Advertisement
Opinion

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

Share

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ ಹದಿನೈದೋ ವರ್ಷದ ನಂತರ ಹಾಕಿದ ಬಂಡವಾಳಕ್ಕೆ ಲಕ್ಷ ಲಕ್ಷ ಹಣ ವಾಪಸು ಕೊಡುವ ಬರವಸೆ ನೀಡಿತ್ತು‌. ಆದರೆ ಹತ್ತು ಹದಿನೈದು ವರ್ಷಗಳಿಗೆ ಅದೆಂಥದೇ ಸ್ವರ್ಗ ಸದೃಶ ಭೂಮಿಯಲ್ಲಿ ಅದೆಷ್ಟೇ ಗೊಬ್ಬರ ನೀರು ಆರೈಕೆ ಮಾಡಿದರೂ ನೆಟ್ಟ ಸಾಗವಾನಿ ಮೂರಿಂಚಿಗಿಂತ ಹೆಚ್ಚಿನ ವ್ಯಾಸ ಕ್ಕೆ ಬೆಳೆಯೋಲ್ಲ.

ಮಹಾಗನಿ, ಶ್ರೀಗಂಧ ಮುಂತಾದ ಮರ ಆಗುವ ಜಾತಿಯ ಸಸ್ಯಗಳು ತಮ್ಮ ಒಳಗಿನ ಕೆಂಪು ತೆರಳು ಬೆಳೆಯದೇ ಗಟ್ಟಿ ಯಾಗಿ ಸುಗಂಧ ಭರಿತವೋ, ನಾಟದ ಉಪಯೋಗಕ್ಕೋ ಬರದು. ಕೆಲವೊಮ್ಮೆ ಹೊರಗಿನಿಂದ ಮರ ಬೆಳೆದರೂ ಒಳಗಿನ ತಿರಳು ಬೆಳೆದಿರದು. ಸುಗಂಧ ಉಪಯೋಗಕ್ಕೆ ಬಳಸುವ ಶ್ರೀಗಂಧ, ಚಂದನ, ನಾಟದ ಉಪಯೋಗಕ್ಕೆ ಬಳಸುವ ತೇಗ ಮಹಾಗನಿ ಹೆಬ್ಬೇವು ಕನಿಷ್ಠ ನಲವತ್ತು ಐವತ್ತು ವರ್ಷಗಳ ಕಾಲ ನೈಸರ್ಗಿಕವಾಗಿ ಬೆಳೆಯಲೇ ಬೇಕು.ಸಸಿ ಮರ ನೈಸರ್ಗಿಕವಾಗಿ ಹಂತ ಹಂತವಾಗಿ ಬೆಳೆಯಲೇ ಬೇಕು…. ದಿಡೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣವಾಗುತ್ತವೆ.

Advertisement

ಮಲೆನಾಡಿನಲ್ಲಿ ಕೃಷಿಕರೊಬ್ಬರು ಅತ್ಯಂತ ವ್ಯವಸ್ಥಿತವಾಗಿ ಬೆಳೆದ ಸಾಗುವಾನಿ‌ ತೋಟದ ದೃಶ್ಯಾವಳಿಯಿದೆ. ಎಷ್ಟೇ ಆರೈಕೆ ಮಾಡಿದರೆ ನಮ್ಮ ‌ಮಲೆನಾಡಿನಲ್ಲಿ “ಹತ್ತು ” ವರ್ಷಗಳಿಗೆ ಇಷ್ಟೇ ಬೆಳೆಯಲು ಸಾಧ್ಯ. ಕೆಲವರು ಎರಡು ಮೂರು ವರ್ಷಗಳಿಗೇ ಅಡಿಕೆ ಸಸಿ ಫಸಲು ಬಿಡುತ್ತದೆ ಎನ್ನುತ್ತಾರೆ. ಹೀಗೆ ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ.

ನಮ್ಮ ಮಲೆನಾಡಿನಲ್ಲಿ ಅಡಿಕೆ ನಿಜ ಫಸಲು ಪಡೆಯಲು ಕನಿಷ್ಠ ಹನ್ನೆರಡು ವರ್ಷ ಬೇಕೇ ಬೇಕು. ತಡವಾಗಿ ಮಲೆನಾಡಿನಲ್ಲಿ ಅಡಿಕೆ ಫಸಲು ನೀಡು ವುದರಿಂದ ಮಲೆನಾಡಿನಲ್ಲಿ ಅಡಿಕೆ ಮರದ ಜೀವಿತಾವಧಿ ಹೆಚ್ಚು.ನಮ್ಮ ಹಿರಿಯರ ಪ್ರಕಾರ ಮಲೆನಾಡಿನಲ್ಲಿ ಒಂದು ಅಡಿಕೆ ಮರ ಕನಿಷ್ಠ ಅರವತ್ತು ವರ್ಷ ಫಸಲು ನೀಡುತ್ತದೆ. ‌ಬಯಲು ಸೀಮೆಯಲ್ಲಿ ಬೇಗ ಫಸಲು ನೀಡಿ ಬೇಗ ಫಸಲು ಕುಂಠಿತವಾಗುತ್ತದೆ.

Advertisement
ಬರಹ :
ಪ್ರಬಂಧ ಅಂಬುತೀರ್ಥ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪ್ರಬಂಧ ಅಂಬುತೀರ್ಥ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅಂಬುತೀರ್ಥದ ನಿವಾಸಿ ಪ್ರಬಂಧ. ಬಿ ಎ. ವಿಧ್ಯಾಭ್ಯಾಸ ಮುಗಿಸಿದ ಮೇಲೆ ಕೃಷಿ ಕೆಲಸ. ಕಥೆ , ಪರಿಸರ, ಕೃಷಿ , ವಿಜ್ಞಾನ , ಸಾಮಾಜಿಕ ಮತ್ತು ರಾಜಕೀಯ ವಿಚಾರಗಳ ಲೇಖನ ಬರೆಯುವ ಹವ್ಯಾಸ. ಮಲೆನಾಡು ಗಿಡ್ಡ ಗೋ ತಳಿ ಸಂವರ್ಧನೆ, ಜೀರಿಗೆ ಮೆಣಸಿನಕಾಯಿ ಬೆಳೆಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಣೆ. ಮಲೆನಾಡು ಗಿಡ್ಡ ತಳಿ ಹಸುಗಳ ಸೆಗಣಿಯನ್ನು ಮೌಲ್ಯ ವರ್ಧನೆ ಮಾಡಿ ಕೃಷಿ ಸ್ನೇಹಿ ಸೂಕ್ಷ್ಮಾಣು ಜೀವಿಯುಕ್ತ ಸಾವಯವ ಗೊಬ್ಬರ ತಯಾರಿಸಿ ಮಾರಾಟ ಮಾಡುವ ಕೆಲಸವನ್ನೂ ಮಾಡುತ್ತಿದ್ದಾರೆ.

Published by
ಪ್ರಬಂಧ ಅಂಬುತೀರ್ಥ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

2 days ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

2 days ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 days ago