ದೆಹಲಿಯಲ್ಲಿ ಮೂರು ದಿನಗಳ ಕಾಲ ಕೌಟಿಲ್ಯ ಆರ್ಥಿಕ ಸಮಾವೇಶ ಆರಂಭಗೊಂಡಿದೆ. ಉದ್ಯೋಗ ಸೃಷ್ಟಿ, ಹಸಿರು ಆರ್ಥಿಕತೆ, ಕೃತಕ ಬುದ್ಧಿಮತ್ತೆ ಮತ್ತು ಸಾರ್ವಜನಿಕ ನೀತಿ ವಿನ್ಯಾಸ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಸಮಾವೇಶದಲ್ಲಿ ಚರ್ಚೆಗಳು ನಡೆಯಲಿವೆ.
ಸಮಾವೇಶದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕಳೆದ ಒಂದು ದಶಕದಲ್ಲಿ ದೇಶದ ಆರ್ಥಿಕತೆ ಸಾಕಷ್ಟು ಅಭಿವೃದ್ಧಿಗೊಂಡಿದ್ದು, ಜಾಗತಿಕ ಮಟ್ಟದಲ್ಲಿ ಸದೃಢಗೊಂಡಿದೆ. ಯುವಜನಾಂಗವು ದೇಶದ ಪ್ರಬಲ ಶಕ್ತಿಯಾಗಿದೆ. ಶೇಕಡಾ 43ರಷ್ಟು ಯುವಜನಾಂಗವು ಆರ್ಥಿಕತೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಹೇಳಿದರು. ಸಂಶೋಧನಾ ಕ್ಷೇತ್ರಕ್ಕೆ ಕೇಂದ್ರ ಸರ್ಕಾರವು ಹೆಚ್ಚಿನ ಉತ್ತೇಜನ ನೀಡುತ್ತಿದೆ. ಜಾಗತಿಕವಾಗಿ ಸಂಶೋಧನ ಕ್ಷೇತ್ರದಲ್ಲಿ ಭಾರತ ಉತ್ತಮ ಸಾಧನೆ ಮಾಡುತ್ತಿದೆ. ಶೇಕಡ 56 ರಷ್ಟು ಆದಾಯವು ಸಂಶೋಧನಾ ಮತ್ತು ಅಭಿವೃದ್ಧಿ ಕ್ಷೇತ್ರದಿಂದ ಬರುತ್ತಿದೆ. ಅಲ್ಲದೇ, ದೇಶದ ಜನರು ಉಳಿತಾಯ ಮತ್ತು ಹೂಡಿಕೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಜಿಡಿಪಿ ಬೆಳವಣಿಗೆಯು ಸಹ ವೃದ್ಧಿಗೊಳುತ್ತಿದೆ ಎಂದು ತಿಳಿಸಿದರು. ಸಮಾವೇಶವು ಅಂತಾರಾಷ್ಟ್ರೀಯ ಹಣಕಾಸು ವಾಸ್ತುಶಿಲ್ಪವನ್ನು ಸುಧಾರಿಸುವುದು, ಹಸಿರು ಪರಿವರ್ತನೆಗೆ ಹಣಕಾಸು ಒದಗಿಸುವುದು, ಭೌಗೋಳಿಕ-ಆರ್ಥಿಕ ವಿಘಟನೆ ಮತ್ತು ಬೆಳವಣಿಗೆಯ ಪರಿಣಾಮಗಳು ಸೇರಿದಂತೆ ಹಲವಾರು ವಿಷಯಗಳ ಮೇಲೆ ಕೇಂದ್ರೀಕರಿಸುತ್ತದೆ. ‘ದಿ ಇಂಡಿಯನ್ ಎರಾ’ ವಿಷಯದ ಮೇಲೆ ನಿರ್ಮಿಸಲಾದ ಸಮಾವೇಶ, ಭಾರತದ ಆರ್ಥಿಕತೆ ಮತ್ತು ಜಾಗತಿಕ ದಕ್ಷಿಣದ ಆರ್ಥಿಕತೆಗಳನ್ನು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳನ್ನು ಚರ್ಚಿಸಲು ಸುಮಾರು 150 ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಶಿಕ್ಷಣ ತಜ್ಞರು ಮತ್ತು ನೀತಿ ನಿರೂಪಕರನ್ನು ಒಟ್ಟುಗೂಡಿಸುತ್ತದೆ.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…