Advertisement
ಸುದ್ದಿಗಳು

#Arecanut| ಮಳೆಗಾಲದಲ್ಲಿ ಅಡಿಕೆ ಕಾಪಾಡಿಕೊಳ್ಳುವುದೇ ಸವಾಲು | ಅಡಿಕೆಯ ಸೀಳುರೋಗಕ್ಕೆ ಕಾರಣಗಳು ಮತ್ತು ನಿರ್ವಹಣೆ

Share

ಅಡಿಕೆ, ಕರಾವಳಿ ಹಾಗೂ ಮಲೆನಾಡಿನ ಜನರ ಜೀವನಾಧಾರ. ಅನೇಕ ರೈತರ ಬದುಕು ಅಡಿಕೆ ಮೇಲೆಯೇ ಅವಲಂಬಿತವಾಗಿದೆ. ಕಳೆದ ಎರಡು ವರ್ಷಗಳಿಂದ ಅಡಿಕೆಗೆ ಬೆಲೆಯೇನೋ ಇದೆ. ಆದರೆ ಅಡಿಕೆಗೆ ವಿವಿಧ ರೋಗಗಳು ಉಲ್ಬಣಿಸುತ್ತಿರುವುದು ರೈತರನ್ನು ಕಂಗೆಡಿಸಿದೆ. ಕೃಷಿಕರಿಗೆ ಬೆಳೆ ಉಳಿಸಿಕೊಳ್ಳುವುದೇ ಸವಾಲಾಗಿ ಪರಿಣಮಿಸಿದೆ.

ಹಳದಿ ರೋಗ, ಎಲೆ ಚುಕ್ಕೆ ರೋಗ, ಸಿಂಗಾರ ಒಣಗುವಿಕೆ, ಎಳೆ ಕಾಯಿಗಳು ಬೀಳುವುದು ಹೀಗೆ.. ಹೊಸ ಹೊಸ ರೋಗಗಳು ಕಾಣಿಸಿಕೊಳ್ಳುತ್ತಿವೆ. ಈ ರೋಗಗಳಿಂದ ಮುಕ್ತಿ ಹೇಗೆ ಅನ್ನೋದು ಈವರೆಗೆ ಯಕ್ಷ ಪ್ರಶ್ನೆಯಾಗಿದೆ. ಇರುವ ಒಂದಷ್ಟು ಮದ್ದುಗಳನ್ನೇ ಸಿಂಪಡಿಸಿ ರೈತರು ಸಮಾಧಾನ ಪಟ್ಟುಕೊಳ್ಳುತ್ತಿದ್ದಾರೆ. ಇದರ ಜೊತೆಗೆ ಅಡಿಕೆಗೆ ಮಳೆಗಾಲ ಹಾಗೆ ಚಳಿಗಾಲದಲ್ಲಿ ಕಾಣಿಸಿಕೊಳ್ಳುವ ಅಂಡೋಡಕ ರೋಗವೂ ಕಾಯಿ ಉಳಿಸಿಕೊಳ್ಳಲು ಪರದಾಡುವಂತೆ ಮಾಡುತ್ತವೆ.

ಅಡಿಕೆಯಲ್ಲಿ ಅಂಡೋಡಕ ಕಾರಣಗಳು ಮತ್ತು ನಿರ್ವಹಣೆ: 

1. ಇದೊಂದು ಶಾರೀರಿಕ ವ್ಯವಸ್ಥೆಯಾಗಿದ್ದು ಪೋಷಕಾಂಶಗಳ ಕೊರತೆ ಮತ್ತು ಅಹಿತಕರ ವಾತಾವರಣದಿಂದಾಗಿ ಅಡಿಕೆ ಸೀಳುವ ಸಮಸ್ಯೆ ಎದುರಾಗುತ್ತದೆ.

2. ಇದರ ಪ್ರಮುಖ ಲಕ್ಷಣಗಳೆಂದರೆ ಕಾಯಿಗಳು ಮಾಗುವ ಮುನ್ನವೇ ಹಳದಿ ಬಣ್ಣಕ್ಕೆ ತಿರುಗಿ ಕಾಯಿಗಳ ತೊಟ್ಟು ಎರಡು ಹೋಳಾಗಿ ಸೀಳುತ್ತದೆ. ಅಂತಹ ಕಾಯಿಗಳು ಗೊಂಚಲಿನಿಂದ ಕೆಳಗೆ ಬೀಳುತ್ತದೆ.  ಎಳೆಯ ಅಡಿಕೆ ಮರಗಳಲ್ಲಿ ಅದರಲ್ಲೂ ಚಳಿಗಾಲದಲ್ಲಿ ಈ ಸಮಸ್ಯೆ ಹೆಚ್ಚು.

3.ಬೋರಾನ್ ಮತ್ತು ಪೊಟ್ಯಾಷಿಯಂ ಪೋಷಕಾಂಶದ ಕೊರತೆ ಕಾಯಿ ಸೀಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ

ನಿರ್ವಹಣೆ

1. ತೋಟದಲ್ಲಿ ನೀರು ನಿಲ್ಲದಂತೆ ಸೂಕ್ತ ಬಸಿಗಾಲುವೆಗಳನ್ನು ನಿರ್ಮಿಸಬೇಕು.

2. ರೋಗದ ಪ್ರಾರಂಭದ ಹಂತದಲ್ಲಿಯೇ ಶೇಕಡ 0.2% ಬೋರ್ಡೆಕ್ಸ್ ಮಿಶ್ರಣವನ್ನು ಸಿಂಪಡಿಸಬೇಕು.

3. ಬೋರಾನ್ ಮತ್ತು ಪೊಟ್ಯಾಶಿಯಂ ಪೋಷಕಾಂಶದ ಕೊರತೆಯಾಗದಂತೆ ನೋಡಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:

ಸಂತೋಷ್ ನಿಲುಗುಳಿ, ತೋಟಗಾರಿಕಾ ಸಲಹೆಗಾರರು, ಸಿದ್ಧಾರ್ಥ ಅಗ್ರಿ ಸಲ್ಯೂಷನ್ಸ್. 9916359007

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

24 hours ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

24 hours ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago