ಸಂಶೋಧನಾ ಕ್ಷೇತ್ರಕ್ಕೆ ಕೇಂದ್ರ ಸರ್ಕಾರವು ಹೆಚ್ಚಿನ ಉತ್ತೇಜನ | ಕೌಟಿಲ್ಯ ಆರ್ಥಿಕ ಸಮಾವೇಶದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌

October 5, 2024
9:42 PM

ದೆಹಲಿಯಲ್ಲಿ ಮೂರು ದಿನಗಳ ಕಾಲ ಕೌಟಿಲ್ಯ ಆರ್ಥಿಕ ಸಮಾವೇಶ ಆರಂಭಗೊಂಡಿದೆ. ಉದ್ಯೋಗ ಸೃಷ್ಟಿ, ಹಸಿರು ಆರ್ಥಿಕತೆ, ಕೃತಕ ಬುದ್ಧಿಮತ್ತೆ ಮತ್ತು ಸಾರ್ವಜನಿಕ ನೀತಿ ವಿನ್ಯಾಸ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಸಮಾವೇಶದಲ್ಲಿ ಚರ್ಚೆಗಳು ನಡೆಯಲಿವೆ.

ಸಮಾವೇಶದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಕಳೆದ ಒಂದು ದಶಕದಲ್ಲಿ ದೇಶದ ಆರ್ಥಿಕತೆ ಸಾಕಷ್ಟು ಅಭಿವೃದ್ಧಿಗೊಂಡಿದ್ದು, ಜಾಗತಿಕ ಮಟ್ಟದಲ್ಲಿ ಸದೃಢಗೊಂಡಿದೆ. ಯುವಜನಾಂಗವು ದೇಶದ ಪ್ರಬಲ ಶಕ್ತಿಯಾಗಿದೆ. ಶೇಕಡಾ 43ರಷ್ಟು ಯುವಜನಾಂಗವು ಆರ್ಥಿಕತೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಹೇಳಿದರು. ಸಂಶೋಧನಾ ಕ್ಷೇತ್ರಕ್ಕೆ ಕೇಂದ್ರ ಸರ್ಕಾರವು ಹೆಚ್ಚಿನ ಉತ್ತೇಜನ ನೀಡುತ್ತಿದೆ. ಜಾಗತಿಕವಾಗಿ ಸಂಶೋಧನ ಕ್ಷೇತ್ರದಲ್ಲಿ ಭಾರತ ಉತ್ತಮ ಸಾಧನೆ ಮಾಡುತ್ತಿದೆ. ಶೇಕಡ 56 ರಷ್ಟು ಆದಾಯವು ಸಂಶೋಧನಾ ಮತ್ತು ಅಭಿವೃದ್ಧಿ ಕ್ಷೇತ್ರದಿಂದ ಬರುತ್ತಿದೆ. ಅಲ್ಲದೇ, ದೇಶದ ಜನರು ಉಳಿತಾಯ ಮತ್ತು ಹೂಡಿಕೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಜಿಡಿಪಿ ಬೆಳವಣಿಗೆಯು ಸಹ ವೃದ್ಧಿಗೊಳುತ್ತಿದೆ ಎಂದು ತಿಳಿಸಿದರು. ಸಮಾವೇಶವು ಅಂತಾರಾಷ್ಟ್ರೀಯ ಹಣಕಾಸು ವಾಸ್ತುಶಿಲ್ಪವನ್ನು ಸುಧಾರಿಸುವುದು, ಹಸಿರು ಪರಿವರ್ತನೆಗೆ ಹಣಕಾಸು ಒದಗಿಸುವುದು, ಭೌಗೋಳಿಕ-ಆರ್ಥಿಕ ವಿಘಟನೆ ಮತ್ತು ಬೆಳವಣಿಗೆಯ ಪರಿಣಾಮಗಳು ಸೇರಿದಂತೆ ಹಲವಾರು ವಿಷಯಗಳ ಮೇಲೆ ಕೇಂದ್ರೀಕರಿಸುತ್ತದೆ. ‘ದಿ ಇಂಡಿಯನ್ ಎರಾ’ ವಿಷಯದ ಮೇಲೆ ನಿರ್ಮಿಸಲಾದ ಸಮಾವೇಶ, ಭಾರತದ ಆರ್ಥಿಕತೆ ಮತ್ತು ಜಾಗತಿಕ ದಕ್ಷಿಣದ ಆರ್ಥಿಕತೆಗಳನ್ನು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳನ್ನು ಚರ್ಚಿಸಲು ಸುಮಾರು 150 ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಶಿಕ್ಷಣ ತಜ್ಞರು ಮತ್ತು ನೀತಿ ನಿರೂಪಕರನ್ನು ಒಟ್ಟುಗೂಡಿಸುತ್ತದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ
July 24, 2026
6:22 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ
July 24, 2026
5:56 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ
July 23, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ
July 22, 2026
3:55 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror