ದೆಹಲಿಯಲ್ಲಿ ಮೂರು ದಿನಗಳ ಕಾಲ ಕೌಟಿಲ್ಯ ಆರ್ಥಿಕ ಸಮಾವೇಶ ಆರಂಭಗೊಂಡಿದೆ. ಉದ್ಯೋಗ ಸೃಷ್ಟಿ, ಹಸಿರು ಆರ್ಥಿಕತೆ, ಕೃತಕ ಬುದ್ಧಿಮತ್ತೆ ಮತ್ತು ಸಾರ್ವಜನಿಕ ನೀತಿ ವಿನ್ಯಾಸ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಸಮಾವೇಶದಲ್ಲಿ ಚರ್ಚೆಗಳು ನಡೆಯಲಿವೆ.
ಸಮಾವೇಶದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕಳೆದ ಒಂದು ದಶಕದಲ್ಲಿ ದೇಶದ ಆರ್ಥಿಕತೆ ಸಾಕಷ್ಟು ಅಭಿವೃದ್ಧಿಗೊಂಡಿದ್ದು, ಜಾಗತಿಕ ಮಟ್ಟದಲ್ಲಿ ಸದೃಢಗೊಂಡಿದೆ. ಯುವಜನಾಂಗವು ದೇಶದ ಪ್ರಬಲ ಶಕ್ತಿಯಾಗಿದೆ. ಶೇಕಡಾ 43ರಷ್ಟು ಯುವಜನಾಂಗವು ಆರ್ಥಿಕತೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಹೇಳಿದರು. ಸಂಶೋಧನಾ ಕ್ಷೇತ್ರಕ್ಕೆ ಕೇಂದ್ರ ಸರ್ಕಾರವು ಹೆಚ್ಚಿನ ಉತ್ತೇಜನ ನೀಡುತ್ತಿದೆ. ಜಾಗತಿಕವಾಗಿ ಸಂಶೋಧನ ಕ್ಷೇತ್ರದಲ್ಲಿ ಭಾರತ ಉತ್ತಮ ಸಾಧನೆ ಮಾಡುತ್ತಿದೆ. ಶೇಕಡ 56 ರಷ್ಟು ಆದಾಯವು ಸಂಶೋಧನಾ ಮತ್ತು ಅಭಿವೃದ್ಧಿ ಕ್ಷೇತ್ರದಿಂದ ಬರುತ್ತಿದೆ. ಅಲ್ಲದೇ, ದೇಶದ ಜನರು ಉಳಿತಾಯ ಮತ್ತು ಹೂಡಿಕೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಜಿಡಿಪಿ ಬೆಳವಣಿಗೆಯು ಸಹ ವೃದ್ಧಿಗೊಳುತ್ತಿದೆ ಎಂದು ತಿಳಿಸಿದರು. ಸಮಾವೇಶವು ಅಂತಾರಾಷ್ಟ್ರೀಯ ಹಣಕಾಸು ವಾಸ್ತುಶಿಲ್ಪವನ್ನು ಸುಧಾರಿಸುವುದು, ಹಸಿರು ಪರಿವರ್ತನೆಗೆ ಹಣಕಾಸು ಒದಗಿಸುವುದು, ಭೌಗೋಳಿಕ-ಆರ್ಥಿಕ ವಿಘಟನೆ ಮತ್ತು ಬೆಳವಣಿಗೆಯ ಪರಿಣಾಮಗಳು ಸೇರಿದಂತೆ ಹಲವಾರು ವಿಷಯಗಳ ಮೇಲೆ ಕೇಂದ್ರೀಕರಿಸುತ್ತದೆ. ‘ದಿ ಇಂಡಿಯನ್ ಎರಾ’ ವಿಷಯದ ಮೇಲೆ ನಿರ್ಮಿಸಲಾದ ಸಮಾವೇಶ, ಭಾರತದ ಆರ್ಥಿಕತೆ ಮತ್ತು ಜಾಗತಿಕ ದಕ್ಷಿಣದ ಆರ್ಥಿಕತೆಗಳನ್ನು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳನ್ನು ಚರ್ಚಿಸಲು ಸುಮಾರು 150 ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಶಿಕ್ಷಣ ತಜ್ಞರು ಮತ್ತು ನೀತಿ ನಿರೂಪಕರನ್ನು ಒಟ್ಟುಗೂಡಿಸುತ್ತದೆ.
ಅಡಿಕೆ ನಿಷೇಧದ ತೂಗುಗತ್ತಿಯ ಮೇಲೆಯೇ ಉದ್ಯಮವನ್ನು ಮುನ್ನಡೆಸಬೇಕಾಗುತ್ತದೆ.ಇನ್ನಾದರೂ ಕಠಿಣ ಪರಿಶ್ರಮದೊಂದಿಗೆ ಅಂತಾರಾಷ್ಟ್ರೀಯ ಮಾನ್ಯತೆಯುಳ್ಳ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅಡಿಕೆ ಹಾಳೆತಟ್ಟೆ ಅಮೇರಿಕಾದಲ್ಲಿ ನಿಷೇಧ ಹೇರಲಾಗುತ್ತಿದೆ. ಹೀಗಾಗಿ ಭಾರತದಿಂದ ಸದ್ಯ ಅಮೇರಿಕಾಕ್ಕೆ ಹಾಳೆತಟ್ಟೆ…
ಈಗಿನ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡಾಗ ಕಂಡು ಬರುವ ವಿಚಾರವೆಂದರೆ ಅಡಿಕೆಗೆ ಈಗ…
ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ.…
ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…