Advertisement
Opinion

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

Share

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ ಹದಿನೈದೋ ವರ್ಷದ ನಂತರ ಹಾಕಿದ ಬಂಡವಾಳಕ್ಕೆ ಲಕ್ಷ ಲಕ್ಷ ಹಣ ವಾಪಸು ಕೊಡುವ ಬರವಸೆ ನೀಡಿತ್ತು‌. ಆದರೆ ಹತ್ತು ಹದಿನೈದು ವರ್ಷಗಳಿಗೆ ಅದೆಂಥದೇ ಸ್ವರ್ಗ ಸದೃಶ ಭೂಮಿಯಲ್ಲಿ ಅದೆಷ್ಟೇ ಗೊಬ್ಬರ ನೀರು ಆರೈಕೆ ಮಾಡಿದರೂ ನೆಟ್ಟ ಸಾಗವಾನಿ ಮೂರಿಂಚಿಗಿಂತ ಹೆಚ್ಚಿನ ವ್ಯಾಸ ಕ್ಕೆ ಬೆಳೆಯೋಲ್ಲ.

ಮಹಾಗನಿ, ಶ್ರೀಗಂಧ ಮುಂತಾದ ಮರ ಆಗುವ ಜಾತಿಯ ಸಸ್ಯಗಳು ತಮ್ಮ ಒಳಗಿನ ಕೆಂಪು ತೆರಳು ಬೆಳೆಯದೇ ಗಟ್ಟಿ ಯಾಗಿ ಸುಗಂಧ ಭರಿತವೋ, ನಾಟದ ಉಪಯೋಗಕ್ಕೋ ಬರದು. ಕೆಲವೊಮ್ಮೆ ಹೊರಗಿನಿಂದ ಮರ ಬೆಳೆದರೂ ಒಳಗಿನ ತಿರಳು ಬೆಳೆದಿರದು. ಸುಗಂಧ ಉಪಯೋಗಕ್ಕೆ ಬಳಸುವ ಶ್ರೀಗಂಧ, ಚಂದನ, ನಾಟದ ಉಪಯೋಗಕ್ಕೆ ಬಳಸುವ ತೇಗ ಮಹಾಗನಿ ಹೆಬ್ಬೇವು ಕನಿಷ್ಠ ನಲವತ್ತು ಐವತ್ತು ವರ್ಷಗಳ ಕಾಲ ನೈಸರ್ಗಿಕವಾಗಿ ಬೆಳೆಯಲೇ ಬೇಕು.ಸಸಿ ಮರ ನೈಸರ್ಗಿಕವಾಗಿ ಹಂತ ಹಂತವಾಗಿ ಬೆಳೆಯಲೇ ಬೇಕು…. ದಿಡೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣವಾಗುತ್ತವೆ.

ಮಲೆನಾಡಿನಲ್ಲಿ ಕೃಷಿಕರೊಬ್ಬರು ಅತ್ಯಂತ ವ್ಯವಸ್ಥಿತವಾಗಿ ಬೆಳೆದ ಸಾಗುವಾನಿ‌ ತೋಟದ ದೃಶ್ಯಾವಳಿಯಿದೆ. ಎಷ್ಟೇ ಆರೈಕೆ ಮಾಡಿದರೆ ನಮ್ಮ ‌ಮಲೆನಾಡಿನಲ್ಲಿ “ಹತ್ತು ” ವರ್ಷಗಳಿಗೆ ಇಷ್ಟೇ ಬೆಳೆಯಲು ಸಾಧ್ಯ. ಕೆಲವರು ಎರಡು ಮೂರು ವರ್ಷಗಳಿಗೇ ಅಡಿಕೆ ಸಸಿ ಫಸಲು ಬಿಡುತ್ತದೆ ಎನ್ನುತ್ತಾರೆ. ಹೀಗೆ ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ.

ನಮ್ಮ ಮಲೆನಾಡಿನಲ್ಲಿ ಅಡಿಕೆ ನಿಜ ಫಸಲು ಪಡೆಯಲು ಕನಿಷ್ಠ ಹನ್ನೆರಡು ವರ್ಷ ಬೇಕೇ ಬೇಕು. ತಡವಾಗಿ ಮಲೆನಾಡಿನಲ್ಲಿ ಅಡಿಕೆ ಫಸಲು ನೀಡು ವುದರಿಂದ ಮಲೆನಾಡಿನಲ್ಲಿ ಅಡಿಕೆ ಮರದ ಜೀವಿತಾವಧಿ ಹೆಚ್ಚು.ನಮ್ಮ ಹಿರಿಯರ ಪ್ರಕಾರ ಮಲೆನಾಡಿನಲ್ಲಿ ಒಂದು ಅಡಿಕೆ ಮರ ಕನಿಷ್ಠ ಅರವತ್ತು ವರ್ಷ ಫಸಲು ನೀಡುತ್ತದೆ. ‌ಬಯಲು ಸೀಮೆಯಲ್ಲಿ ಬೇಗ ಫಸಲು ನೀಡಿ ಬೇಗ ಫಸಲು ಕುಂಠಿತವಾಗುತ್ತದೆ.

ಬರಹ :
ಪ್ರಬಂಧ ಅಂಬುತೀರ್ಥ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪ್ರಬಂಧ ಅಂಬುತೀರ್ಥ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅಂಬುತೀರ್ಥದ ನಿವಾಸಿ ಪ್ರಬಂಧ. ಬಿ ಎ. ವಿಧ್ಯಾಭ್ಯಾಸ ಮುಗಿಸಿದ ಮೇಲೆ ಕೃಷಿ ಕೆಲಸ. ಕಥೆ , ಪರಿಸರ, ಕೃಷಿ , ವಿಜ್ಞಾನ , ಸಾಮಾಜಿಕ ಮತ್ತು ರಾಜಕೀಯ ವಿಚಾರಗಳ ಲೇಖನ ಬರೆಯುವ ಹವ್ಯಾಸ. ಮಲೆನಾಡು ಗಿಡ್ಡ ಗೋ ತಳಿ ಸಂವರ್ಧನೆ, ಜೀರಿಗೆ ಮೆಣಸಿನಕಾಯಿ ಬೆಳೆಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಣೆ. ಮಲೆನಾಡು ಗಿಡ್ಡ ತಳಿ ಹಸುಗಳ ಸೆಗಣಿಯನ್ನು ಮೌಲ್ಯ ವರ್ಧನೆ ಮಾಡಿ ಕೃಷಿ ಸ್ನೇಹಿ ಸೂಕ್ಷ್ಮಾಣು ಜೀವಿಯುಕ್ತ ಸಾವಯವ ಗೊಬ್ಬರ ತಯಾರಿಸಿ ಮಾರಾಟ ಮಾಡುವ ಕೆಲಸವನ್ನೂ ಮಾಡುತ್ತಿದ್ದಾರೆ.

Published by
ಪ್ರಬಂಧ ಅಂಬುತೀರ್ಥ

Recent Posts

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

7 hours ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

20 hours ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

1 day ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

1 day ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

1 day ago

ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ

ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…

2 days ago