MIRROR FOCUS

ವಯನಾಡು ದುರಂತದ ಬೆನ್ನಿಗೇ 6 ರಾಜ್ಯಗಳ ಪಶ್ಚಿಮಘಟ್ಟ ಸೂಕ್ಷ್ಮ ಪ್ರದೇಶವೆಂದು ಘೋಷಣೆ ಮಾಡಿದ ಕೇಂದ್ರ ಸರ್ಕಾರ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹಲವು ವರ್ಷಗಳಿಂದ ಪಶ್ಚಿಮ ಘಟ್ಟವನ್ನು  ಆಧುನಿಕರಣದಿಂದ ಅಥವಾ ಮಾನವ ಹಸ್ತಕ್ಷೇಪದಿಂದ ಉಳಿಸಿ ಎಂಬ ಕೂಗು ಕೇಳಿ ಬರುತ್ತಲೇ ಇದೆ. ಆದರೆ ಬಂದ ಯಾವುದೇ ಸರ್ಕಾರಗಳು ಇದಕ್ಕೆ ಸೊಪ್ಪು ಹಾಕಲಿಲ್ಲ. ಇದೀಗ ಮೇಲಿಂದ ಮೇಲೆ ರಣ ಭೀಕರ ದುರಂತಗಳು ನಡೆದ ಮೇಲೆ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡಿದೆ.

Advertisement

ಕೇರಳ (Kerala), ಕರ್ನಾಟಕ (Karnataka) ಸೇರಿ ಒಟ್ಟು 6 ರಾಜ್ಯಗಳ ಪಶ್ಚಿಮಘಟ್ಟಗಳನ್ನ  ಸೂಕ್ಷ್ಮ ಪ್ರದೇಶ (Eco Zone) ಅಂತ ಘೋಷಿಸಿದ್ದು ಕರಡು ಅಧಿಸೂಚನೆಯನ್ನೂ ಹೊರಡಿಸಿದೆ. ಕರ್ನಾಟಕದ ಘಟ್ಟಪ್ರದೇಶಗಳಲ್ಲಿರೋ ಅಕ್ರಮ ಹೋಂ ಸ್ಟೇ, ರೆಸಾರ್ಟ್‌ಗಳ ತೆರವಿಗೂ ಸರ್ಕಾರ ಮುಂದಾಗಿದೆ. ಈ ಮಧ್ಯೆ ಉತ್ತರಭಾರತದಲ್ಲೂ ಪರ್ವತಶ್ರೇಣಿಗಳು ಬಾಯ್ಬಿಡೋಕೆ ಶುರು ಮಾಡಿವೆ.

ಪಶ್ಚಿಮಘಟ್ಟ ಉಳಿವಿಗೆ ಅಧಿಸೂಚನೆ : ಕೇರಳದ 9,993 ಚದರ ಕಿ.ಮೀ ಪಶ್ಚಿಮಘಟ್ಟ ಪ್ರದೇಶ, ಕರ್ನಾಟಕ, ಗೋವಾ ಪಶ್ಚಿಮ ಘಟ್ಟ ಪ್ರದೇಶಗಳು, ತಮಿಳುನಾಡು, ಮಹಾರಾಷ್ಟ್ರ, ಗುಜರಾತ್‌ ಪಶ್ಚಿಮಘಟ್ಟಗಳು ಒಟ್ಟು 6 ರಾಜ್ಯಗಳ ಪಶ್ಚಿಮಘಟ್ಟಗಳು ಪರಿಸರ ಸೂಕ್ಷ್ಮ ಪ್ರದೇಶ ಅಂತ ಕೇಂದ್ರ ಸರ್ಕಾರ ಗುರುತಿಸಿದೆ. ಒಟ್ಟು 56 ಸಾವಿರದ 825 ಚದರ ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶ ಅಂತ ಕರಡು ಅಧಿಸೂಚನೆ ಹೊರಡಿಸಿದೆ ಕೇಂದ್ರ ಸರ್ಕಾರ, ಮುಂದಿನ 60 ದಿನದಲ್ಲಿ ತಕರಾರು-ಸಲಹೆಗಳಿದ್ದರೆ ನೀಡಲು ಸೂಚನೆ ಕೊಡಲು ಸಮಯ ಕೊಟ್ಟಿದೆ.

ಪಶ್ಚಿಮಘಟ್ಟಗಳನ್ನ ಪರಿಸರ ಸೂಕ್ಷ್ಮ ಪ್ರದೇಶ ಅಂತ ಕೇಂದ್ರ ಸರ್ಕಾರ ಘೋಷಿಸಿದೆ. ಇದರಿಂದ ಮರಳುಗಾರಿಕೆ, ಕಲ್ಲು ಗಣಿಗಾರಿಕೆ ಸಂಪೂರ್ಣ ನಿಷೇಧವಾಗಲಿದೆ. ಅದಕ್ಕೂ ಮೊದಲು ಈಗ ಗಣಿಗಾರಿಕೆ ನಡೆಸ್ತಿರೋರ ಗುತ್ತಿಗೆ ಅವಧಿ ಮುಗಿದರೂ ಆ ಕ್ಷಣವೇ ಗಣಿಗಾರಿಕೆ ಸ್ಥಗಿತಗೊಳಿಸಬೇಕು. ಉಷ್ಣ ವಿದ್ಯುತ್‌ ಸ್ಥಾವರ, ಕೈಗಾರಿಕೆ ಸ್ಥಾಪಿಸುವಂತಿಲ್ಲ. ಅಕ್ರಮ ರೆಸಾರ್ಟ್‌, ಹೋಂ ಸ್ಟೇಗಳಿದ್ರೂ ತೆರವಾಗಬೇಕು. ಅಧಿಸೂಚನೆ ಹೊರಡಿಸಿದ 5 ವರ್ಷಗಳಲ್ಲಿ ಈ ಆದೇಶ ಸಂಪೂರ್ಣವಾಗಿ ಜಾರಿ ಆಗಲೇಬೇಕು ಅನ್ನುತ್ತೆ ಕಾನೂನು.

ಅಕ್ರಮ ಕಟ್ಟಡಗಳ ತೆರವಿಗೆ ಅರಣ್ಯ ಸಚಿವರ ಸೂಚನೆ: ಹಾಸನ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬೆಟ್ಟಗುಡ್ಡಗಳೇ ಕುಸಿದು ಬೀಳ್ತಿವೆ. ಉತ್ತರ ಕನ್ನಡದ ಶಿರೂರಲ್ಲಿ ಗುಡ್ಡ ಕುಸಿದ 10 ಜನ ಶವವಾದರೂ, ಹಾಸನ ಧರ್ಮಸ್ಥಳ ಮಾರ್ಗದ ಶಿರಾಡಿಘಾಟ್‌‌‌ನಲ್ಲಿ ಗುಡ್ಡ ಕುಸಿದು 4 ದಿನ ರಸ್ತೆಯೇ ಬಂದ್‌ ಆಯಿತು. ಚಾರ್ಮಾಡಿಘಾಟ್‌‌ನಲ್ಲಿ ಬೆಟ್ಟಗುಡ್ಡಗಳೇ ಕುಸಿದು 2 ದಿನ ವಾಹನಗಳ ಸಂಚಾರವೇ ನಿಂತೋಗಿತ್ತು. ಪಶ್ಚಿಮ ಘಟ್ಟಗಳಲ್ಲಿ ರಣಮಳೆ ಹೊಡೆತಕ್ಕೆ 2 ವಾರದಲ್ಲಿ ಆದ ಸಾಲು ಸಾಲು ದುರಂತಗಳು ಅಷ್ಟಿಷ್ಟಲ್ಲ. ಈಗ ವಯನಾಡು ದುರಂತ ರಾಜ್ಯ ಸರ್ಕಾರವನ್ನ ಎಚ್ಚರಿಸಿದೆ. ಅದಕ್ಕೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಪಶ್ಚಿಮಘಟ್ಟಗಳಲ್ಲಿರುವ ಅಕ್ರಮ ರೆಸಾರ್ಟ್‌ಗಳು, ಅರಣ್ಯ ಒತ್ತುವರಿ ತೆರವಿಗೆ ಮೌಖಿಕ ಆದೇಶ ಕೊಟ್ಟಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಗವದ್ಗೀತೆ ಬಿಡಿ, ಬೇರೆ ಏನಾದ್ರೂ ಸ್ತೋತ್ರ ಬರ್ತದಾ..?

ಹಿಂದೂ ಧರ್ಮದ ವಿಶೇಷತೆ ಎಂದರೆ ಅದು ಸ್ವ ವಿಮರ್ಶೆಯ (self -criticism) ಸ್ವಾತಂತ್ರ್ಯ…

6 hours ago

ಮೇ.9 | ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯ ನಾಟಕ | ಸಂತೋಷದಿಂದ ನಗಲು ಒಂದು ವೇದಿಕೆ

ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಹೊಸತನದ ಶೋರೂಮ್ ಅನಾವರಣದ ಅಂಗವಾಗಿ ಮೇ 9…

8 hours ago

ಮೇ.11 ಮುಳಿಯ ಕೃಷಿ ಗೋಷ್ಟಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ | ಕೃಷಿ-ಕೃಷಿ ಮಾರುಕಟ್ಟೆ-ಕೃಷಿ ಯಾಂತ್ರೀಕರಣ -ಕೃಷಿ ಬೆಳವಣಿಗೆ |

ಮುಳಿಯ ನೂತನ ನವೀಕೃತ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಕೃಷಿ ಬೆಳವಣಿಗೆಗೆ…

8 hours ago

ಧ್ರುವ ಯೋಗ ಯಾವುದರ ಸಂಕೇತ..? | ಯಾವ ರಾಶಿಯವರಿಗೆ ಸದ್ಯ ಈ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

8 hours ago

ರಾಷ್ಟ್ರೀಯ ಭದ್ರತೆ | ಪ್ರಧಾನಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ | ಹಲವು ವಿಷಯಗಳ ಕುರಿತು ಚರ್ಚೆ

ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರದ ಎಲ್ಲಾ…

19 hours ago

ರಾಜ್ಯದ 6 ಜಿಲ್ಲೆಗಳಲ್ಲಿ ಶೀಥಲೀಕರಣ ಘಟಕ ನಿರ್ಮಾಣ

ರಾಜ್ಯದ 6 ಜಿಲ್ಲೆಗಳಲ್ಲಿ ತೋಟಗಾರಿಕಾ ಬೆಳೆಗಳಿಗೆ ಅನುಕೂಲವಾಗುವಂತೆ ಶೀಥಲೀಕರಣ ಘಟಕಗಳನ್ನು ನಿರ್ಮಿಸಲಾಗುತ್ತಿದೆ ಎಂದು…

19 hours ago