Advertisement
Opinion

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

Share

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ ಹದಿನೈದೋ ವರ್ಷದ ನಂತರ ಹಾಕಿದ ಬಂಡವಾಳಕ್ಕೆ ಲಕ್ಷ ಲಕ್ಷ ಹಣ ವಾಪಸು ಕೊಡುವ ಬರವಸೆ ನೀಡಿತ್ತು‌. ಆದರೆ ಹತ್ತು ಹದಿನೈದು ವರ್ಷಗಳಿಗೆ ಅದೆಂಥದೇ ಸ್ವರ್ಗ ಸದೃಶ ಭೂಮಿಯಲ್ಲಿ ಅದೆಷ್ಟೇ ಗೊಬ್ಬರ ನೀರು ಆರೈಕೆ ಮಾಡಿದರೂ ನೆಟ್ಟ ಸಾಗವಾನಿ ಮೂರಿಂಚಿಗಿಂತ ಹೆಚ್ಚಿನ ವ್ಯಾಸ ಕ್ಕೆ ಬೆಳೆಯೋಲ್ಲ.

Advertisement
Advertisement
Advertisement
Advertisement

ಮಹಾಗನಿ, ಶ್ರೀಗಂಧ ಮುಂತಾದ ಮರ ಆಗುವ ಜಾತಿಯ ಸಸ್ಯಗಳು ತಮ್ಮ ಒಳಗಿನ ಕೆಂಪು ತೆರಳು ಬೆಳೆಯದೇ ಗಟ್ಟಿ ಯಾಗಿ ಸುಗಂಧ ಭರಿತವೋ, ನಾಟದ ಉಪಯೋಗಕ್ಕೋ ಬರದು. ಕೆಲವೊಮ್ಮೆ ಹೊರಗಿನಿಂದ ಮರ ಬೆಳೆದರೂ ಒಳಗಿನ ತಿರಳು ಬೆಳೆದಿರದು. ಸುಗಂಧ ಉಪಯೋಗಕ್ಕೆ ಬಳಸುವ ಶ್ರೀಗಂಧ, ಚಂದನ, ನಾಟದ ಉಪಯೋಗಕ್ಕೆ ಬಳಸುವ ತೇಗ ಮಹಾಗನಿ ಹೆಬ್ಬೇವು ಕನಿಷ್ಠ ನಲವತ್ತು ಐವತ್ತು ವರ್ಷಗಳ ಕಾಲ ನೈಸರ್ಗಿಕವಾಗಿ ಬೆಳೆಯಲೇ ಬೇಕು.ಸಸಿ ಮರ ನೈಸರ್ಗಿಕವಾಗಿ ಹಂತ ಹಂತವಾಗಿ ಬೆಳೆಯಲೇ ಬೇಕು…. ದಿಡೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣವಾಗುತ್ತವೆ.

Advertisement

ಮಲೆನಾಡಿನಲ್ಲಿ ಕೃಷಿಕರೊಬ್ಬರು ಅತ್ಯಂತ ವ್ಯವಸ್ಥಿತವಾಗಿ ಬೆಳೆದ ಸಾಗುವಾನಿ‌ ತೋಟದ ದೃಶ್ಯಾವಳಿಯಿದೆ. ಎಷ್ಟೇ ಆರೈಕೆ ಮಾಡಿದರೆ ನಮ್ಮ ‌ಮಲೆನಾಡಿನಲ್ಲಿ “ಹತ್ತು ” ವರ್ಷಗಳಿಗೆ ಇಷ್ಟೇ ಬೆಳೆಯಲು ಸಾಧ್ಯ. ಕೆಲವರು ಎರಡು ಮೂರು ವರ್ಷಗಳಿಗೇ ಅಡಿಕೆ ಸಸಿ ಫಸಲು ಬಿಡುತ್ತದೆ ಎನ್ನುತ್ತಾರೆ. ಹೀಗೆ ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ.

ನಮ್ಮ ಮಲೆನಾಡಿನಲ್ಲಿ ಅಡಿಕೆ ನಿಜ ಫಸಲು ಪಡೆಯಲು ಕನಿಷ್ಠ ಹನ್ನೆರಡು ವರ್ಷ ಬೇಕೇ ಬೇಕು. ತಡವಾಗಿ ಮಲೆನಾಡಿನಲ್ಲಿ ಅಡಿಕೆ ಫಸಲು ನೀಡು ವುದರಿಂದ ಮಲೆನಾಡಿನಲ್ಲಿ ಅಡಿಕೆ ಮರದ ಜೀವಿತಾವಧಿ ಹೆಚ್ಚು.ನಮ್ಮ ಹಿರಿಯರ ಪ್ರಕಾರ ಮಲೆನಾಡಿನಲ್ಲಿ ಒಂದು ಅಡಿಕೆ ಮರ ಕನಿಷ್ಠ ಅರವತ್ತು ವರ್ಷ ಫಸಲು ನೀಡುತ್ತದೆ. ‌ಬಯಲು ಸೀಮೆಯಲ್ಲಿ ಬೇಗ ಫಸಲು ನೀಡಿ ಬೇಗ ಫಸಲು ಕುಂಠಿತವಾಗುತ್ತದೆ.

Advertisement
ಬರಹ :
ಪ್ರಬಂಧ ಅಂಬುತೀರ್ಥ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪ್ರಬಂಧ ಅಂಬುತೀರ್ಥ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅಂಬುತೀರ್ಥದ ನಿವಾಸಿ ಪ್ರಬಂಧ. ಬಿ ಎ. ವಿಧ್ಯಾಭ್ಯಾಸ ಮುಗಿಸಿದ ಮೇಲೆ ಕೃಷಿ ಕೆಲಸ. ಕಥೆ , ಪರಿಸರ, ಕೃಷಿ , ವಿಜ್ಞಾನ , ಸಾಮಾಜಿಕ ಮತ್ತು ರಾಜಕೀಯ ವಿಚಾರಗಳ ಲೇಖನ ಬರೆಯುವ ಹವ್ಯಾಸ. ಮಲೆನಾಡು ಗಿಡ್ಡ ಗೋ ತಳಿ ಸಂವರ್ಧನೆ, ಜೀರಿಗೆ ಮೆಣಸಿನಕಾಯಿ ಬೆಳೆಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಣೆ. ಮಲೆನಾಡು ಗಿಡ್ಡ ತಳಿ ಹಸುಗಳ ಸೆಗಣಿಯನ್ನು ಮೌಲ್ಯ ವರ್ಧನೆ ಮಾಡಿ ಕೃಷಿ ಸ್ನೇಹಿ ಸೂಕ್ಷ್ಮಾಣು ಜೀವಿಯುಕ್ತ ಸಾವಯವ ಗೊಬ್ಬರ ತಯಾರಿಸಿ ಮಾರಾಟ ಮಾಡುವ ಕೆಲಸವನ್ನೂ ಮಾಡುತ್ತಿದ್ದಾರೆ.

Published by
ಪ್ರಬಂಧ ಅಂಬುತೀರ್ಥ

Recent Posts

ಹೊಸರುಚಿ | ಪಪ್ಪಾಯ ಹಣ್ಣು ಬರ್ಫಿ

ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…

4 hours ago

ಸೀತೆ ಪುನೀತೆಯೆ ? ಮತ್ತೊಮ್ಮೆ ಅಗ್ನಿ ಪರೀಕ್ಷೆಯೇ?

ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…

7 hours ago

ಎಲ್ಲಾ ಕೃಷಿ ಆದಾಯವನ್ನು ಬ್ಯಾಂಕ್‌ ಉಳಿತಾಯ ಖಾತೆ ಮೂಲಕ ವ್ಯವಹಾರ ಮಾಡಬೇಕು ಏಕೆ..?

ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…

20 hours ago

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…

21 hours ago

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…

21 hours ago

ಕಾರವಾರದಲ್ಲಿ ಎ.18-22 ವರೆಗೆ ಕರಾವಳಿ ಉತ್ಸವ

ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…

21 hours ago