದಲ್ಲ. ಟೊಮೆಟೋ, ಅಡಿಕೆ ಈಗ ಮೆಣಸಿನ ಕಾಯಿ (Chilly) ಬೆಳೆಗೆ ಕಳ್ಳರ ಕಾಟ ಆರಂಭವಾಗಿದೆ. ಬರಗಾಲ(Drought) ಬಂದಾಗಲೆಲ್ಲಾ ಕಳ್ಳತನ ಪ್ರಕರಣಗಳು ಸಾಮಾನ್ಯವಾಗಿ ಹೆಚ್ಚಾಗುತ್ತವೆ. ಆದರೆ ಈ ಬಾರಿಯ ಬರಗಾಲ ಹೊಸ ರೀತಿಯ ಕಳ್ಳತನಕ್ಕೆ ನಾಂದಿ ಹಾಡಿದೆ. ರಾಯಚೂರು(Raichur) ಜಿಲ್ಲೆಯಲ್ಲಿ ರೈತರಿಗೆ ತಮ್ಮ ಬೆಳೆಗಳನ್ನ ಕಳ್ಳರಿಂದ ಕಾಪಾಡಿಕೊಳ್ಳುವುದೇ ದೊಡ್ಡ ಸವಾಲಾಗಿದೆ. ಹೀಗಾಗಿ ಇಲ್ಲೊಬ್ಬ ರೈತ ಜಮೀನಿಗೆ ಸಿಸಿ ಕ್ಯಾಮೆರಾ (CCTV) ಅಳವಡಿಸಿದ್ದಾನೆ.

ರಾಜ್ಯದಲ್ಲಿ ತೀವ್ರ ಬರಗಾಲದಿಂದ ರೈತನ ಪರಿಸ್ಥಿತಿಯಂತೂ ಹೇಳತೀರದ್ದಾಗಿದೆ. ಹೀಗಿರುವಾಗ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಮೆಣಸಿನಕಾಯಿ ಬೆಳೆದಿರುವ ರಾಯಚೂರು  ಜಿಲ್ಲೆಯ ರೈತರಿಗೆ ಕಳ್ಳರ ಕಾಟ ಶುರುವಾಗಿದೆ. ಈ ಮೊದಲು ಹತ್ತಿ, ತೊಗರಿ ಕಳ್ಳತನ ಮಾಡುತ್ತಿದ್ದ ಕಳ್ಳರು ಈಗ ಮೆಣಸಿನಕಾಯಿಯ ಮೇಲೆ ಕಣ್ಣಿಟ್ಟಿದ್ದಾರೆ. ರಾತ್ರೋರಾತ್ರಿ ಗಿಡಸಮೇತ ಮೇಣಕಾಸಿನಯನ್ನು ಕದ್ದು ಎಸ್ಕೇಪ್ ಆಗುತ್ತಿದ್ದಾರೆ. ಇದರಿಂದ ಬೇಸತ್ತ ರೈತ ಜಮೀನಿನಲ್ಲಿ ಸಿಸಿ ಕ್ಯಾಮರಾ ಅಳವಡಿಸಿದ್ದಾನೆ. ಆದರೂ ಕಳ್ಳರ ಭಯ ಇರುವುದರಿಂದ ರಾತ್ರಿ ಹೊತ್ತು ಜಮೀನಿನಲ್ಲೇ ಮಲಗುತ್ತಾರೆ.

ಮಳೆ ಕೊರತೆಯಿಂದ ಜಮೀನಿಗೆ ನೀರು ಬೀಡಲು ಸಾಕಷ್ಟು ಹಣ ಖರ್ಚು ಮಾಡಿರುವ ರೈತರು, ಕೀಟನಾಶಕ, ಗೊಬ್ಬರ ಅಂತ ಎಕರೆಗೆ ಲಕ್ಷಾಂತರ ರೂಪಾಯಿ ಸುರಿದಿದ್ದಾರೆ. ಎಕರೆಗೆ 10 ರಿಂದ 12 ಕ್ವಿಂಟಾಲ್ ಬೆಳೆ ನಿರೀಕ್ಷೆಯಿದ್ದು, ಆ ಪೈಕಿ 2-3 ಕ್ವಿಂಟಾಲ್ ಕಳ್ಳರ ಪಾಲಾದ್ರೆ ನಮಗೆ ಉಳಿಯುವುದೇನು ಅಂತ ರೈತರು ಆತಂಕಗೊಂಡಿದ್ದಾರೆ. ಹೀಗಾಗಿ ಪೊಲೀಸ್ ಇಲಾಖೆ ಬೆಳೆ ರಕ್ಷಣೆಗೆ ಸಹಾಯ ಮಾಡಬೇಕು ಅಂತ ರೈತರು ಒತ್ತಾಯಿಸಿದ್ದಾರೆ.

ಬರಗಾಲ ರೈತರನ್ನ ಮಾತ್ರ ಸಂಕಷ್ಟಕ್ಕೆ ಸಿಲುಕಿಸಿಲ್ಲ. ಜೊತೆಗೆ ಹೊಸ ರೀತಿಯ ಕಳ್ಳತನಕ್ಕೂ ದಾರಿ ಮಾಡಿಕೊಟ್ಟಿದೆ. ಬೆಳೆಯನ್ನ ಮಾರುಕಟ್ಟೆಗೆ ತೆಗೆದುಕೊಂಡು ಹೋಗುವವರೆಗೂ ರೈತರಿಗೆ ನಿದ್ದೆಯಿಲ್ಲದಂತಾಗಿದೆ. ರೈತರ ಕಷ್ಟಕ್ಕೆ ಕೂಡಲೇ ಪರಿಹಾರ ಸಿಗಬೇಕಿದೆ.

Cases of theft usually increase whenever there is a drought. But this drought has ushered in a new kind of theft. The biggest challenge for farmers in Raichur district is to protect their crops from thieves. Therefore, a farmer here has installed a CC camera (CCTV) for his farm.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

11 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

12 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 days ago