Advertisement
ಸುದ್ದಿಗಳು

ಯೋಗ ಪ್ರೋಟೋಕಾಲ್ ಪರಿಚಯಿಸಿದ ಆಯುಷ್ ಸಚಿವಾಲಯ | ಕೇಂದ್ರದ ಉದ್ಯೋಗಿಗಳಿಗಾಗಿ ಯೋಗ ಕುರ್ಚಿ

Share

ಒತ್ತಡವಿಲ್ಲದ ಕೆಲಸವಿಲ್ಲ. ಒಂದಲ್ಲ ಒಂದು ಒತ್ತಡದಲ್ಲೇ ಕೆಲಸ ನಿರ್ವಹಿಸಬೇಕಾಗುತ್ತದೆ. ಹಾಗಾಂತ ಒತ್ತಡ ಕಡಿಮೆ ಮಾಡಲು ಕೆಲಸದ ಸಮಯದಲ್ಲಿ ಯಾವ ಪರ್ಯಾಯಕ್ಕೂ ಮೊರೆ ಹೋಗಲು ಆಗುವುದಿಲ್ಲ.  ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ತನ್ನ ಉದ್ಯೋಗಿಗಳಿಗೆ ಒತ್ತಡವನ್ನು ಕಡಿಮೆ ಮಾಡಲು, ರಿಫ್ರೆಶ್ ಮೂಡ್​​ನಲ್ಲಿರಲು ಮತ್ತು ತಮ್ಮ ಕೆಲಸದ ಮೇಲೆ ಗಮನ ನೀಡಲು ವೈ-ಬ್ರೇಕ್ ಯೋಗ ಅಟ್ ಆಫೀಸ್ ಚೇರ್ ನ್ನು  ತೆಗೆದುಕೊಳ್ಳುವಂತೆ ಕೇಳಿಕೊಂಡಿದೆ. ಕೇಂದ್ರ ಸಿಬ್ಬಂದಿ ಸಚಿವಾಲಯವು ಹೊರಡಿಸಿರುವ ಆದೇಶದಂತೆ ಎಲ್ಲಾ ಕೇಂದ್ರ ಸರ್ಕಾರದ ಸಚಿವಾಲಯಗಳು/ಇಲಾಖೆಗಳು ಕೆಲಸದ ಸ್ಥಳದಲ್ಲಿ ಉದ್ಯೋಗಿಗಳಿಗೆ ಈ ಹೊಸ ಯೋಗ ಪ್ರೋಟೋಕಾಲ್​​ನ್ನು ಅಳವಡಿಸಿಕೊಳ್ಳಲು ಮತ್ತು ಇದರ ಬಗ್ಗೆ ಜಾಗೃತಿ ಮೂಡಿಸುವಂತೆ ಮಾಡಲು ಆದೇಶ ನೀಡಿದೆ.

ವೈ-ಬ್ರೇಕ್ ಅಟ್ ವರ್ಕ್‌ಪ್ಲೇಸ್​​ನ್ನು ಆಯುಷ್ ಸಚಿವಾಲಯವು ಪರಿಚಯಿಸಿದೆ, ಇದು ಕೆಲಸದ ಸ್ಥಳದಲ್ಲಿ ಒತ್ತಡ, ರಿಫ್ರೆಶ್ ಮೂಡ್​​ ಮತ್ತು ಕೆಲಸದ ಕಡೆ ಹೆಚ್ಚು ಗಮನ ನೀಡಲು ಅವಕಾಶ ಮಾಡುತ್ತದೆ ಎಂದು ಹೇಳಿದೆ. ಇದರಿಂದ ಉದ್ಯೋಗಿಗಳ ಆರೋಗ್ಯದ ಮೇಲೆ ಒಳ್ಳೆಯ ಪರಿಣಾಮವನ್ನು ಉಂಟು ಮಾಡುತ್ತದೆ. ಮೊರಾರ್ಜಿ ದೇಸಾಯಿ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಯೋಗ ಮತ್ತು ಸಚಿವಾಲಯದ ಸಿಬ್ಬಂದಿಗಳಿಗೆ ಒತ್ತಡ ಕೆಲಸದ ನಡುವೆ ಯೋಗಾಭ್ಯಾಸ ಮಾಡಲು ಸಾಧ್ಯವಾಗದ ಕಾರಣ ಆಯುಷ್ ಈ ಹೊಸ ವೈಶಿಷ್ಟ್ಯಗಳನ್ನು ಪರಿಚಯಸಿದೆ.

ಇದು ಕೆಲಸದಿಂದ ವಿರಾಮವನ್ನು ತೆಗೆದುಕೊಳ್ಳುವ ಸಮಯದಲ್ಲಿ ಇದನ್ನು ಮಾಡಬಹುದು. ಇದು ಕೆಲವು ಸರಳ ಯೋಗ ಅಭ್ಯಾಸಗಳನ್ನು ಒಳಗೊಂಡಿದೆ, ಇದರಲ್ಲಿ ‘ಆಸನಗಳು’ (ಭಂಗಿಗಳು), ‘ಪ್ರಾಣಾಯಾಮ’ (ಉಸಿರಾಟದ ತಂತ್ರಗಳು) ಮತ್ತು ‘ಧ್ಯಾನ’ ಗಳನ್ನು ಒಳಗೊಂಡಿದೆ. ಇದನ್ನು ಪ್ರಖ್ಯಾತ ತಜ್ಞರು ಅಭಿವೃದ್ಧಿಪಡಿಸಲಾಗಿದೆ. ಈ ಬಗ್ಗೆ ಆಯುಷ್ ಸಚಿವಾಲಯದ ವೆಬ್‌ಸೈಟ್‌ನಲ್ಲಿ ವಿವರಗಳನ್ನು ನೀಡಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

4 hours ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

6 hours ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

6 hours ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

8 hours ago

ರಬ್ಬರ್‌ ದರ 13 ವರ್ಷಗಳಲ್ಲಿ ದಾಖಲೆ ಮಟ್ಟಕ್ಕೆ..! ಆದರೆ ಯಾಕೆ ಬೆಳೆಗಾರರು ಇನ್ನೂ ಚಿಂತೆಯಲ್ಲಿ..?

ರಬ್ಬರ್‌ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…

13 hours ago