Advertisement
MIRROR FOCUS

ವಯನಾಡು ದುರಂತದ ಬೆನ್ನಿಗೇ 6 ರಾಜ್ಯಗಳ ಪಶ್ಚಿಮಘಟ್ಟ ಸೂಕ್ಷ್ಮ ಪ್ರದೇಶವೆಂದು ಘೋಷಣೆ ಮಾಡಿದ ಕೇಂದ್ರ ಸರ್ಕಾರ

Share

ಹಲವು ವರ್ಷಗಳಿಂದ ಪಶ್ಚಿಮ ಘಟ್ಟವನ್ನು  ಆಧುನಿಕರಣದಿಂದ ಅಥವಾ ಮಾನವ ಹಸ್ತಕ್ಷೇಪದಿಂದ ಉಳಿಸಿ ಎಂಬ ಕೂಗು ಕೇಳಿ ಬರುತ್ತಲೇ ಇದೆ. ಆದರೆ ಬಂದ ಯಾವುದೇ ಸರ್ಕಾರಗಳು ಇದಕ್ಕೆ ಸೊಪ್ಪು ಹಾಕಲಿಲ್ಲ. ಇದೀಗ ಮೇಲಿಂದ ಮೇಲೆ ರಣ ಭೀಕರ ದುರಂತಗಳು ನಡೆದ ಮೇಲೆ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡಿದೆ.

ಕೇರಳ (Kerala), ಕರ್ನಾಟಕ (Karnataka) ಸೇರಿ ಒಟ್ಟು 6 ರಾಜ್ಯಗಳ ಪಶ್ಚಿಮಘಟ್ಟಗಳನ್ನ  ಸೂಕ್ಷ್ಮ ಪ್ರದೇಶ (Eco Zone) ಅಂತ ಘೋಷಿಸಿದ್ದು ಕರಡು ಅಧಿಸೂಚನೆಯನ್ನೂ ಹೊರಡಿಸಿದೆ. ಕರ್ನಾಟಕದ ಘಟ್ಟಪ್ರದೇಶಗಳಲ್ಲಿರೋ ಅಕ್ರಮ ಹೋಂ ಸ್ಟೇ, ರೆಸಾರ್ಟ್‌ಗಳ ತೆರವಿಗೂ ಸರ್ಕಾರ ಮುಂದಾಗಿದೆ. ಈ ಮಧ್ಯೆ ಉತ್ತರಭಾರತದಲ್ಲೂ ಪರ್ವತಶ್ರೇಣಿಗಳು ಬಾಯ್ಬಿಡೋಕೆ ಶುರು ಮಾಡಿವೆ.

ಪಶ್ಚಿಮಘಟ್ಟ ಉಳಿವಿಗೆ ಅಧಿಸೂಚನೆ : ಕೇರಳದ 9,993 ಚದರ ಕಿ.ಮೀ ಪಶ್ಚಿಮಘಟ್ಟ ಪ್ರದೇಶ, ಕರ್ನಾಟಕ, ಗೋವಾ ಪಶ್ಚಿಮ ಘಟ್ಟ ಪ್ರದೇಶಗಳು, ತಮಿಳುನಾಡು, ಮಹಾರಾಷ್ಟ್ರ, ಗುಜರಾತ್‌ ಪಶ್ಚಿಮಘಟ್ಟಗಳು ಒಟ್ಟು 6 ರಾಜ್ಯಗಳ ಪಶ್ಚಿಮಘಟ್ಟಗಳು ಪರಿಸರ ಸೂಕ್ಷ್ಮ ಪ್ರದೇಶ ಅಂತ ಕೇಂದ್ರ ಸರ್ಕಾರ ಗುರುತಿಸಿದೆ. ಒಟ್ಟು 56 ಸಾವಿರದ 825 ಚದರ ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶ ಅಂತ ಕರಡು ಅಧಿಸೂಚನೆ ಹೊರಡಿಸಿದೆ ಕೇಂದ್ರ ಸರ್ಕಾರ, ಮುಂದಿನ 60 ದಿನದಲ್ಲಿ ತಕರಾರು-ಸಲಹೆಗಳಿದ್ದರೆ ನೀಡಲು ಸೂಚನೆ ಕೊಡಲು ಸಮಯ ಕೊಟ್ಟಿದೆ.

ಪಶ್ಚಿಮಘಟ್ಟಗಳನ್ನ ಪರಿಸರ ಸೂಕ್ಷ್ಮ ಪ್ರದೇಶ ಅಂತ ಕೇಂದ್ರ ಸರ್ಕಾರ ಘೋಷಿಸಿದೆ. ಇದರಿಂದ ಮರಳುಗಾರಿಕೆ, ಕಲ್ಲು ಗಣಿಗಾರಿಕೆ ಸಂಪೂರ್ಣ ನಿಷೇಧವಾಗಲಿದೆ. ಅದಕ್ಕೂ ಮೊದಲು ಈಗ ಗಣಿಗಾರಿಕೆ ನಡೆಸ್ತಿರೋರ ಗುತ್ತಿಗೆ ಅವಧಿ ಮುಗಿದರೂ ಆ ಕ್ಷಣವೇ ಗಣಿಗಾರಿಕೆ ಸ್ಥಗಿತಗೊಳಿಸಬೇಕು. ಉಷ್ಣ ವಿದ್ಯುತ್‌ ಸ್ಥಾವರ, ಕೈಗಾರಿಕೆ ಸ್ಥಾಪಿಸುವಂತಿಲ್ಲ. ಅಕ್ರಮ ರೆಸಾರ್ಟ್‌, ಹೋಂ ಸ್ಟೇಗಳಿದ್ರೂ ತೆರವಾಗಬೇಕು. ಅಧಿಸೂಚನೆ ಹೊರಡಿಸಿದ 5 ವರ್ಷಗಳಲ್ಲಿ ಈ ಆದೇಶ ಸಂಪೂರ್ಣವಾಗಿ ಜಾರಿ ಆಗಲೇಬೇಕು ಅನ್ನುತ್ತೆ ಕಾನೂನು.

ಅಕ್ರಮ ಕಟ್ಟಡಗಳ ತೆರವಿಗೆ ಅರಣ್ಯ ಸಚಿವರ ಸೂಚನೆ: ಹಾಸನ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬೆಟ್ಟಗುಡ್ಡಗಳೇ ಕುಸಿದು ಬೀಳ್ತಿವೆ. ಉತ್ತರ ಕನ್ನಡದ ಶಿರೂರಲ್ಲಿ ಗುಡ್ಡ ಕುಸಿದ 10 ಜನ ಶವವಾದರೂ, ಹಾಸನ ಧರ್ಮಸ್ಥಳ ಮಾರ್ಗದ ಶಿರಾಡಿಘಾಟ್‌‌‌ನಲ್ಲಿ ಗುಡ್ಡ ಕುಸಿದು 4 ದಿನ ರಸ್ತೆಯೇ ಬಂದ್‌ ಆಯಿತು. ಚಾರ್ಮಾಡಿಘಾಟ್‌‌ನಲ್ಲಿ ಬೆಟ್ಟಗುಡ್ಡಗಳೇ ಕುಸಿದು 2 ದಿನ ವಾಹನಗಳ ಸಂಚಾರವೇ ನಿಂತೋಗಿತ್ತು. ಪಶ್ಚಿಮ ಘಟ್ಟಗಳಲ್ಲಿ ರಣಮಳೆ ಹೊಡೆತಕ್ಕೆ 2 ವಾರದಲ್ಲಿ ಆದ ಸಾಲು ಸಾಲು ದುರಂತಗಳು ಅಷ್ಟಿಷ್ಟಲ್ಲ. ಈಗ ವಯನಾಡು ದುರಂತ ರಾಜ್ಯ ಸರ್ಕಾರವನ್ನ ಎಚ್ಚರಿಸಿದೆ. ಅದಕ್ಕೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಪಶ್ಚಿಮಘಟ್ಟಗಳಲ್ಲಿರುವ ಅಕ್ರಮ ರೆಸಾರ್ಟ್‌ಗಳು, ಅರಣ್ಯ ಒತ್ತುವರಿ ತೆರವಿಗೆ ಮೌಖಿಕ ಆದೇಶ ಕೊಟ್ಟಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

9 hours ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

12 hours ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

13 hours ago

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ

ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.

13 hours ago

ಜಾಗತಿಕ ತಾಪಮಾನಕ್ಕೆ ಪರಿಹಾರ : ವೃಕ್ಷ ಸಂವರ್ಧನೆಗೆ ಒತ್ತು

ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…

13 hours ago

ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್

ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…

21 hours ago