#SwachhataHiSeva | ರಾಜ್ಯದ ಗಮನ ಸೆಳೆದ ಗುತ್ತಿಗಾರಿನ ಸ್ವಚ್ಛತಾ ಅಭಿಯಾನ | 12 ವಾರಗಳಿಂದ ನಿರಂತವಾಗಿ ನಡೆಯುತ್ತಿರುವ ಸ್ವಚ್ಛತಾ ಟಾಸ್ಕ್‌ಫೋರ್ಸ್‌ ಕೆಲಸ | ಗ್ರಾಮೀಣ ಭಾಗದ ಸ್ವಚ್ಛತಾ ಕಾರ್ಯ ಮಾದರಿಯಾಗಲಿ |

September 23, 2023
11:23 AM
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ಕಳೆದ 12 ವಾರಗಳಿಂದ ನಿರಂತರವಾಗಿ ಪ್ರತೀ ಗುರುವಾರ ಸ್ವಚ್ಛತಾ ಅಭಿಯಾನ ನಡೆಯುತ್ತಿದೆ. ಈ ಅಭಿಯಾನ ಇದೀಗ ರಾಜ್ಯದ ಗಮನ ಸೆಳೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ಕಳೆದ 12 ವಾರಗಳಿಂದ ನಿರಂತರವಾಗಿ ಪ್ರತೀ ಗುರುವಾರ ಸ್ವಚ್ಛತಾ ಅಭಿಯಾನ ನಡೆಯುತ್ತಿದೆ. ಗುತ್ತಿಗಾರು ಗ್ರಾಪಂ ಹಾಗೂ ಸಂಜೀವಿನಿ ಓಕ್ಕೂಟ ಮತ್ತು ಗುತ್ತಿಗಾರು ವರ್ತಕ ಸಂಘ ಹಾಗೂ ಇತರ ಸಂಘಸಂಸ್ಥೆಗಳ ಸಹಕಾರದಿಂದ ನಿರಂತರವಾಗಿ ಪ್ರತೀ ಗುರುವಾರ ಸ್ಚಚ್ಛತಾ ಜಾಗೃತಿ. ಅಭಿಯಾನ ನಡೆಯುತ್ತಿದೆ. ಇದೀಗ ವಾರ್ಡ್‌ ಮಟ್ಟದವರೆಗೂ ಈ ಅಭಿಯಾನ ವಿಸ್ತರಣೆ ಮಾಡಲಾಗಿದೆ. ಈ ನಡುವೆ ಶುಕ್ರವಾರ ನಾಲ್ಕೂರು ವಾರ್ಡ್‌ನ ಎಲ್ಲರೂ ಒಂದಾಗಿ ಸ್ವಚ್ಛತಾ ಅಭಿಯಾನ ನಡೆಸಿದರು. ಇದೀಗ ಈ ಸ್ವಚ್ಛತಾ ಕಾರ್ಯವು ರಾಜ್ಯದ ಗಮನ ಸೆಳೆದಿದೆ.

 

ಗುತ್ತಿಗಾರು ಗ್ರಾಮವನ್ನು ಸ್ವಚ್ಛ ಗ್ರಾಮವನ್ನಾಗಿ ಮಾಡುವುದು ಹಾಗೂ ಪ್ಲಾಸ್ಟಿಕ್‌ ಮುಕ್ತ ಗ್ರಾಮ ಮಾಡುವ ಉದ್ದೇಶದಿಂದ ಚಟುವಟಿಕೆಗೆ ಇಳಿದ ಸಂಘಸಂಸ್ಥೆಗಳು ಗ್ರಾಪಂ ಸಹಕಾರದೊಂದಿಗೆ ಸ್ವಚ್ಛ ಗುತ್ತಿಗಾರು ಟಾಸ್ಕ್‌ ಫೋರ್ಸ್‌ ರಚನೆ ಮಾಡಿ ಸ್ವಚ್ಛ ಗುತ್ತಿಗಾರು ಅಭಿಯಾನದ ಮೂಲಕ ಗುತ್ತಿಗಾರು ಪೇಟೆಯಲ್ಲಿ ಕಳೆದ 12 ವಾರಗಳಿಂದ ಸ್ವಚ್ಛತಾ ಜಾಗೃತಿ ಅಭಿಯಾನವನ್ನು ನಡೆಸಲಾಗುತ್ತಿದೆ. ನಿರಂತರವಾಗಿ ನಡೆದ ಸ್ವಚ್ಛತಾ ಅಭಿಯಾನದ ಜಾಗೃತಿಯ ಮುಂದಿನ ಭಾಗವಾಗಿ ವಾರ್ಡ್‌ ಮಟ್ಟದಲ್ಲೂ ಸ್ವಚ್ಛತಾ ಜಾಗೃತಿ ನಡೆಸಲಾಗುತ್ತಿದೆ.

ಇದೀಗ ವಾರ್ಡ್‌ ಮಟ್ಟದಲ್ಲಿ ನಡೆದ ಸ್ವಚ್ಛತಾ ಅಭಿಯಾನವು ರಾಜ್ಯಮಟ್ಟದ ಗಮನ ಸೆಳೆದಿದೆ. ಎಲ್ಲಾ ವಾರ್ಡ್‌ ಗಳಲ್ಲೂ ಸ್ವಚ್ಛತೆಯನ್ನು ನಡೆಸುವ ಮೂಲಕ ಜಾಗೃತಿ ಮೂಡಿಸುವುದು ಇದರ ಉದ್ದೇಶವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡು ದೇಶದಲ್ಲಿ ನಡೆಯುತ್ತಿರುವ ಸ್ವಚ್ಛತಾ ಹೀ ಸೇವಾ ಅಭಿಯಾನವನ್ನು ಗ್ರಾಮೀಣ ಮಟ್ಟದಲ್ಲೂ ಯಶಸ್ವಿಯಾಗಿ ನಡೆಸುತ್ತಿರುವುದು  ಗಮನ ಸೆಳೆದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ
ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror