Advertisement
Opinion

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

Share

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ ಹದಿನೈದೋ ವರ್ಷದ ನಂತರ ಹಾಕಿದ ಬಂಡವಾಳಕ್ಕೆ ಲಕ್ಷ ಲಕ್ಷ ಹಣ ವಾಪಸು ಕೊಡುವ ಬರವಸೆ ನೀಡಿತ್ತು‌. ಆದರೆ ಹತ್ತು ಹದಿನೈದು ವರ್ಷಗಳಿಗೆ ಅದೆಂಥದೇ ಸ್ವರ್ಗ ಸದೃಶ ಭೂಮಿಯಲ್ಲಿ ಅದೆಷ್ಟೇ ಗೊಬ್ಬರ ನೀರು ಆರೈಕೆ ಮಾಡಿದರೂ ನೆಟ್ಟ ಸಾಗವಾನಿ ಮೂರಿಂಚಿಗಿಂತ ಹೆಚ್ಚಿನ ವ್ಯಾಸ ಕ್ಕೆ ಬೆಳೆಯೋಲ್ಲ.

ಮಹಾಗನಿ, ಶ್ರೀಗಂಧ ಮುಂತಾದ ಮರ ಆಗುವ ಜಾತಿಯ ಸಸ್ಯಗಳು ತಮ್ಮ ಒಳಗಿನ ಕೆಂಪು ತೆರಳು ಬೆಳೆಯದೇ ಗಟ್ಟಿ ಯಾಗಿ ಸುಗಂಧ ಭರಿತವೋ, ನಾಟದ ಉಪಯೋಗಕ್ಕೋ ಬರದು. ಕೆಲವೊಮ್ಮೆ ಹೊರಗಿನಿಂದ ಮರ ಬೆಳೆದರೂ ಒಳಗಿನ ತಿರಳು ಬೆಳೆದಿರದು. ಸುಗಂಧ ಉಪಯೋಗಕ್ಕೆ ಬಳಸುವ ಶ್ರೀಗಂಧ, ಚಂದನ, ನಾಟದ ಉಪಯೋಗಕ್ಕೆ ಬಳಸುವ ತೇಗ ಮಹಾಗನಿ ಹೆಬ್ಬೇವು ಕನಿಷ್ಠ ನಲವತ್ತು ಐವತ್ತು ವರ್ಷಗಳ ಕಾಲ ನೈಸರ್ಗಿಕವಾಗಿ ಬೆಳೆಯಲೇ ಬೇಕು.ಸಸಿ ಮರ ನೈಸರ್ಗಿಕವಾಗಿ ಹಂತ ಹಂತವಾಗಿ ಬೆಳೆಯಲೇ ಬೇಕು…. ದಿಡೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣವಾಗುತ್ತವೆ.

ಮಲೆನಾಡಿನಲ್ಲಿ ಕೃಷಿಕರೊಬ್ಬರು ಅತ್ಯಂತ ವ್ಯವಸ್ಥಿತವಾಗಿ ಬೆಳೆದ ಸಾಗುವಾನಿ‌ ತೋಟದ ದೃಶ್ಯಾವಳಿಯಿದೆ. ಎಷ್ಟೇ ಆರೈಕೆ ಮಾಡಿದರೆ ನಮ್ಮ ‌ಮಲೆನಾಡಿನಲ್ಲಿ “ಹತ್ತು ” ವರ್ಷಗಳಿಗೆ ಇಷ್ಟೇ ಬೆಳೆಯಲು ಸಾಧ್ಯ. ಕೆಲವರು ಎರಡು ಮೂರು ವರ್ಷಗಳಿಗೇ ಅಡಿಕೆ ಸಸಿ ಫಸಲು ಬಿಡುತ್ತದೆ ಎನ್ನುತ್ತಾರೆ. ಹೀಗೆ ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ.

ನಮ್ಮ ಮಲೆನಾಡಿನಲ್ಲಿ ಅಡಿಕೆ ನಿಜ ಫಸಲು ಪಡೆಯಲು ಕನಿಷ್ಠ ಹನ್ನೆರಡು ವರ್ಷ ಬೇಕೇ ಬೇಕು. ತಡವಾಗಿ ಮಲೆನಾಡಿನಲ್ಲಿ ಅಡಿಕೆ ಫಸಲು ನೀಡು ವುದರಿಂದ ಮಲೆನಾಡಿನಲ್ಲಿ ಅಡಿಕೆ ಮರದ ಜೀವಿತಾವಧಿ ಹೆಚ್ಚು.ನಮ್ಮ ಹಿರಿಯರ ಪ್ರಕಾರ ಮಲೆನಾಡಿನಲ್ಲಿ ಒಂದು ಅಡಿಕೆ ಮರ ಕನಿಷ್ಠ ಅರವತ್ತು ವರ್ಷ ಫಸಲು ನೀಡುತ್ತದೆ. ‌ಬಯಲು ಸೀಮೆಯಲ್ಲಿ ಬೇಗ ಫಸಲು ನೀಡಿ ಬೇಗ ಫಸಲು ಕುಂಠಿತವಾಗುತ್ತದೆ.

ಬರಹ :
ಪ್ರಬಂಧ ಅಂಬುತೀರ್ಥ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪ್ರಬಂಧ ಅಂಬುತೀರ್ಥ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅಂಬುತೀರ್ಥದ ನಿವಾಸಿ ಪ್ರಬಂಧ. ಬಿ ಎ. ವಿಧ್ಯಾಭ್ಯಾಸ ಮುಗಿಸಿದ ಮೇಲೆ ಕೃಷಿ ಕೆಲಸ. ಕಥೆ , ಪರಿಸರ, ಕೃಷಿ , ವಿಜ್ಞಾನ , ಸಾಮಾಜಿಕ ಮತ್ತು ರಾಜಕೀಯ ವಿಚಾರಗಳ ಲೇಖನ ಬರೆಯುವ ಹವ್ಯಾಸ. ಮಲೆನಾಡು ಗಿಡ್ಡ ಗೋ ತಳಿ ಸಂವರ್ಧನೆ, ಜೀರಿಗೆ ಮೆಣಸಿನಕಾಯಿ ಬೆಳೆಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಣೆ. ಮಲೆನಾಡು ಗಿಡ್ಡ ತಳಿ ಹಸುಗಳ ಸೆಗಣಿಯನ್ನು ಮೌಲ್ಯ ವರ್ಧನೆ ಮಾಡಿ ಕೃಷಿ ಸ್ನೇಹಿ ಸೂಕ್ಷ್ಮಾಣು ಜೀವಿಯುಕ್ತ ಸಾವಯವ ಗೊಬ್ಬರ ತಯಾರಿಸಿ ಮಾರಾಟ ಮಾಡುವ ಕೆಲಸವನ್ನೂ ಮಾಡುತ್ತಿದ್ದಾರೆ.

Published by
ಪ್ರಬಂಧ ಅಂಬುತೀರ್ಥ

Recent Posts

ಹವಾಮಾನ ವರದಿ | 20.05.2026 | ಮೇ 26 ಬಳಿಕ ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಸಾಧ್ಯತೆ| ಕರಾವಳಿಯಲ್ಲಿ ಮಳೆ ಕುಂಠಿತ, ಉತ್ತರ ಭಾರತಕ್ಕೆ ಮಳೆ ಸೂಚನೆ

ಕರ್ನಾಟಕದಲ್ಲಿ ಮುಂಗಾರು ಪೂರ್ವ ಚಟುವಟಿಕೆಗಳು ನಿಧಾನಗೊಂಡಿರುವ ನಡುವೆ, 21.05.2026ರ ಬೆಳಿಗ್ಗೆ 8 ಗಂಟೆವರೆಗಿನ…

51 minutes ago

ಉತ್ತರ ಭಾರತ ಉರಿಯುತ್ತಿದೆ – ಮೇ 25ರವರೆಗೆ ತೀವ್ರ ಬಿಸಿಗಾಳಿ ಎಚ್ಚರಿಕೆ

ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…

8 hours ago

ರಾಸಾಯನಿಕ ಗೊಬ್ಬರ ಕೊರತೆ ಭೀತಿ‌ ; ಸಾವಯವ ಕೃಷಿಯತ್ತ ಗಮನಹರಿಸಲು ರೈತರಿಗೆ ಕೇಂದ್ರ ಸಚಿವರ ಕರೆ

ಜಾಗತಿಕ ಅಸ್ಥಿರತೆಯಿಂದ ರಸಗೊಬ್ಬರ ಲಭ್ಯತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು…

8 hours ago

ಮೋಹಿತ್‌ ನಗರ್‌ ಅಡಿಕೆ ಗಿಡ ಏಕೆ ರೈತರ ಫೇವರಿಟ್‌..? ಹೆಚ್ಚು ಇಳುವರಿ, ವೇಗದ ಬೆಳವಣಿಗೆ ಇದರ ವಿಶೇಷತೆ..!

ಮೋಹಿತ್‌ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…

16 hours ago

ಹವಾಮಾನ ವರದಿ | 19-05-2026 | ಕರಾವಳಿಯಲ್ಲಿ ಮಳೆ ಕ್ಷೀಣಿಸುವ ಲಕ್ಷಣ – ಮೇ 27ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…

1 day ago

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

2 days ago