Advertisement
ಸುದ್ದಿಗಳು

#Arecanut| ಮಳೆಗಾಲದಲ್ಲಿ ಅಡಿಕೆ ಕಾಪಾಡಿಕೊಳ್ಳುವುದೇ ಸವಾಲು | ಅಡಿಕೆಯ ಸೀಳುರೋಗಕ್ಕೆ ಕಾರಣಗಳು ಮತ್ತು ನಿರ್ವಹಣೆ

Share

ಅಡಿಕೆ, ಕರಾವಳಿ ಹಾಗೂ ಮಲೆನಾಡಿನ ಜನರ ಜೀವನಾಧಾರ. ಅನೇಕ ರೈತರ ಬದುಕು ಅಡಿಕೆ ಮೇಲೆಯೇ ಅವಲಂಬಿತವಾಗಿದೆ. ಕಳೆದ ಎರಡು ವರ್ಷಗಳಿಂದ ಅಡಿಕೆಗೆ ಬೆಲೆಯೇನೋ ಇದೆ. ಆದರೆ ಅಡಿಕೆಗೆ ವಿವಿಧ ರೋಗಗಳು ಉಲ್ಬಣಿಸುತ್ತಿರುವುದು ರೈತರನ್ನು ಕಂಗೆಡಿಸಿದೆ. ಕೃಷಿಕರಿಗೆ ಬೆಳೆ ಉಳಿಸಿಕೊಳ್ಳುವುದೇ ಸವಾಲಾಗಿ ಪರಿಣಮಿಸಿದೆ.

Advertisement

ಹಳದಿ ರೋಗ, ಎಲೆ ಚುಕ್ಕೆ ರೋಗ, ಸಿಂಗಾರ ಒಣಗುವಿಕೆ, ಎಳೆ ಕಾಯಿಗಳು ಬೀಳುವುದು ಹೀಗೆ.. ಹೊಸ ಹೊಸ ರೋಗಗಳು ಕಾಣಿಸಿಕೊಳ್ಳುತ್ತಿವೆ. ಈ ರೋಗಗಳಿಂದ ಮುಕ್ತಿ ಹೇಗೆ ಅನ್ನೋದು ಈವರೆಗೆ ಯಕ್ಷ ಪ್ರಶ್ನೆಯಾಗಿದೆ. ಇರುವ ಒಂದಷ್ಟು ಮದ್ದುಗಳನ್ನೇ ಸಿಂಪಡಿಸಿ ರೈತರು ಸಮಾಧಾನ ಪಟ್ಟುಕೊಳ್ಳುತ್ತಿದ್ದಾರೆ. ಇದರ ಜೊತೆಗೆ ಅಡಿಕೆಗೆ ಮಳೆಗಾಲ ಹಾಗೆ ಚಳಿಗಾಲದಲ್ಲಿ ಕಾಣಿಸಿಕೊಳ್ಳುವ ಅಂಡೋಡಕ ರೋಗವೂ ಕಾಯಿ ಉಳಿಸಿಕೊಳ್ಳಲು ಪರದಾಡುವಂತೆ ಮಾಡುತ್ತವೆ.

ಅಡಿಕೆಯಲ್ಲಿ ಅಂಡೋಡಕ ಕಾರಣಗಳು ಮತ್ತು ನಿರ್ವಹಣೆ: 

1. ಇದೊಂದು ಶಾರೀರಿಕ ವ್ಯವಸ್ಥೆಯಾಗಿದ್ದು ಪೋಷಕಾಂಶಗಳ ಕೊರತೆ ಮತ್ತು ಅಹಿತಕರ ವಾತಾವರಣದಿಂದಾಗಿ ಅಡಿಕೆ ಸೀಳುವ ಸಮಸ್ಯೆ ಎದುರಾಗುತ್ತದೆ.

2. ಇದರ ಪ್ರಮುಖ ಲಕ್ಷಣಗಳೆಂದರೆ ಕಾಯಿಗಳು ಮಾಗುವ ಮುನ್ನವೇ ಹಳದಿ ಬಣ್ಣಕ್ಕೆ ತಿರುಗಿ ಕಾಯಿಗಳ ತೊಟ್ಟು ಎರಡು ಹೋಳಾಗಿ ಸೀಳುತ್ತದೆ. ಅಂತಹ ಕಾಯಿಗಳು ಗೊಂಚಲಿನಿಂದ ಕೆಳಗೆ ಬೀಳುತ್ತದೆ.  ಎಳೆಯ ಅಡಿಕೆ ಮರಗಳಲ್ಲಿ ಅದರಲ್ಲೂ ಚಳಿಗಾಲದಲ್ಲಿ ಈ ಸಮಸ್ಯೆ ಹೆಚ್ಚು.

3.ಬೋರಾನ್ ಮತ್ತು ಪೊಟ್ಯಾಷಿಯಂ ಪೋಷಕಾಂಶದ ಕೊರತೆ ಕಾಯಿ ಸೀಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ

ನಿರ್ವಹಣೆ

1. ತೋಟದಲ್ಲಿ ನೀರು ನಿಲ್ಲದಂತೆ ಸೂಕ್ತ ಬಸಿಗಾಲುವೆಗಳನ್ನು ನಿರ್ಮಿಸಬೇಕು.

2. ರೋಗದ ಪ್ರಾರಂಭದ ಹಂತದಲ್ಲಿಯೇ ಶೇಕಡ 0.2% ಬೋರ್ಡೆಕ್ಸ್ ಮಿಶ್ರಣವನ್ನು ಸಿಂಪಡಿಸಬೇಕು.

3. ಬೋರಾನ್ ಮತ್ತು ಪೊಟ್ಯಾಶಿಯಂ ಪೋಷಕಾಂಶದ ಕೊರತೆಯಾಗದಂತೆ ನೋಡಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:

ಸಂತೋಷ್ ನಿಲುಗುಳಿ, ತೋಟಗಾರಿಕಾ ಸಲಹೆಗಾರರು, ಸಿದ್ಧಾರ್ಥ ಅಗ್ರಿ ಸಲ್ಯೂಷನ್ಸ್. 9916359007

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

21 hours ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

1 day ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

1 day ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

1 day ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

1 day ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

2 days ago