ಹವಾಮಾನ ಇಲಾಖೆ | 22-12-2025 | ಚಳಿ ಮುಂದುವರಿಕೆ, ತೇವಾಂಶ ಹೆಚ್ಚಾದರೆ ಮಳೆಯ ಸಾಧ್ಯತೆ…

December 22, 2025
1:02 PM

23.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ರಾಜ್ಯದಾದ್ಯಂತ ಒಣ ಹವೆ, ಚಳಿ ಮುಂದುವರಿಯುವ ಮುನ್ಸೂಚನೆ ಇದೆ.

ಡಿಸೆಂಬರ್ 26 ರಂದು ಉತ್ತರ ಶ್ರೀಲಂಕಾ ಕೇಂದ್ರವಾಗಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಸಾಧ್ಯತೆಗಳಿರುವುದರಿಂದ ತಮಿಳುನಾಡು ರಾಜ್ಯದಲ್ಲಿ ಮೋಡದ ವಾತಾವರಣ ಉಂಟಾಗುವ ಸಾಧ್ಯತೆಗಳಿವೆ. ಇದರ ಪರಿಣಾಮದಿಂದ ಕರ್ನಾಟಕದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಾದ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಡಿಸೆಂಬರ್ 26ರ ನಂತರ ಚಳಿಯ ಪ್ರಮಾಣವು ಸ್ವಲ್ಪ ಕಡಿಮೆಯಾಗಿ ಡಿಸೆಂಬರ್ 29ರಿಂದ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಆದರೆ ಉತ್ತರ ಒಳನಾಡು ಭಾಗಗಳಲ್ಲಿ ಚಳಿ ಮುಂದುವರಿಯುವ ಲಕ್ಷಣಗಳಿವೆ. ದಕ್ಷಿಣ ಕರ್ನಾಟಕದಲ್ಲಿ ಮಳೆಯ ಸಾಧ್ಯತೆಯ ಬಗ್ಗೆ ಡಿಸೆಂಬರ್ 26ರ ನಂತರ ನೋಡಬೇಕಾಗಿದೆ. ವಾತಾವರಣದಲ್ಲಿ ತೇವಾಂಶ ಹೆಚ್ಚಾದರೆ ಮಾತ್ರ ಮಳೆಯ ಸಾಧ್ಯತೆಗಳಿವೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ
August 2, 2026
9:50 PM
by: ದ ರೂರಲ್ ಮಿರರ್.ಕಾಂ
ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ
August 2, 2026
9:41 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು
August 2, 2026
8:39 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?
August 2, 2026
6:59 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror