Advertisement
Opinion

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

Share

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ ಹದಿನೈದೋ ವರ್ಷದ ನಂತರ ಹಾಕಿದ ಬಂಡವಾಳಕ್ಕೆ ಲಕ್ಷ ಲಕ್ಷ ಹಣ ವಾಪಸು ಕೊಡುವ ಬರವಸೆ ನೀಡಿತ್ತು‌. ಆದರೆ ಹತ್ತು ಹದಿನೈದು ವರ್ಷಗಳಿಗೆ ಅದೆಂಥದೇ ಸ್ವರ್ಗ ಸದೃಶ ಭೂಮಿಯಲ್ಲಿ ಅದೆಷ್ಟೇ ಗೊಬ್ಬರ ನೀರು ಆರೈಕೆ ಮಾಡಿದರೂ ನೆಟ್ಟ ಸಾಗವಾನಿ ಮೂರಿಂಚಿಗಿಂತ ಹೆಚ್ಚಿನ ವ್ಯಾಸ ಕ್ಕೆ ಬೆಳೆಯೋಲ್ಲ.

ಮಹಾಗನಿ, ಶ್ರೀಗಂಧ ಮುಂತಾದ ಮರ ಆಗುವ ಜಾತಿಯ ಸಸ್ಯಗಳು ತಮ್ಮ ಒಳಗಿನ ಕೆಂಪು ತೆರಳು ಬೆಳೆಯದೇ ಗಟ್ಟಿ ಯಾಗಿ ಸುಗಂಧ ಭರಿತವೋ, ನಾಟದ ಉಪಯೋಗಕ್ಕೋ ಬರದು. ಕೆಲವೊಮ್ಮೆ ಹೊರಗಿನಿಂದ ಮರ ಬೆಳೆದರೂ ಒಳಗಿನ ತಿರಳು ಬೆಳೆದಿರದು. ಸುಗಂಧ ಉಪಯೋಗಕ್ಕೆ ಬಳಸುವ ಶ್ರೀಗಂಧ, ಚಂದನ, ನಾಟದ ಉಪಯೋಗಕ್ಕೆ ಬಳಸುವ ತೇಗ ಮಹಾಗನಿ ಹೆಬ್ಬೇವು ಕನಿಷ್ಠ ನಲವತ್ತು ಐವತ್ತು ವರ್ಷಗಳ ಕಾಲ ನೈಸರ್ಗಿಕವಾಗಿ ಬೆಳೆಯಲೇ ಬೇಕು.ಸಸಿ ಮರ ನೈಸರ್ಗಿಕವಾಗಿ ಹಂತ ಹಂತವಾಗಿ ಬೆಳೆಯಲೇ ಬೇಕು…. ದಿಡೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣವಾಗುತ್ತವೆ.

ಮಲೆನಾಡಿನಲ್ಲಿ ಕೃಷಿಕರೊಬ್ಬರು ಅತ್ಯಂತ ವ್ಯವಸ್ಥಿತವಾಗಿ ಬೆಳೆದ ಸಾಗುವಾನಿ‌ ತೋಟದ ದೃಶ್ಯಾವಳಿಯಿದೆ. ಎಷ್ಟೇ ಆರೈಕೆ ಮಾಡಿದರೆ ನಮ್ಮ ‌ಮಲೆನಾಡಿನಲ್ಲಿ “ಹತ್ತು ” ವರ್ಷಗಳಿಗೆ ಇಷ್ಟೇ ಬೆಳೆಯಲು ಸಾಧ್ಯ. ಕೆಲವರು ಎರಡು ಮೂರು ವರ್ಷಗಳಿಗೇ ಅಡಿಕೆ ಸಸಿ ಫಸಲು ಬಿಡುತ್ತದೆ ಎನ್ನುತ್ತಾರೆ. ಹೀಗೆ ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ.

ನಮ್ಮ ಮಲೆನಾಡಿನಲ್ಲಿ ಅಡಿಕೆ ನಿಜ ಫಸಲು ಪಡೆಯಲು ಕನಿಷ್ಠ ಹನ್ನೆರಡು ವರ್ಷ ಬೇಕೇ ಬೇಕು. ತಡವಾಗಿ ಮಲೆನಾಡಿನಲ್ಲಿ ಅಡಿಕೆ ಫಸಲು ನೀಡು ವುದರಿಂದ ಮಲೆನಾಡಿನಲ್ಲಿ ಅಡಿಕೆ ಮರದ ಜೀವಿತಾವಧಿ ಹೆಚ್ಚು.ನಮ್ಮ ಹಿರಿಯರ ಪ್ರಕಾರ ಮಲೆನಾಡಿನಲ್ಲಿ ಒಂದು ಅಡಿಕೆ ಮರ ಕನಿಷ್ಠ ಅರವತ್ತು ವರ್ಷ ಫಸಲು ನೀಡುತ್ತದೆ. ‌ಬಯಲು ಸೀಮೆಯಲ್ಲಿ ಬೇಗ ಫಸಲು ನೀಡಿ ಬೇಗ ಫಸಲು ಕುಂಠಿತವಾಗುತ್ತದೆ.

ಬರಹ :
ಪ್ರಬಂಧ ಅಂಬುತೀರ್ಥ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪ್ರಬಂಧ ಅಂಬುತೀರ್ಥ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅಂಬುತೀರ್ಥದ ನಿವಾಸಿ ಪ್ರಬಂಧ. ಬಿ ಎ. ವಿಧ್ಯಾಭ್ಯಾಸ ಮುಗಿಸಿದ ಮೇಲೆ ಕೃಷಿ ಕೆಲಸ. ಕಥೆ , ಪರಿಸರ, ಕೃಷಿ , ವಿಜ್ಞಾನ , ಸಾಮಾಜಿಕ ಮತ್ತು ರಾಜಕೀಯ ವಿಚಾರಗಳ ಲೇಖನ ಬರೆಯುವ ಹವ್ಯಾಸ. ಮಲೆನಾಡು ಗಿಡ್ಡ ಗೋ ತಳಿ ಸಂವರ್ಧನೆ, ಜೀರಿಗೆ ಮೆಣಸಿನಕಾಯಿ ಬೆಳೆಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಣೆ. ಮಲೆನಾಡು ಗಿಡ್ಡ ತಳಿ ಹಸುಗಳ ಸೆಗಣಿಯನ್ನು ಮೌಲ್ಯ ವರ್ಧನೆ ಮಾಡಿ ಕೃಷಿ ಸ್ನೇಹಿ ಸೂಕ್ಷ್ಮಾಣು ಜೀವಿಯುಕ್ತ ಸಾವಯವ ಗೊಬ್ಬರ ತಯಾರಿಸಿ ಮಾರಾಟ ಮಾಡುವ ಕೆಲಸವನ್ನೂ ಮಾಡುತ್ತಿದ್ದಾರೆ.

Published by
ಪ್ರಬಂಧ ಅಂಬುತೀರ್ಥ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

41 minutes ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

1 hour ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

16 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago