#Arecanut| ಮಳೆಗಾಲದಲ್ಲಿ ಅಡಿಕೆ ಕಾಪಾಡಿಕೊಳ್ಳುವುದೇ ಸವಾಲು | ಅಡಿಕೆಯ ಸೀಳುರೋಗಕ್ಕೆ ಕಾರಣಗಳು ಮತ್ತು ನಿರ್ವಹಣೆ

July 17, 2023
12:02 PM
ಅಡಿಕೆ ಕಾಯಿಗಳು ಮಾಗುವ ಮುನ್ನವೇ ಹಳದಿ ಬಣ್ಣಕ್ಕೆ ತಿರುಗಿ ಕಾಯಿಗಳ ತೊಟ್ಟು ಎರಡು ಹೋಳಾಗಿ ಸೀಳುತ್ತದೆ. ಅಂತಹ ಕಾಯಿಗಳು ಗೊಂಚಲಿನಿಂದ ಕೆಳಗೆ ಬೀಳುತ್ತವೆ. ಇದಕ್ಕೆ ಪರಿಹಾರಕ್ಕಾಗಿ ಕೃಷಿಕರು ಹೇಳುತ್ತಾರೆ.

ಅಡಿಕೆ, ಕರಾವಳಿ ಹಾಗೂ ಮಲೆನಾಡಿನ ಜನರ ಜೀವನಾಧಾರ. ಅನೇಕ ರೈತರ ಬದುಕು ಅಡಿಕೆ ಮೇಲೆಯೇ ಅವಲಂಬಿತವಾಗಿದೆ. ಕಳೆದ ಎರಡು ವರ್ಷಗಳಿಂದ ಅಡಿಕೆಗೆ ಬೆಲೆಯೇನೋ ಇದೆ. ಆದರೆ ಅಡಿಕೆಗೆ ವಿವಿಧ ರೋಗಗಳು ಉಲ್ಬಣಿಸುತ್ತಿರುವುದು ರೈತರನ್ನು ಕಂಗೆಡಿಸಿದೆ. ಕೃಷಿಕರಿಗೆ ಬೆಳೆ ಉಳಿಸಿಕೊಳ್ಳುವುದೇ ಸವಾಲಾಗಿ ಪರಿಣಮಿಸಿದೆ.

ಹಳದಿ ರೋಗ, ಎಲೆ ಚುಕ್ಕೆ ರೋಗ, ಸಿಂಗಾರ ಒಣಗುವಿಕೆ, ಎಳೆ ಕಾಯಿಗಳು ಬೀಳುವುದು ಹೀಗೆ.. ಹೊಸ ಹೊಸ ರೋಗಗಳು ಕಾಣಿಸಿಕೊಳ್ಳುತ್ತಿವೆ. ಈ ರೋಗಗಳಿಂದ ಮುಕ್ತಿ ಹೇಗೆ ಅನ್ನೋದು ಈವರೆಗೆ ಯಕ್ಷ ಪ್ರಶ್ನೆಯಾಗಿದೆ. ಇರುವ ಒಂದಷ್ಟು ಮದ್ದುಗಳನ್ನೇ ಸಿಂಪಡಿಸಿ ರೈತರು ಸಮಾಧಾನ ಪಟ್ಟುಕೊಳ್ಳುತ್ತಿದ್ದಾರೆ. ಇದರ ಜೊತೆಗೆ ಅಡಿಕೆಗೆ ಮಳೆಗಾಲ ಹಾಗೆ ಚಳಿಗಾಲದಲ್ಲಿ ಕಾಣಿಸಿಕೊಳ್ಳುವ ಅಂಡೋಡಕ ರೋಗವೂ ಕಾಯಿ ಉಳಿಸಿಕೊಳ್ಳಲು ಪರದಾಡುವಂತೆ ಮಾಡುತ್ತವೆ.

ಅಡಿಕೆಯಲ್ಲಿ ಅಂಡೋಡಕ ಕಾರಣಗಳು ಮತ್ತು ನಿರ್ವಹಣೆ: 

1. ಇದೊಂದು ಶಾರೀರಿಕ ವ್ಯವಸ್ಥೆಯಾಗಿದ್ದು ಪೋಷಕಾಂಶಗಳ ಕೊರತೆ ಮತ್ತು ಅಹಿತಕರ ವಾತಾವರಣದಿಂದಾಗಿ ಅಡಿಕೆ ಸೀಳುವ ಸಮಸ್ಯೆ ಎದುರಾಗುತ್ತದೆ.

2. ಇದರ ಪ್ರಮುಖ ಲಕ್ಷಣಗಳೆಂದರೆ ಕಾಯಿಗಳು ಮಾಗುವ ಮುನ್ನವೇ ಹಳದಿ ಬಣ್ಣಕ್ಕೆ ತಿರುಗಿ ಕಾಯಿಗಳ ತೊಟ್ಟು ಎರಡು ಹೋಳಾಗಿ ಸೀಳುತ್ತದೆ. ಅಂತಹ ಕಾಯಿಗಳು ಗೊಂಚಲಿನಿಂದ ಕೆಳಗೆ ಬೀಳುತ್ತದೆ.  ಎಳೆಯ ಅಡಿಕೆ ಮರಗಳಲ್ಲಿ ಅದರಲ್ಲೂ ಚಳಿಗಾಲದಲ್ಲಿ ಈ ಸಮಸ್ಯೆ ಹೆಚ್ಚು.

3.ಬೋರಾನ್ ಮತ್ತು ಪೊಟ್ಯಾಷಿಯಂ ಪೋಷಕಾಂಶದ ಕೊರತೆ ಕಾಯಿ ಸೀಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ

ನಿರ್ವಹಣೆ

1. ತೋಟದಲ್ಲಿ ನೀರು ನಿಲ್ಲದಂತೆ ಸೂಕ್ತ ಬಸಿಗಾಲುವೆಗಳನ್ನು ನಿರ್ಮಿಸಬೇಕು.

2. ರೋಗದ ಪ್ರಾರಂಭದ ಹಂತದಲ್ಲಿಯೇ ಶೇಕಡ 0.2% ಬೋರ್ಡೆಕ್ಸ್ ಮಿಶ್ರಣವನ್ನು ಸಿಂಪಡಿಸಬೇಕು.

3. ಬೋರಾನ್ ಮತ್ತು ಪೊಟ್ಯಾಶಿಯಂ ಪೋಷಕಾಂಶದ ಕೊರತೆಯಾಗದಂತೆ ನೋಡಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:

ಸಂತೋಷ್ ನಿಲುಗುಳಿ, ತೋಟಗಾರಿಕಾ ಸಲಹೆಗಾರರು, ಸಿದ್ಧಾರ್ಥ ಅಗ್ರಿ ಸಲ್ಯೂಷನ್ಸ್. 9916359007

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror