ದೆಹಲಿಯಲ್ಲಿ ಮೂರು ದಿನಗಳ ಕಾಲ ಕೌಟಿಲ್ಯ ಆರ್ಥಿಕ ಸಮಾವೇಶ ಆರಂಭಗೊಂಡಿದೆ. ಉದ್ಯೋಗ ಸೃಷ್ಟಿ, ಹಸಿರು ಆರ್ಥಿಕತೆ, ಕೃತಕ ಬುದ್ಧಿಮತ್ತೆ ಮತ್ತು ಸಾರ್ವಜನಿಕ ನೀತಿ ವಿನ್ಯಾಸ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಸಮಾವೇಶದಲ್ಲಿ ಚರ್ಚೆಗಳು ನಡೆಯಲಿವೆ.
ಸಮಾವೇಶದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕಳೆದ ಒಂದು ದಶಕದಲ್ಲಿ ದೇಶದ ಆರ್ಥಿಕತೆ ಸಾಕಷ್ಟು ಅಭಿವೃದ್ಧಿಗೊಂಡಿದ್ದು, ಜಾಗತಿಕ ಮಟ್ಟದಲ್ಲಿ ಸದೃಢಗೊಂಡಿದೆ. ಯುವಜನಾಂಗವು ದೇಶದ ಪ್ರಬಲ ಶಕ್ತಿಯಾಗಿದೆ. ಶೇಕಡಾ 43ರಷ್ಟು ಯುವಜನಾಂಗವು ಆರ್ಥಿಕತೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಹೇಳಿದರು. ಸಂಶೋಧನಾ ಕ್ಷೇತ್ರಕ್ಕೆ ಕೇಂದ್ರ ಸರ್ಕಾರವು ಹೆಚ್ಚಿನ ಉತ್ತೇಜನ ನೀಡುತ್ತಿದೆ. ಜಾಗತಿಕವಾಗಿ ಸಂಶೋಧನ ಕ್ಷೇತ್ರದಲ್ಲಿ ಭಾರತ ಉತ್ತಮ ಸಾಧನೆ ಮಾಡುತ್ತಿದೆ. ಶೇಕಡ 56 ರಷ್ಟು ಆದಾಯವು ಸಂಶೋಧನಾ ಮತ್ತು ಅಭಿವೃದ್ಧಿ ಕ್ಷೇತ್ರದಿಂದ ಬರುತ್ತಿದೆ. ಅಲ್ಲದೇ, ದೇಶದ ಜನರು ಉಳಿತಾಯ ಮತ್ತು ಹೂಡಿಕೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಜಿಡಿಪಿ ಬೆಳವಣಿಗೆಯು ಸಹ ವೃದ್ಧಿಗೊಳುತ್ತಿದೆ ಎಂದು ತಿಳಿಸಿದರು. ಸಮಾವೇಶವು ಅಂತಾರಾಷ್ಟ್ರೀಯ ಹಣಕಾಸು ವಾಸ್ತುಶಿಲ್ಪವನ್ನು ಸುಧಾರಿಸುವುದು, ಹಸಿರು ಪರಿವರ್ತನೆಗೆ ಹಣಕಾಸು ಒದಗಿಸುವುದು, ಭೌಗೋಳಿಕ-ಆರ್ಥಿಕ ವಿಘಟನೆ ಮತ್ತು ಬೆಳವಣಿಗೆಯ ಪರಿಣಾಮಗಳು ಸೇರಿದಂತೆ ಹಲವಾರು ವಿಷಯಗಳ ಮೇಲೆ ಕೇಂದ್ರೀಕರಿಸುತ್ತದೆ. ‘ದಿ ಇಂಡಿಯನ್ ಎರಾ’ ವಿಷಯದ ಮೇಲೆ ನಿರ್ಮಿಸಲಾದ ಸಮಾವೇಶ, ಭಾರತದ ಆರ್ಥಿಕತೆ ಮತ್ತು ಜಾಗತಿಕ ದಕ್ಷಿಣದ ಆರ್ಥಿಕತೆಗಳನ್ನು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳನ್ನು ಚರ್ಚಿಸಲು ಸುಮಾರು 150 ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಶಿಕ್ಷಣ ತಜ್ಞರು ಮತ್ತು ನೀತಿ ನಿರೂಪಕರನ್ನು ಒಟ್ಟುಗೂಡಿಸುತ್ತದೆ.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…