Advertisement
MIRROR FOCUS

#SwachhataHiSeva | ರಾಜ್ಯದ ಗಮನ ಸೆಳೆದ ಗುತ್ತಿಗಾರಿನ ಸ್ವಚ್ಛತಾ ಅಭಿಯಾನ | 12 ವಾರಗಳಿಂದ ನಿರಂತವಾಗಿ ನಡೆಯುತ್ತಿರುವ ಸ್ವಚ್ಛತಾ ಟಾಸ್ಕ್‌ಫೋರ್ಸ್‌ ಕೆಲಸ | ಗ್ರಾಮೀಣ ಭಾಗದ ಸ್ವಚ್ಛತಾ ಕಾರ್ಯ ಮಾದರಿಯಾಗಲಿ |

Share

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ಕಳೆದ 12 ವಾರಗಳಿಂದ ನಿರಂತರವಾಗಿ ಪ್ರತೀ ಗುರುವಾರ ಸ್ವಚ್ಛತಾ ಅಭಿಯಾನ ನಡೆಯುತ್ತಿದೆ. ಗುತ್ತಿಗಾರು ಗ್ರಾಪಂ ಹಾಗೂ ಸಂಜೀವಿನಿ ಓಕ್ಕೂಟ ಮತ್ತು ಗುತ್ತಿಗಾರು ವರ್ತಕ ಸಂಘ ಹಾಗೂ ಇತರ ಸಂಘಸಂಸ್ಥೆಗಳ ಸಹಕಾರದಿಂದ ನಿರಂತರವಾಗಿ ಪ್ರತೀ ಗುರುವಾರ ಸ್ಚಚ್ಛತಾ ಜಾಗೃತಿ. ಅಭಿಯಾನ ನಡೆಯುತ್ತಿದೆ. ಇದೀಗ ವಾರ್ಡ್‌ ಮಟ್ಟದವರೆಗೂ ಈ ಅಭಿಯಾನ ವಿಸ್ತರಣೆ ಮಾಡಲಾಗಿದೆ. ಈ ನಡುವೆ ಶುಕ್ರವಾರ ನಾಲ್ಕೂರು ವಾರ್ಡ್‌ನ ಎಲ್ಲರೂ ಒಂದಾಗಿ ಸ್ವಚ್ಛತಾ ಅಭಿಯಾನ ನಡೆಸಿದರು. ಇದೀಗ ಈ ಸ್ವಚ್ಛತಾ ಕಾರ್ಯವು ರಾಜ್ಯದ ಗಮನ ಸೆಳೆದಿದೆ.

 

ಗುತ್ತಿಗಾರು ಗ್ರಾಮವನ್ನು ಸ್ವಚ್ಛ ಗ್ರಾಮವನ್ನಾಗಿ ಮಾಡುವುದು ಹಾಗೂ ಪ್ಲಾಸ್ಟಿಕ್‌ ಮುಕ್ತ ಗ್ರಾಮ ಮಾಡುವ ಉದ್ದೇಶದಿಂದ ಚಟುವಟಿಕೆಗೆ ಇಳಿದ ಸಂಘಸಂಸ್ಥೆಗಳು ಗ್ರಾಪಂ ಸಹಕಾರದೊಂದಿಗೆ ಸ್ವಚ್ಛ ಗುತ್ತಿಗಾರು ಟಾಸ್ಕ್‌ ಫೋರ್ಸ್‌ ರಚನೆ ಮಾಡಿ ಸ್ವಚ್ಛ ಗುತ್ತಿಗಾರು ಅಭಿಯಾನದ ಮೂಲಕ ಗುತ್ತಿಗಾರು ಪೇಟೆಯಲ್ಲಿ ಕಳೆದ 12 ವಾರಗಳಿಂದ ಸ್ವಚ್ಛತಾ ಜಾಗೃತಿ ಅಭಿಯಾನವನ್ನು ನಡೆಸಲಾಗುತ್ತಿದೆ. ನಿರಂತರವಾಗಿ ನಡೆದ ಸ್ವಚ್ಛತಾ ಅಭಿಯಾನದ ಜಾಗೃತಿಯ ಮುಂದಿನ ಭಾಗವಾಗಿ ವಾರ್ಡ್‌ ಮಟ್ಟದಲ್ಲೂ ಸ್ವಚ್ಛತಾ ಜಾಗೃತಿ ನಡೆಸಲಾಗುತ್ತಿದೆ.

ಇದೀಗ ವಾರ್ಡ್‌ ಮಟ್ಟದಲ್ಲಿ ನಡೆದ ಸ್ವಚ್ಛತಾ ಅಭಿಯಾನವು ರಾಜ್ಯಮಟ್ಟದ ಗಮನ ಸೆಳೆದಿದೆ. ಎಲ್ಲಾ ವಾರ್ಡ್‌ ಗಳಲ್ಲೂ ಸ್ವಚ್ಛತೆಯನ್ನು ನಡೆಸುವ ಮೂಲಕ ಜಾಗೃತಿ ಮೂಡಿಸುವುದು ಇದರ ಉದ್ದೇಶವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡು ದೇಶದಲ್ಲಿ ನಡೆಯುತ್ತಿರುವ ಸ್ವಚ್ಛತಾ ಹೀ ಸೇವಾ ಅಭಿಯಾನವನ್ನು ಗ್ರಾಮೀಣ ಮಟ್ಟದಲ್ಲೂ ಯಶಸ್ವಿಯಾಗಿ ನಡೆಸುತ್ತಿರುವುದು  ಗಮನ ಸೆಳೆದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

58 minutes ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

3 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

5 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

6 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

18 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

20 hours ago