Advertisement
ಸುದ್ದಿಗಳು

ಸಂಶೋಧನಾ ಕ್ಷೇತ್ರಕ್ಕೆ ಕೇಂದ್ರ ಸರ್ಕಾರವು ಹೆಚ್ಚಿನ ಉತ್ತೇಜನ | ಕೌಟಿಲ್ಯ ಆರ್ಥಿಕ ಸಮಾವೇಶದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌

Share

ದೆಹಲಿಯಲ್ಲಿ ಮೂರು ದಿನಗಳ ಕಾಲ ಕೌಟಿಲ್ಯ ಆರ್ಥಿಕ ಸಮಾವೇಶ ಆರಂಭಗೊಂಡಿದೆ. ಉದ್ಯೋಗ ಸೃಷ್ಟಿ, ಹಸಿರು ಆರ್ಥಿಕತೆ, ಕೃತಕ ಬುದ್ಧಿಮತ್ತೆ ಮತ್ತು ಸಾರ್ವಜನಿಕ ನೀತಿ ವಿನ್ಯಾಸ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಸಮಾವೇಶದಲ್ಲಿ ಚರ್ಚೆಗಳು ನಡೆಯಲಿವೆ.

ಸಮಾವೇಶದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಕಳೆದ ಒಂದು ದಶಕದಲ್ಲಿ ದೇಶದ ಆರ್ಥಿಕತೆ ಸಾಕಷ್ಟು ಅಭಿವೃದ್ಧಿಗೊಂಡಿದ್ದು, ಜಾಗತಿಕ ಮಟ್ಟದಲ್ಲಿ ಸದೃಢಗೊಂಡಿದೆ. ಯುವಜನಾಂಗವು ದೇಶದ ಪ್ರಬಲ ಶಕ್ತಿಯಾಗಿದೆ. ಶೇಕಡಾ 43ರಷ್ಟು ಯುವಜನಾಂಗವು ಆರ್ಥಿಕತೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಹೇಳಿದರು. ಸಂಶೋಧನಾ ಕ್ಷೇತ್ರಕ್ಕೆ ಕೇಂದ್ರ ಸರ್ಕಾರವು ಹೆಚ್ಚಿನ ಉತ್ತೇಜನ ನೀಡುತ್ತಿದೆ. ಜಾಗತಿಕವಾಗಿ ಸಂಶೋಧನ ಕ್ಷೇತ್ರದಲ್ಲಿ ಭಾರತ ಉತ್ತಮ ಸಾಧನೆ ಮಾಡುತ್ತಿದೆ. ಶೇಕಡ 56 ರಷ್ಟು ಆದಾಯವು ಸಂಶೋಧನಾ ಮತ್ತು ಅಭಿವೃದ್ಧಿ ಕ್ಷೇತ್ರದಿಂದ ಬರುತ್ತಿದೆ. ಅಲ್ಲದೇ, ದೇಶದ ಜನರು ಉಳಿತಾಯ ಮತ್ತು ಹೂಡಿಕೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಜಿಡಿಪಿ ಬೆಳವಣಿಗೆಯು ಸಹ ವೃದ್ಧಿಗೊಳುತ್ತಿದೆ ಎಂದು ತಿಳಿಸಿದರು. ಸಮಾವೇಶವು ಅಂತಾರಾಷ್ಟ್ರೀಯ ಹಣಕಾಸು ವಾಸ್ತುಶಿಲ್ಪವನ್ನು ಸುಧಾರಿಸುವುದು, ಹಸಿರು ಪರಿವರ್ತನೆಗೆ ಹಣಕಾಸು ಒದಗಿಸುವುದು, ಭೌಗೋಳಿಕ-ಆರ್ಥಿಕ ವಿಘಟನೆ ಮತ್ತು ಬೆಳವಣಿಗೆಯ ಪರಿಣಾಮಗಳು ಸೇರಿದಂತೆ ಹಲವಾರು ವಿಷಯಗಳ ಮೇಲೆ ಕೇಂದ್ರೀಕರಿಸುತ್ತದೆ. ‘ದಿ ಇಂಡಿಯನ್ ಎರಾ’ ವಿಷಯದ ಮೇಲೆ ನಿರ್ಮಿಸಲಾದ ಸಮಾವೇಶ, ಭಾರತದ ಆರ್ಥಿಕತೆ ಮತ್ತು ಜಾಗತಿಕ ದಕ್ಷಿಣದ ಆರ್ಥಿಕತೆಗಳನ್ನು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳನ್ನು ಚರ್ಚಿಸಲು ಸುಮಾರು 150 ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಶಿಕ್ಷಣ ತಜ್ಞರು ಮತ್ತು ನೀತಿ ನಿರೂಪಕರನ್ನು ಒಟ್ಟುಗೂಡಿಸುತ್ತದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

6 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

13 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

2 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

2 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 days ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

2 days ago