ಸಂಶೋಧನಾ ಕ್ಷೇತ್ರಕ್ಕೆ ಕೇಂದ್ರ ಸರ್ಕಾರವು ಹೆಚ್ಚಿನ ಉತ್ತೇಜನ | ಕೌಟಿಲ್ಯ ಆರ್ಥಿಕ ಸಮಾವೇಶದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌

October 5, 2024
9:42 PM

ದೆಹಲಿಯಲ್ಲಿ ಮೂರು ದಿನಗಳ ಕಾಲ ಕೌಟಿಲ್ಯ ಆರ್ಥಿಕ ಸಮಾವೇಶ ಆರಂಭಗೊಂಡಿದೆ. ಉದ್ಯೋಗ ಸೃಷ್ಟಿ, ಹಸಿರು ಆರ್ಥಿಕತೆ, ಕೃತಕ ಬುದ್ಧಿಮತ್ತೆ ಮತ್ತು ಸಾರ್ವಜನಿಕ ನೀತಿ ವಿನ್ಯಾಸ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಸಮಾವೇಶದಲ್ಲಿ ಚರ್ಚೆಗಳು ನಡೆಯಲಿವೆ.

ಸಮಾವೇಶದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಕಳೆದ ಒಂದು ದಶಕದಲ್ಲಿ ದೇಶದ ಆರ್ಥಿಕತೆ ಸಾಕಷ್ಟು ಅಭಿವೃದ್ಧಿಗೊಂಡಿದ್ದು, ಜಾಗತಿಕ ಮಟ್ಟದಲ್ಲಿ ಸದೃಢಗೊಂಡಿದೆ. ಯುವಜನಾಂಗವು ದೇಶದ ಪ್ರಬಲ ಶಕ್ತಿಯಾಗಿದೆ. ಶೇಕಡಾ 43ರಷ್ಟು ಯುವಜನಾಂಗವು ಆರ್ಥಿಕತೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಹೇಳಿದರು. ಸಂಶೋಧನಾ ಕ್ಷೇತ್ರಕ್ಕೆ ಕೇಂದ್ರ ಸರ್ಕಾರವು ಹೆಚ್ಚಿನ ಉತ್ತೇಜನ ನೀಡುತ್ತಿದೆ. ಜಾಗತಿಕವಾಗಿ ಸಂಶೋಧನ ಕ್ಷೇತ್ರದಲ್ಲಿ ಭಾರತ ಉತ್ತಮ ಸಾಧನೆ ಮಾಡುತ್ತಿದೆ. ಶೇಕಡ 56 ರಷ್ಟು ಆದಾಯವು ಸಂಶೋಧನಾ ಮತ್ತು ಅಭಿವೃದ್ಧಿ ಕ್ಷೇತ್ರದಿಂದ ಬರುತ್ತಿದೆ. ಅಲ್ಲದೇ, ದೇಶದ ಜನರು ಉಳಿತಾಯ ಮತ್ತು ಹೂಡಿಕೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಜಿಡಿಪಿ ಬೆಳವಣಿಗೆಯು ಸಹ ವೃದ್ಧಿಗೊಳುತ್ತಿದೆ ಎಂದು ತಿಳಿಸಿದರು. ಸಮಾವೇಶವು ಅಂತಾರಾಷ್ಟ್ರೀಯ ಹಣಕಾಸು ವಾಸ್ತುಶಿಲ್ಪವನ್ನು ಸುಧಾರಿಸುವುದು, ಹಸಿರು ಪರಿವರ್ತನೆಗೆ ಹಣಕಾಸು ಒದಗಿಸುವುದು, ಭೌಗೋಳಿಕ-ಆರ್ಥಿಕ ವಿಘಟನೆ ಮತ್ತು ಬೆಳವಣಿಗೆಯ ಪರಿಣಾಮಗಳು ಸೇರಿದಂತೆ ಹಲವಾರು ವಿಷಯಗಳ ಮೇಲೆ ಕೇಂದ್ರೀಕರಿಸುತ್ತದೆ. ‘ದಿ ಇಂಡಿಯನ್ ಎರಾ’ ವಿಷಯದ ಮೇಲೆ ನಿರ್ಮಿಸಲಾದ ಸಮಾವೇಶ, ಭಾರತದ ಆರ್ಥಿಕತೆ ಮತ್ತು ಜಾಗತಿಕ ದಕ್ಷಿಣದ ಆರ್ಥಿಕತೆಗಳನ್ನು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳನ್ನು ಚರ್ಚಿಸಲು ಸುಮಾರು 150 ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಶಿಕ್ಷಣ ತಜ್ಞರು ಮತ್ತು ನೀತಿ ನಿರೂಪಕರನ್ನು ಒಟ್ಟುಗೂಡಿಸುತ್ತದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?
September 4, 2026
10:47 PM
by: ದ ರೂರಲ್ ಮಿರರ್.ಕಾಂ
3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ
ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!
September 4, 2026
3:00 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror