ಸುದ್ದಿಗಳು

#Arecanut| ಮಳೆಗಾಲದಲ್ಲಿ ಅಡಿಕೆ ಕಾಪಾಡಿಕೊಳ್ಳುವುದೇ ಸವಾಲು | ಅಡಿಕೆಯ ಸೀಳುರೋಗಕ್ಕೆ ಕಾರಣಗಳು ಮತ್ತು ನಿರ್ವಹಣೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಡಿಕೆ, ಕರಾವಳಿ ಹಾಗೂ ಮಲೆನಾಡಿನ ಜನರ ಜೀವನಾಧಾರ. ಅನೇಕ ರೈತರ ಬದುಕು ಅಡಿಕೆ ಮೇಲೆಯೇ ಅವಲಂಬಿತವಾಗಿದೆ. ಕಳೆದ ಎರಡು ವರ್ಷಗಳಿಂದ ಅಡಿಕೆಗೆ ಬೆಲೆಯೇನೋ ಇದೆ. ಆದರೆ ಅಡಿಕೆಗೆ ವಿವಿಧ ರೋಗಗಳು ಉಲ್ಬಣಿಸುತ್ತಿರುವುದು ರೈತರನ್ನು ಕಂಗೆಡಿಸಿದೆ. ಕೃಷಿಕರಿಗೆ ಬೆಳೆ ಉಳಿಸಿಕೊಳ್ಳುವುದೇ ಸವಾಲಾಗಿ ಪರಿಣಮಿಸಿದೆ.

Advertisement
Advertisement

ಹಳದಿ ರೋಗ, ಎಲೆ ಚುಕ್ಕೆ ರೋಗ, ಸಿಂಗಾರ ಒಣಗುವಿಕೆ, ಎಳೆ ಕಾಯಿಗಳು ಬೀಳುವುದು ಹೀಗೆ.. ಹೊಸ ಹೊಸ ರೋಗಗಳು ಕಾಣಿಸಿಕೊಳ್ಳುತ್ತಿವೆ. ಈ ರೋಗಗಳಿಂದ ಮುಕ್ತಿ ಹೇಗೆ ಅನ್ನೋದು ಈವರೆಗೆ ಯಕ್ಷ ಪ್ರಶ್ನೆಯಾಗಿದೆ. ಇರುವ ಒಂದಷ್ಟು ಮದ್ದುಗಳನ್ನೇ ಸಿಂಪಡಿಸಿ ರೈತರು ಸಮಾಧಾನ ಪಟ್ಟುಕೊಳ್ಳುತ್ತಿದ್ದಾರೆ. ಇದರ ಜೊತೆಗೆ ಅಡಿಕೆಗೆ ಮಳೆಗಾಲ ಹಾಗೆ ಚಳಿಗಾಲದಲ್ಲಿ ಕಾಣಿಸಿಕೊಳ್ಳುವ ಅಂಡೋಡಕ ರೋಗವೂ ಕಾಯಿ ಉಳಿಸಿಕೊಳ್ಳಲು ಪರದಾಡುವಂತೆ ಮಾಡುತ್ತವೆ.

ಅಡಿಕೆಯಲ್ಲಿ ಅಂಡೋಡಕ ಕಾರಣಗಳು ಮತ್ತು ನಿರ್ವಹಣೆ: 

1. ಇದೊಂದು ಶಾರೀರಿಕ ವ್ಯವಸ್ಥೆಯಾಗಿದ್ದು ಪೋಷಕಾಂಶಗಳ ಕೊರತೆ ಮತ್ತು ಅಹಿತಕರ ವಾತಾವರಣದಿಂದಾಗಿ ಅಡಿಕೆ ಸೀಳುವ ಸಮಸ್ಯೆ ಎದುರಾಗುತ್ತದೆ.

2. ಇದರ ಪ್ರಮುಖ ಲಕ್ಷಣಗಳೆಂದರೆ ಕಾಯಿಗಳು ಮಾಗುವ ಮುನ್ನವೇ ಹಳದಿ ಬಣ್ಣಕ್ಕೆ ತಿರುಗಿ ಕಾಯಿಗಳ ತೊಟ್ಟು ಎರಡು ಹೋಳಾಗಿ ಸೀಳುತ್ತದೆ. ಅಂತಹ ಕಾಯಿಗಳು ಗೊಂಚಲಿನಿಂದ ಕೆಳಗೆ ಬೀಳುತ್ತದೆ.  ಎಳೆಯ ಅಡಿಕೆ ಮರಗಳಲ್ಲಿ ಅದರಲ್ಲೂ ಚಳಿಗಾಲದಲ್ಲಿ ಈ ಸಮಸ್ಯೆ ಹೆಚ್ಚು.

Advertisement

3.ಬೋರಾನ್ ಮತ್ತು ಪೊಟ್ಯಾಷಿಯಂ ಪೋಷಕಾಂಶದ ಕೊರತೆ ಕಾಯಿ ಸೀಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ

ನಿರ್ವಹಣೆ

1. ತೋಟದಲ್ಲಿ ನೀರು ನಿಲ್ಲದಂತೆ ಸೂಕ್ತ ಬಸಿಗಾಲುವೆಗಳನ್ನು ನಿರ್ಮಿಸಬೇಕು.

2. ರೋಗದ ಪ್ರಾರಂಭದ ಹಂತದಲ್ಲಿಯೇ ಶೇಕಡ 0.2% ಬೋರ್ಡೆಕ್ಸ್ ಮಿಶ್ರಣವನ್ನು ಸಿಂಪಡಿಸಬೇಕು.

3. ಬೋರಾನ್ ಮತ್ತು ಪೊಟ್ಯಾಶಿಯಂ ಪೋಷಕಾಂಶದ ಕೊರತೆಯಾಗದಂತೆ ನೋಡಿಕೊಳ್ಳಬೇಕು.

Advertisement

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:

ಸಂತೋಷ್ ನಿಲುಗುಳಿ, ತೋಟಗಾರಿಕಾ ಸಲಹೆಗಾರರು, ಸಿದ್ಧಾರ್ಥ ಅಗ್ರಿ ಸಲ್ಯೂಷನ್ಸ್. 9916359007

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೆಳೆ ವಿಮೆಗೆ ನೋಂದಾಯಿಸಲು ರೈತರಿಗೆ ಕೃಷಿ ಇಲಾಖೆ ಸೂಚನೆ | ಭತ್ತ ಬೆಳೆಯುವವರಿಗೆ ವಿಶೇಷ ಗಮನ |

2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ…

5 hours ago

ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ

ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…

15 hours ago

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…

17 hours ago

ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಳ

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…

17 hours ago

ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ ನೀರಿನ ಪ್ರಮಾಣದಲ್ಲಿ ಇಳಿಕೆ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…

17 hours ago