Opinion

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

Share

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ ಹದಿನೈದೋ ವರ್ಷದ ನಂತರ ಹಾಕಿದ ಬಂಡವಾಳಕ್ಕೆ ಲಕ್ಷ ಲಕ್ಷ ಹಣ ವಾಪಸು ಕೊಡುವ ಬರವಸೆ ನೀಡಿತ್ತು‌. ಆದರೆ ಹತ್ತು ಹದಿನೈದು ವರ್ಷಗಳಿಗೆ ಅದೆಂಥದೇ ಸ್ವರ್ಗ ಸದೃಶ ಭೂಮಿಯಲ್ಲಿ ಅದೆಷ್ಟೇ ಗೊಬ್ಬರ ನೀರು ಆರೈಕೆ ಮಾಡಿದರೂ ನೆಟ್ಟ ಸಾಗವಾನಿ ಮೂರಿಂಚಿಗಿಂತ ಹೆಚ್ಚಿನ ವ್ಯಾಸ ಕ್ಕೆ ಬೆಳೆಯೋಲ್ಲ.

ಮಹಾಗನಿ, ಶ್ರೀಗಂಧ ಮುಂತಾದ ಮರ ಆಗುವ ಜಾತಿಯ ಸಸ್ಯಗಳು ತಮ್ಮ ಒಳಗಿನ ಕೆಂಪು ತೆರಳು ಬೆಳೆಯದೇ ಗಟ್ಟಿ ಯಾಗಿ ಸುಗಂಧ ಭರಿತವೋ, ನಾಟದ ಉಪಯೋಗಕ್ಕೋ ಬರದು. ಕೆಲವೊಮ್ಮೆ ಹೊರಗಿನಿಂದ ಮರ ಬೆಳೆದರೂ ಒಳಗಿನ ತಿರಳು ಬೆಳೆದಿರದು. ಸುಗಂಧ ಉಪಯೋಗಕ್ಕೆ ಬಳಸುವ ಶ್ರೀಗಂಧ, ಚಂದನ, ನಾಟದ ಉಪಯೋಗಕ್ಕೆ ಬಳಸುವ ತೇಗ ಮಹಾಗನಿ ಹೆಬ್ಬೇವು ಕನಿಷ್ಠ ನಲವತ್ತು ಐವತ್ತು ವರ್ಷಗಳ ಕಾಲ ನೈಸರ್ಗಿಕವಾಗಿ ಬೆಳೆಯಲೇ ಬೇಕು.ಸಸಿ ಮರ ನೈಸರ್ಗಿಕವಾಗಿ ಹಂತ ಹಂತವಾಗಿ ಬೆಳೆಯಲೇ ಬೇಕು…. ದಿಡೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣವಾಗುತ್ತವೆ.

ಮಲೆನಾಡಿನಲ್ಲಿ ಕೃಷಿಕರೊಬ್ಬರು ಅತ್ಯಂತ ವ್ಯವಸ್ಥಿತವಾಗಿ ಬೆಳೆದ ಸಾಗುವಾನಿ‌ ತೋಟದ ದೃಶ್ಯಾವಳಿಯಿದೆ. ಎಷ್ಟೇ ಆರೈಕೆ ಮಾಡಿದರೆ ನಮ್ಮ ‌ಮಲೆನಾಡಿನಲ್ಲಿ “ಹತ್ತು ” ವರ್ಷಗಳಿಗೆ ಇಷ್ಟೇ ಬೆಳೆಯಲು ಸಾಧ್ಯ. ಕೆಲವರು ಎರಡು ಮೂರು ವರ್ಷಗಳಿಗೇ ಅಡಿಕೆ ಸಸಿ ಫಸಲು ಬಿಡುತ್ತದೆ ಎನ್ನುತ್ತಾರೆ. ಹೀಗೆ ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ.

ನಮ್ಮ ಮಲೆನಾಡಿನಲ್ಲಿ ಅಡಿಕೆ ನಿಜ ಫಸಲು ಪಡೆಯಲು ಕನಿಷ್ಠ ಹನ್ನೆರಡು ವರ್ಷ ಬೇಕೇ ಬೇಕು. ತಡವಾಗಿ ಮಲೆನಾಡಿನಲ್ಲಿ ಅಡಿಕೆ ಫಸಲು ನೀಡು ವುದರಿಂದ ಮಲೆನಾಡಿನಲ್ಲಿ ಅಡಿಕೆ ಮರದ ಜೀವಿತಾವಧಿ ಹೆಚ್ಚು.ನಮ್ಮ ಹಿರಿಯರ ಪ್ರಕಾರ ಮಲೆನಾಡಿನಲ್ಲಿ ಒಂದು ಅಡಿಕೆ ಮರ ಕನಿಷ್ಠ ಅರವತ್ತು ವರ್ಷ ಫಸಲು ನೀಡುತ್ತದೆ. ‌ಬಯಲು ಸೀಮೆಯಲ್ಲಿ ಬೇಗ ಫಸಲು ನೀಡಿ ಬೇಗ ಫಸಲು ಕುಂಠಿತವಾಗುತ್ತದೆ.

ಬರಹ :
ಪ್ರಬಂಧ ಅಂಬುತೀರ್ಥ
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ಪ್ರಬಂಧ ಅಂಬುತೀರ್ಥ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅಂಬುತೀರ್ಥದ ನಿವಾಸಿ ಪ್ರಬಂಧ. ಬಿ ಎ. ವಿಧ್ಯಾಭ್ಯಾಸ ಮುಗಿಸಿದ ಮೇಲೆ ಕೃಷಿ ಕೆಲಸ. ಕಥೆ , ಪರಿಸರ, ಕೃಷಿ , ವಿಜ್ಞಾನ , ಸಾಮಾಜಿಕ ಮತ್ತು ರಾಜಕೀಯ ವಿಚಾರಗಳ ಲೇಖನ ಬರೆಯುವ ಹವ್ಯಾಸ. ಮಲೆನಾಡು ಗಿಡ್ಡ ಗೋ ತಳಿ ಸಂವರ್ಧನೆ, ಜೀರಿಗೆ ಮೆಣಸಿನಕಾಯಿ ಬೆಳೆಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಣೆ. ಮಲೆನಾಡು ಗಿಡ್ಡ ತಳಿ ಹಸುಗಳ ಸೆಗಣಿಯನ್ನು ಮೌಲ್ಯ ವರ್ಧನೆ ಮಾಡಿ ಕೃಷಿ ಸ್ನೇಹಿ ಸೂಕ್ಷ್ಮಾಣು ಜೀವಿಯುಕ್ತ ಸಾವಯವ ಗೊಬ್ಬರ ತಯಾರಿಸಿ ಮಾರಾಟ ಮಾಡುವ ಕೆಲಸವನ್ನೂ ಮಾಡುತ್ತಿದ್ದಾರೆ.

Published by
ಪ್ರಬಂಧ ಅಂಬುತೀರ್ಥ

Recent Posts

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ

ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…

8 hours ago

ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ

ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …

8 hours ago

ಹೆಚ್ಚುತ್ತಿರುವ ಸೈಬರ್ ಅಪರಾಧ ಪ್ರಕರಣಗಳು | ಒಂದು ವರ್ಷದಲ್ಲಿ 22 ಸಾವಿರ ಸೈಬರ್ ಪ್ರಕರಣ ದಾಖಲು |

ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ…

8 hours ago

ಬೆಳ್ಳಿ ಧರಿಸುವುದು ಎಲ್ಲಾ ರಾಶಿಯವರಿಗೆ ಉತ್ತಮವೇ…? | ಯಾವೆಲ್ಲಾ ರಾಶಿಗಳಿಗಳಿಗೆ ಹಾನಿ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

8 hours ago

ಸಂಬಾರ ಮಂಡಳಿಯ ದರ ಪಟ್ಟಿಯಲ್ಲಿ ಶಿರಸಿಯ ಕಾಳುಮೆಣಸು ನಮೂದಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ

ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ…

16 hours ago

ಹೆತ್ತವರವನ್ನು ನೋಡಿಕೊಳ್ಳದ ಮಕ್ಕಳ ದಾನಪತ್ರ ರದ್ದುಗೊಳಿಸುವ ಅವಕಾಶ ಕಾನೂನಿನಲ್ಲಿದೆ | ಸಚಿವ ಕೃಷ್ಣಭೈರೇಗೌಡ

ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು…

16 hours ago