Advertisement
MIRROR FOCUS

ವಯನಾಡು ದುರಂತದ ಬೆನ್ನಿಗೇ 6 ರಾಜ್ಯಗಳ ಪಶ್ಚಿಮಘಟ್ಟ ಸೂಕ್ಷ್ಮ ಪ್ರದೇಶವೆಂದು ಘೋಷಣೆ ಮಾಡಿದ ಕೇಂದ್ರ ಸರ್ಕಾರ

Share

ಹಲವು ವರ್ಷಗಳಿಂದ ಪಶ್ಚಿಮ ಘಟ್ಟವನ್ನು  ಆಧುನಿಕರಣದಿಂದ ಅಥವಾ ಮಾನವ ಹಸ್ತಕ್ಷೇಪದಿಂದ ಉಳಿಸಿ ಎಂಬ ಕೂಗು ಕೇಳಿ ಬರುತ್ತಲೇ ಇದೆ. ಆದರೆ ಬಂದ ಯಾವುದೇ ಸರ್ಕಾರಗಳು ಇದಕ್ಕೆ ಸೊಪ್ಪು ಹಾಕಲಿಲ್ಲ. ಇದೀಗ ಮೇಲಿಂದ ಮೇಲೆ ರಣ ಭೀಕರ ದುರಂತಗಳು ನಡೆದ ಮೇಲೆ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡಿದೆ.

Advertisement
Advertisement
Advertisement
Advertisement

ಕೇರಳ (Kerala), ಕರ್ನಾಟಕ (Karnataka) ಸೇರಿ ಒಟ್ಟು 6 ರಾಜ್ಯಗಳ ಪಶ್ಚಿಮಘಟ್ಟಗಳನ್ನ  ಸೂಕ್ಷ್ಮ ಪ್ರದೇಶ (Eco Zone) ಅಂತ ಘೋಷಿಸಿದ್ದು ಕರಡು ಅಧಿಸೂಚನೆಯನ್ನೂ ಹೊರಡಿಸಿದೆ. ಕರ್ನಾಟಕದ ಘಟ್ಟಪ್ರದೇಶಗಳಲ್ಲಿರೋ ಅಕ್ರಮ ಹೋಂ ಸ್ಟೇ, ರೆಸಾರ್ಟ್‌ಗಳ ತೆರವಿಗೂ ಸರ್ಕಾರ ಮುಂದಾಗಿದೆ. ಈ ಮಧ್ಯೆ ಉತ್ತರಭಾರತದಲ್ಲೂ ಪರ್ವತಶ್ರೇಣಿಗಳು ಬಾಯ್ಬಿಡೋಕೆ ಶುರು ಮಾಡಿವೆ.

Advertisement

ಪಶ್ಚಿಮಘಟ್ಟ ಉಳಿವಿಗೆ ಅಧಿಸೂಚನೆ : ಕೇರಳದ 9,993 ಚದರ ಕಿ.ಮೀ ಪಶ್ಚಿಮಘಟ್ಟ ಪ್ರದೇಶ, ಕರ್ನಾಟಕ, ಗೋವಾ ಪಶ್ಚಿಮ ಘಟ್ಟ ಪ್ರದೇಶಗಳು, ತಮಿಳುನಾಡು, ಮಹಾರಾಷ್ಟ್ರ, ಗುಜರಾತ್‌ ಪಶ್ಚಿಮಘಟ್ಟಗಳು ಒಟ್ಟು 6 ರಾಜ್ಯಗಳ ಪಶ್ಚಿಮಘಟ್ಟಗಳು ಪರಿಸರ ಸೂಕ್ಷ್ಮ ಪ್ರದೇಶ ಅಂತ ಕೇಂದ್ರ ಸರ್ಕಾರ ಗುರುತಿಸಿದೆ. ಒಟ್ಟು 56 ಸಾವಿರದ 825 ಚದರ ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶ ಅಂತ ಕರಡು ಅಧಿಸೂಚನೆ ಹೊರಡಿಸಿದೆ ಕೇಂದ್ರ ಸರ್ಕಾರ, ಮುಂದಿನ 60 ದಿನದಲ್ಲಿ ತಕರಾರು-ಸಲಹೆಗಳಿದ್ದರೆ ನೀಡಲು ಸೂಚನೆ ಕೊಡಲು ಸಮಯ ಕೊಟ್ಟಿದೆ.

ಪಶ್ಚಿಮಘಟ್ಟಗಳನ್ನ ಪರಿಸರ ಸೂಕ್ಷ್ಮ ಪ್ರದೇಶ ಅಂತ ಕೇಂದ್ರ ಸರ್ಕಾರ ಘೋಷಿಸಿದೆ. ಇದರಿಂದ ಮರಳುಗಾರಿಕೆ, ಕಲ್ಲು ಗಣಿಗಾರಿಕೆ ಸಂಪೂರ್ಣ ನಿಷೇಧವಾಗಲಿದೆ. ಅದಕ್ಕೂ ಮೊದಲು ಈಗ ಗಣಿಗಾರಿಕೆ ನಡೆಸ್ತಿರೋರ ಗುತ್ತಿಗೆ ಅವಧಿ ಮುಗಿದರೂ ಆ ಕ್ಷಣವೇ ಗಣಿಗಾರಿಕೆ ಸ್ಥಗಿತಗೊಳಿಸಬೇಕು. ಉಷ್ಣ ವಿದ್ಯುತ್‌ ಸ್ಥಾವರ, ಕೈಗಾರಿಕೆ ಸ್ಥಾಪಿಸುವಂತಿಲ್ಲ. ಅಕ್ರಮ ರೆಸಾರ್ಟ್‌, ಹೋಂ ಸ್ಟೇಗಳಿದ್ರೂ ತೆರವಾಗಬೇಕು. ಅಧಿಸೂಚನೆ ಹೊರಡಿಸಿದ 5 ವರ್ಷಗಳಲ್ಲಿ ಈ ಆದೇಶ ಸಂಪೂರ್ಣವಾಗಿ ಜಾರಿ ಆಗಲೇಬೇಕು ಅನ್ನುತ್ತೆ ಕಾನೂನು.

ಅಕ್ರಮ ಕಟ್ಟಡಗಳ ತೆರವಿಗೆ ಅರಣ್ಯ ಸಚಿವರ ಸೂಚನೆ: ಹಾಸನ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬೆಟ್ಟಗುಡ್ಡಗಳೇ ಕುಸಿದು ಬೀಳ್ತಿವೆ. ಉತ್ತರ ಕನ್ನಡದ ಶಿರೂರಲ್ಲಿ ಗುಡ್ಡ ಕುಸಿದ 10 ಜನ ಶವವಾದರೂ, ಹಾಸನ ಧರ್ಮಸ್ಥಳ ಮಾರ್ಗದ ಶಿರಾಡಿಘಾಟ್‌‌‌ನಲ್ಲಿ ಗುಡ್ಡ ಕುಸಿದು 4 ದಿನ ರಸ್ತೆಯೇ ಬಂದ್‌ ಆಯಿತು. ಚಾರ್ಮಾಡಿಘಾಟ್‌‌ನಲ್ಲಿ ಬೆಟ್ಟಗುಡ್ಡಗಳೇ ಕುಸಿದು 2 ದಿನ ವಾಹನಗಳ ಸಂಚಾರವೇ ನಿಂತೋಗಿತ್ತು. ಪಶ್ಚಿಮ ಘಟ್ಟಗಳಲ್ಲಿ ರಣಮಳೆ ಹೊಡೆತಕ್ಕೆ 2 ವಾರದಲ್ಲಿ ಆದ ಸಾಲು ಸಾಲು ದುರಂತಗಳು ಅಷ್ಟಿಷ್ಟಲ್ಲ. ಈಗ ವಯನಾಡು ದುರಂತ ರಾಜ್ಯ ಸರ್ಕಾರವನ್ನ ಎಚ್ಚರಿಸಿದೆ. ಅದಕ್ಕೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಪಶ್ಚಿಮಘಟ್ಟಗಳಲ್ಲಿರುವ ಅಕ್ರಮ ರೆಸಾರ್ಟ್‌ಗಳು, ಅರಣ್ಯ ಒತ್ತುವರಿ ತೆರವಿಗೆ ಮೌಖಿಕ ಆದೇಶ ಕೊಟ್ಟಿದ್ದಾರೆ.

Advertisement
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

1 day ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

2 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

2 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

3 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

3 days ago

ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ

ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…

3 days ago