Advertisement
ಸುದ್ದಿಗಳು

#Arecanut| ಮಳೆಗಾಲದಲ್ಲಿ ಅಡಿಕೆ ಕಾಪಾಡಿಕೊಳ್ಳುವುದೇ ಸವಾಲು | ಅಡಿಕೆಯ ಸೀಳುರೋಗಕ್ಕೆ ಕಾರಣಗಳು ಮತ್ತು ನಿರ್ವಹಣೆ

Share

ಅಡಿಕೆ, ಕರಾವಳಿ ಹಾಗೂ ಮಲೆನಾಡಿನ ಜನರ ಜೀವನಾಧಾರ. ಅನೇಕ ರೈತರ ಬದುಕು ಅಡಿಕೆ ಮೇಲೆಯೇ ಅವಲಂಬಿತವಾಗಿದೆ. ಕಳೆದ ಎರಡು ವರ್ಷಗಳಿಂದ ಅಡಿಕೆಗೆ ಬೆಲೆಯೇನೋ ಇದೆ. ಆದರೆ ಅಡಿಕೆಗೆ ವಿವಿಧ ರೋಗಗಳು ಉಲ್ಬಣಿಸುತ್ತಿರುವುದು ರೈತರನ್ನು ಕಂಗೆಡಿಸಿದೆ. ಕೃಷಿಕರಿಗೆ ಬೆಳೆ ಉಳಿಸಿಕೊಳ್ಳುವುದೇ ಸವಾಲಾಗಿ ಪರಿಣಮಿಸಿದೆ.

ಹಳದಿ ರೋಗ, ಎಲೆ ಚುಕ್ಕೆ ರೋಗ, ಸಿಂಗಾರ ಒಣಗುವಿಕೆ, ಎಳೆ ಕಾಯಿಗಳು ಬೀಳುವುದು ಹೀಗೆ.. ಹೊಸ ಹೊಸ ರೋಗಗಳು ಕಾಣಿಸಿಕೊಳ್ಳುತ್ತಿವೆ. ಈ ರೋಗಗಳಿಂದ ಮುಕ್ತಿ ಹೇಗೆ ಅನ್ನೋದು ಈವರೆಗೆ ಯಕ್ಷ ಪ್ರಶ್ನೆಯಾಗಿದೆ. ಇರುವ ಒಂದಷ್ಟು ಮದ್ದುಗಳನ್ನೇ ಸಿಂಪಡಿಸಿ ರೈತರು ಸಮಾಧಾನ ಪಟ್ಟುಕೊಳ್ಳುತ್ತಿದ್ದಾರೆ. ಇದರ ಜೊತೆಗೆ ಅಡಿಕೆಗೆ ಮಳೆಗಾಲ ಹಾಗೆ ಚಳಿಗಾಲದಲ್ಲಿ ಕಾಣಿಸಿಕೊಳ್ಳುವ ಅಂಡೋಡಕ ರೋಗವೂ ಕಾಯಿ ಉಳಿಸಿಕೊಳ್ಳಲು ಪರದಾಡುವಂತೆ ಮಾಡುತ್ತವೆ.

ಅಡಿಕೆಯಲ್ಲಿ ಅಂಡೋಡಕ ಕಾರಣಗಳು ಮತ್ತು ನಿರ್ವಹಣೆ: 

1. ಇದೊಂದು ಶಾರೀರಿಕ ವ್ಯವಸ್ಥೆಯಾಗಿದ್ದು ಪೋಷಕಾಂಶಗಳ ಕೊರತೆ ಮತ್ತು ಅಹಿತಕರ ವಾತಾವರಣದಿಂದಾಗಿ ಅಡಿಕೆ ಸೀಳುವ ಸಮಸ್ಯೆ ಎದುರಾಗುತ್ತದೆ.

2. ಇದರ ಪ್ರಮುಖ ಲಕ್ಷಣಗಳೆಂದರೆ ಕಾಯಿಗಳು ಮಾಗುವ ಮುನ್ನವೇ ಹಳದಿ ಬಣ್ಣಕ್ಕೆ ತಿರುಗಿ ಕಾಯಿಗಳ ತೊಟ್ಟು ಎರಡು ಹೋಳಾಗಿ ಸೀಳುತ್ತದೆ. ಅಂತಹ ಕಾಯಿಗಳು ಗೊಂಚಲಿನಿಂದ ಕೆಳಗೆ ಬೀಳುತ್ತದೆ.  ಎಳೆಯ ಅಡಿಕೆ ಮರಗಳಲ್ಲಿ ಅದರಲ್ಲೂ ಚಳಿಗಾಲದಲ್ಲಿ ಈ ಸಮಸ್ಯೆ ಹೆಚ್ಚು.

3.ಬೋರಾನ್ ಮತ್ತು ಪೊಟ್ಯಾಷಿಯಂ ಪೋಷಕಾಂಶದ ಕೊರತೆ ಕಾಯಿ ಸೀಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ

ನಿರ್ವಹಣೆ

1. ತೋಟದಲ್ಲಿ ನೀರು ನಿಲ್ಲದಂತೆ ಸೂಕ್ತ ಬಸಿಗಾಲುವೆಗಳನ್ನು ನಿರ್ಮಿಸಬೇಕು.

2. ರೋಗದ ಪ್ರಾರಂಭದ ಹಂತದಲ್ಲಿಯೇ ಶೇಕಡ 0.2% ಬೋರ್ಡೆಕ್ಸ್ ಮಿಶ್ರಣವನ್ನು ಸಿಂಪಡಿಸಬೇಕು.

3. ಬೋರಾನ್ ಮತ್ತು ಪೊಟ್ಯಾಶಿಯಂ ಪೋಷಕಾಂಶದ ಕೊರತೆಯಾಗದಂತೆ ನೋಡಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:

ಸಂತೋಷ್ ನಿಲುಗುಳಿ, ತೋಟಗಾರಿಕಾ ಸಲಹೆಗಾರರು, ಸಿದ್ಧಾರ್ಥ ಅಗ್ರಿ ಸಲ್ಯೂಷನ್ಸ್. 9916359007

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

16 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

1 day ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

4 days ago