ದೇಶದ ಆರ್ಥಿಕ ಸ್ಥಿತಿ ಬಲವರ್ಧನೆಗೆ ಸಣ್ಣ ಕೈಗಾರಿಕೆಗಳ ಕೊಡುಗೆ ಅಪಾರ | ನಿರ್ಮಲಾ ಸೀತಾರಾಮನ್‌ |

November 10, 2024
10:00 AM

ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿ ಸೇರಿದಂತೆ ದಕ್ಷಿಣ ಪ್ರದೇಶದ 10 ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ ಕಾರ್ಯಕ್ಷಮತೆ ಕುರಿತಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರಿನಲ್ಲಿ ಸಭೆ ನಡೆಸಿದರು.

Advertisement
Advertisement
Advertisement
Advertisement

ಸಭೆಯಲ್ಲಿ ಗ್ರಾಮೀಣ ಆರ್ಥಿಕತೆಯನ್ನು ಬೆಂಬಲಿಸುವಲ್ಲಿ ಗ್ರಾಮೀಣ ಬ್ಯಾಂಕ್‌ಗಳ ಕಾರ್ಯಕ್ಷಮತೆಯನ್ನು ನಿರ್ಮಲಾ ಸೀತಾರಾಮನ್ ಪರಿಶೀಲನೆ ನಡೆಸಿದರು. ಬಳಿಕ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೊಂದಿಗೆ ನಿರ್ಮಲಾ ಸೀತಾರಾಮನ್ ಬೆಂಗಳೂರಿನ ಪೀಣ್ಯಾ ಕೈಗಾರಿಕಾ ಪ್ರದೇಶದಲ್ಲಿರುವ ಎಂ.ಎಸ್.ಎಂ.ಇ ಘಟಕಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

Advertisement

ಈ ವೇಳೆ ಮಾತನಾಡಿದ ಅವರು, ದೇಶದ ಆರ್ಥಿಕ ಸ್ಥಿತಿ ಬಲವರ್ಧನೆಗೆ ಕರ್ನಾಟಕದ 35 ಲಕ್ಷ ಎಂಎಸ್‌ಎಂಇಗಳ ಕೊಡುಗೆ ಅಪಾರ ಎಂದು ಶ್ಲಾಘಿಸಿದರು. ಪೀಣ್ಯಾ ಕೈಗಾರಿಕೆಗಳ ಒಕ್ಕೂಟ ಸುಮಾರು 7400 ಎಂಎಸ್‌ಎಂಇ ಸದಸ್ಯತ್ವವನ್ನು ಹೊಂದಿರುವ ಅತಿದೊಡ್ಡ ಸೂಕ್ಷ್ಮ, ಸಣ್ಣ, ಮಧ್ಯಮಗಳ ಸಂಘಗಳಲ್ಲಿ ಒಂದಾಗಿದೆ. ಇದಕ್ಕೂ ಮೊದಲು ನಿರ್ಮಲಾ ಸೀತಾರಾಮನ್ ಬೆಂಗಳೂರಿನ ಖಾಸಗಿ ವಿಶ್ವ ವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ
February 19, 2025
11:16 PM
by: The Rural Mirror ಸುದ್ದಿಜಾಲ
ಮುಳ್ಳಯ್ಯನಗಿರಿ ಪರ್ವತ ಶ್ರೇಣಿಯಲ್ಲಿ ಕಾಡ್ಗಿಚ್ಚು | 25 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ
February 19, 2025
7:32 AM
by: The Rural Mirror ಸುದ್ದಿಜಾಲ
ತುಮಕೂರು |ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಸೂಚನೆ
February 19, 2025
7:27 AM
by: The Rural Mirror ಸುದ್ದಿಜಾಲ
ಕೃಷಿ ಪಂಪ್‌ಸೆಟ್‌ಗೆ 7 ತಾಸು ವಿದ್ಯುತ್ ಪೂರೈಕೆಗೆ ರಾಜ್ಯ ಸರ್ಕಾರ ಬದ್ಧ | ಇಂಧನ ಸಚಿವ ಕೆ.ಜೆ. ಜಾರ್ಜ್
February 19, 2025
7:22 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror