Advertisement
Opinion

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

Share

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ ಹದಿನೈದೋ ವರ್ಷದ ನಂತರ ಹಾಕಿದ ಬಂಡವಾಳಕ್ಕೆ ಲಕ್ಷ ಲಕ್ಷ ಹಣ ವಾಪಸು ಕೊಡುವ ಬರವಸೆ ನೀಡಿತ್ತು‌. ಆದರೆ ಹತ್ತು ಹದಿನೈದು ವರ್ಷಗಳಿಗೆ ಅದೆಂಥದೇ ಸ್ವರ್ಗ ಸದೃಶ ಭೂಮಿಯಲ್ಲಿ ಅದೆಷ್ಟೇ ಗೊಬ್ಬರ ನೀರು ಆರೈಕೆ ಮಾಡಿದರೂ ನೆಟ್ಟ ಸಾಗವಾನಿ ಮೂರಿಂಚಿಗಿಂತ ಹೆಚ್ಚಿನ ವ್ಯಾಸ ಕ್ಕೆ ಬೆಳೆಯೋಲ್ಲ.

ಮಹಾಗನಿ, ಶ್ರೀಗಂಧ ಮುಂತಾದ ಮರ ಆಗುವ ಜಾತಿಯ ಸಸ್ಯಗಳು ತಮ್ಮ ಒಳಗಿನ ಕೆಂಪು ತೆರಳು ಬೆಳೆಯದೇ ಗಟ್ಟಿ ಯಾಗಿ ಸುಗಂಧ ಭರಿತವೋ, ನಾಟದ ಉಪಯೋಗಕ್ಕೋ ಬರದು. ಕೆಲವೊಮ್ಮೆ ಹೊರಗಿನಿಂದ ಮರ ಬೆಳೆದರೂ ಒಳಗಿನ ತಿರಳು ಬೆಳೆದಿರದು. ಸುಗಂಧ ಉಪಯೋಗಕ್ಕೆ ಬಳಸುವ ಶ್ರೀಗಂಧ, ಚಂದನ, ನಾಟದ ಉಪಯೋಗಕ್ಕೆ ಬಳಸುವ ತೇಗ ಮಹಾಗನಿ ಹೆಬ್ಬೇವು ಕನಿಷ್ಠ ನಲವತ್ತು ಐವತ್ತು ವರ್ಷಗಳ ಕಾಲ ನೈಸರ್ಗಿಕವಾಗಿ ಬೆಳೆಯಲೇ ಬೇಕು.ಸಸಿ ಮರ ನೈಸರ್ಗಿಕವಾಗಿ ಹಂತ ಹಂತವಾಗಿ ಬೆಳೆಯಲೇ ಬೇಕು…. ದಿಡೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣವಾಗುತ್ತವೆ.

ಮಲೆನಾಡಿನಲ್ಲಿ ಕೃಷಿಕರೊಬ್ಬರು ಅತ್ಯಂತ ವ್ಯವಸ್ಥಿತವಾಗಿ ಬೆಳೆದ ಸಾಗುವಾನಿ‌ ತೋಟದ ದೃಶ್ಯಾವಳಿಯಿದೆ. ಎಷ್ಟೇ ಆರೈಕೆ ಮಾಡಿದರೆ ನಮ್ಮ ‌ಮಲೆನಾಡಿನಲ್ಲಿ “ಹತ್ತು ” ವರ್ಷಗಳಿಗೆ ಇಷ್ಟೇ ಬೆಳೆಯಲು ಸಾಧ್ಯ. ಕೆಲವರು ಎರಡು ಮೂರು ವರ್ಷಗಳಿಗೇ ಅಡಿಕೆ ಸಸಿ ಫಸಲು ಬಿಡುತ್ತದೆ ಎನ್ನುತ್ತಾರೆ. ಹೀಗೆ ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ.

ನಮ್ಮ ಮಲೆನಾಡಿನಲ್ಲಿ ಅಡಿಕೆ ನಿಜ ಫಸಲು ಪಡೆಯಲು ಕನಿಷ್ಠ ಹನ್ನೆರಡು ವರ್ಷ ಬೇಕೇ ಬೇಕು. ತಡವಾಗಿ ಮಲೆನಾಡಿನಲ್ಲಿ ಅಡಿಕೆ ಫಸಲು ನೀಡು ವುದರಿಂದ ಮಲೆನಾಡಿನಲ್ಲಿ ಅಡಿಕೆ ಮರದ ಜೀವಿತಾವಧಿ ಹೆಚ್ಚು.ನಮ್ಮ ಹಿರಿಯರ ಪ್ರಕಾರ ಮಲೆನಾಡಿನಲ್ಲಿ ಒಂದು ಅಡಿಕೆ ಮರ ಕನಿಷ್ಠ ಅರವತ್ತು ವರ್ಷ ಫಸಲು ನೀಡುತ್ತದೆ. ‌ಬಯಲು ಸೀಮೆಯಲ್ಲಿ ಬೇಗ ಫಸಲು ನೀಡಿ ಬೇಗ ಫಸಲು ಕುಂಠಿತವಾಗುತ್ತದೆ.

ಬರಹ :
ಪ್ರಬಂಧ ಅಂಬುತೀರ್ಥ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪ್ರಬಂಧ ಅಂಬುತೀರ್ಥ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅಂಬುತೀರ್ಥದ ನಿವಾಸಿ ಪ್ರಬಂಧ. ಬಿ ಎ. ವಿಧ್ಯಾಭ್ಯಾಸ ಮುಗಿಸಿದ ಮೇಲೆ ಕೃಷಿ ಕೆಲಸ. ಕಥೆ , ಪರಿಸರ, ಕೃಷಿ , ವಿಜ್ಞಾನ , ಸಾಮಾಜಿಕ ಮತ್ತು ರಾಜಕೀಯ ವಿಚಾರಗಳ ಲೇಖನ ಬರೆಯುವ ಹವ್ಯಾಸ. ಮಲೆನಾಡು ಗಿಡ್ಡ ಗೋ ತಳಿ ಸಂವರ್ಧನೆ, ಜೀರಿಗೆ ಮೆಣಸಿನಕಾಯಿ ಬೆಳೆಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಣೆ. ಮಲೆನಾಡು ಗಿಡ್ಡ ತಳಿ ಹಸುಗಳ ಸೆಗಣಿಯನ್ನು ಮೌಲ್ಯ ವರ್ಧನೆ ಮಾಡಿ ಕೃಷಿ ಸ್ನೇಹಿ ಸೂಕ್ಷ್ಮಾಣು ಜೀವಿಯುಕ್ತ ಸಾವಯವ ಗೊಬ್ಬರ ತಯಾರಿಸಿ ಮಾರಾಟ ಮಾಡುವ ಕೆಲಸವನ್ನೂ ಮಾಡುತ್ತಿದ್ದಾರೆ.

Published by
ಪ್ರಬಂಧ ಅಂಬುತೀರ್ಥ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

12 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

12 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

12 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

22 hours ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

1 day ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

1 day ago